ಬಘೀರಾ ಮುಹೂರ್ತ; KGF ನಿರ್ದೇಶಕ ಪ್ರಶಾಂತ್ ನೀಲ್ ಕಥೆಗೆ ಶ್ರೀಮುರಳಿ ಹೀರೋ

First Published May 20, 2022, 12:58 PM IST

ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಹೊಸ ಸಿನಿಮಾ ಬಘೀರಾ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ. ಬಘೀರಾ ಸಿನಿಮಾ ಅನೌನ್ಸ್ ಮಾಡಿ ಅನೇಕ ತಿಂಗಳೇ ಕಳೆದಿತ್ತು. ಕೊನೆಗೂ ಮುಹೂರ್ತ ನೆರವೇರುವ ಮೂಲಕ ಚಿತ್ರಕ್ಕೆ ಚಾಲನೆ ಸಿಕ್ಕಿದೆ.

ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ನಟನೆಯ ಹೊಸ ಸಿನಿಮಾ ಬಘೀರಾ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ. ಬಘೀರಾ ಸಿನಿಮಾ ಅನೌನ್ಸ್ ಮಾಡಿ ಅನೇಕ ತಿಂಗಳೇ ಕಳೆದಿತ್ತು. ಕೊನೆಗೂ ಮುಹೂರ್ತ ನೆರವೇರುವ ಮೂಲಕ ಚಿತ್ರಕ್ಕೆ ಚಾಲನೆ ಸಿಕ್ಕಿದೆ.

ಅಂದಹಾಗೆ ಶ್ರೀಮುರಳಿ ಹೊಸ ಸಿನಿಮಾ ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ನಲ್ಲಿ ಮೂಡಿಬರುತ್ತಿದೆ. ವಿಜಯ್ ಕಿರಗಂದೂರು ಅವರ ನಿರ್ಮಾಣದಲ್ಲಿ ಬರ್ತಿರುವ ಬಘೀರಾ ಚಿತ್ರಕ್ಕೆ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಚಿತ್ರಕಥೆ ಬರೆದಿದ್ದಾರೆ.

ಉಗ್ರಂ ಮೂಲಕ ಧೂಳ್ ಎಬ್ಬಿಸಿದ್ದ ಪ್ರಶಾಂತ್ ನೀಲ್ ಮತ್ತು ಶ್ರೀಮುರಳಿ ಇದೀಗ ಬಘೀರಾ ಮೂಲಕ ಮತ್ತೆ ಒಂದಾಗಿದ್ದಾರೆ. ಹಾಗಾಗಿ ಸಿನಿಮಾದ ಮೇಲೆ ನಿರೀಕ್ಷೆ ದುಪ್ಪಟ್ಟಾಗಿದೆ. ಅಂದಹಾಗೆ ಸಿನಿಮಾಗೆ ಡಾ.ಸೂರಿ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಘೀರಾ ಪಯಣ ಇಂದಿನಿಂದ ಶುರು. ರೋರಿಂಗ್ ಸ್ಟಾರ್ ಶ್ರೀಮುರಳಿ, ಡಾ.ಸೂರಿ ಅವರ ನಿರ್ದೇಶನದಲ್ಲಿ, ಪ್ರಶಾಂತ್ ನೀಲ್ ಅವರ ಚಿತ್ರಕತೆಯೊಂದಿಗೆ ಇದು ಮೂಡಿಬರಲಿದೆ. ತಾರಾಬಳಗಕ್ಕೆ ನಿಮ್ಮ ಆಶೀರ್ವಾದವಿರಲಿ ಎಂದು ಹೇಳಿದ್ದಾರೆ.

ಬಘೀರಾ ಸಿನಿಮಾದ ಪೋಸ್ಟರ್ ಈಗಾಗಲೇ ಬಿಡುಗಡೆ ಮಾಡಲಾಗಿತ್ತು. ಸಿನಿಮಾ ಅನೌನ್ಸ್ ಮಾಡುವ ಸಮಯದಲ್ಲಿ ಬಘೀರಾನ ಲುಕ್ ರಿವೀಲ್ ಆಗಿತ್ತು. ಪೋಸ್ಟರ್ ಶೇರ್ ಮಾಡಿ ಸಿನಿಮಾತಂಡ 'ಇಡೀ ಸಮಾಜವೇ ಅರಣ್ಯವಾದಾಗ ಒಬ್ಬನೇ ಒಬ್ಬ ಮಾತ್ರ ನ್ಯಾಯಕ್ಕಾಗಿ ಹೋರಾಡುತ್ತಾನೆ' ಎಂದು ಕ್ಯಾಪ್ಷನ್ ನೀಡಲಾಗಿತ್ತು.

srimurali

ಪ್ರಶಾಂತ್ ಮತ್ತು ಹೊಂಬಾಳೆ ಫಿಲ್ಮ್ಸ್ ಸದ್ಯ ಕೆಜಿಎಫ್-2 ಸಿನಿಮಾದ ಭರ್ಜರಿ ಸಕ್ಸಸ್ ನಲ್ಲಿದೆ. ಈ ಸಿನಿಮಾ 1200 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಮಾಡಿದೆ. ಅತೀ ಹೆಚ್ಚು ಕಲೆಕ್ಷನ್ ಮಾಡಿದ ಮಾಡಿದ ಸಿನಿಮಾಗಳಲ್ಲಿ ಕೆಜಿಎಫ್-2 ಮೂರನೇ ಸ್ಥಾನದಲ್ಲಿದೆ.

ಹೊಂಬಾಳೆ ಫಿಲ್ಮ್ಸ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದೆ. ಈಗಾಗಲೇ ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ ನಲ್ಲಿ ಸಲಾರ್ ಸಿನಿಮಾ ಸಿದ್ಧವಾಗುತ್ತಿದೆ. ರಿಷಬ್ ಶೆಟ್ಟಿ ನಟನೆಯ ಕಾಂತಾರ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ, ಜಗ್ಗೇಶ್ ಮತ್ತು ಸಂತೋಷ್ ಆನಂದ್ ರಾಮ್ ಕಾಂಬಿನೇಷನ್ ನ ರಾಘವೇಂದ್ರ ಸ್ಟೋರ್ಸ್, ಯುವರಾಜ್ ಕುಮಾರ್ ಮತ್ತು ಸಂತೋಷ್ ಆನಂದ್ ರಾಮ್ ಅವರ ಹೊಸ ಸಿನಿಮಾ ಹಾಗೂ ಸೂರರೈ ಪೊಟ್ರು ಸಿನಿಮಾ ಖ್ಯಾತಿಯ ಸುಧಾ ಕೊಂಗಾರ ಅವರ ಸಿನಿಮಾವಿದೆ.

click me!