ಧಾರವಾಡಕ್ಕೆ ಬಂದ ತೆಲುಗು ಖ್ಯಾತ ನಟ, ಕನ್ನಡಿಗ ಶ್ರೀಕಾಂತ: ಗೆಳೆಯನ ಮನೆಯಲ್ಲಿ ಉಪಹಾರ ಸೇವನೆ..!

Published : Sep 15, 2024, 12:13 PM IST

ಧಾರವಾಡ(ಸೆ.15):  ತೆಲುಗು ಚಿತ್ರರಂಗದ ಖ್ಯಾತ ನಟ, ಕನ್ನಡಿಗ ಶ್ರೀಕಾಂತ ಅವರು ಇಂದು(ಭಾನುವಾರ) ಧಾರವಾಡಕ್ಕೆ ಭೇಟಿ ನೀಡಿದ್ದಾರೆ. ಹೌದು, ಧಾರವಾಡದಲ್ಲಿರವ ತಮ್ಮ ಗೆಳೆಯರನ್ನ ಭೇಟಿ ಮಾಡಲು ಬಂದಿದ್ದಾರೆ.  

PREV
15
ಧಾರವಾಡಕ್ಕೆ ಬಂದ ತೆಲುಗು ಖ್ಯಾತ ನಟ, ಕನ್ನಡಿಗ ಶ್ರೀಕಾಂತ: ಗೆಳೆಯನ ಮನೆಯಲ್ಲಿ ಉಪಹಾರ ಸೇವನೆ..!

ತೆಲುಗು ಚಿತ್ರರಂಗದಲ್ಲಿ ಭಾರೀ ಹೆಸರು ಮಾಡಿರುವ ಶ್ರೀಕಾಂತ ಅವರು ಧಾರವಾಡದ ಸಿಎಸ್‌ಐ ಕಾಲೇಜ್‌ನಲ್ಲಿ ಕಾಮರ್ಸ್ ಪದವಿ ಪಡೆದಿದ್ದಾರೆ. 

25

ಈ ಹಿನ್ನೆಲೆಯಲ್ಲಿ ಶ್ರೀಕಾಂತ ಅವರು ಆಗಾಗ ಧಾರವಾಡಕ್ಕೆ ಬಂದು ಹೋಗುತ್ತಾರೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದಲ್ಲಿ ಬಂದಿದ್ದಾರೆ. ತಮ್ಮ ಸ್ವಂತ ಕೊಪ್ಪಳ ಜಿಲ್ಲೆಯ ಗಂಗಾವತಿಗೆ ತೆರಳಲು ಆಗಮಿಸಿದ್ದಾರೆ. ಈ ವೇಳೆ ಧಾರವಾಡಕ್ಕೆ ಆಗಮಿಸಿ ಗೆಳೆಯನ ಮನೆಯಲ್ಲು ಉಪಹಾರ ಸೇವಿಸಿದ್ದಾರೆ. 

35

ಧಾರವಾಡದ ಗೆಳೆಯ ದಿನೇಶ ಶೆಟ್ಟಿ ಮನೆಯಲ್ಲಿ ನಟ ಶ್ರೀಕಾಂತ ಅವರು ಉಪಹಾರ ಸೇವನೆ ಮಾಡಿದ್ದಾರೆ. ದಿನೇಶ ಶೆಟ್ಟಿ ಅವರು ಧಾರವಾಡ ನಗರದಲ್ಲಿರುವ ಉಪವನ ಹೊಟೇಲ್ ಮಾಲೀಕರಾಗಿದ್ದಾರೆ.  

45

ಕಾಲೇಜ್ ದಿನಗಳಲ್ಲಿ ನಟ ಶ್ರೀಕಾಂತ ಅವರು ಉಪವನ ಹೊಟೇಲ್‌ನಲ್ಲಿ ಉಪಹಾರ ಸೇವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆಗಾಗ ಉಪವನ ಹೊಟೇಲ್ ಮತ್ತು ಹೊಟೇಲ್ ಮಾಲೀಕರ ಭೇಟಿಗೆ ಬರುತ್ತಾರೆ ಶ್ರೀಕಾಂತ. 

55

 ನಟ ಶ್ರೀಕಾಂತ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಮೂಲ ನಿವಾಸಿಯಾಗಿದ್ದಾರೆ. ಪದವಿ ಶಿಕ್ಷಣವನ್ನ ಧಾರವಾಡ ನಗರದಲ್ಲಿಯೇ ಪಡೆದಿದ್ದಾರೆ. ಬಳಿಕ ನಟನೆಗೆಂದು ಹೈದ್ರಾಬಾದ್‌ಗೆ ತೆರಳಿ ತೆಲುಗು ಚಿತ್ರರಂಗದಲ್ಲಿ ಭಾರೀ ಹೆಸರು ಮಾಡಿದ್ದಾರೆ. ಇಷ್ಟು ದೊಡ್ಡ ನಟರಾದರೂ ಕೂಡ ತಮ್ಮ ಹುಟ್ಟೂರು ಗಂಗಾವತಿ ಹಾಗೂ ಪದವಿ ಟೈಂನಲ್ಲಿದ್ದ ಧಾರವಾಡ ನಗರಕ್ಕೂ ಆಗಾಗ ಬಂದು ಹೋಗುತ್ತಾರೆ. 

Read more Photos on
click me!

Recommended Stories