ಅವನೇ ಶ್ರೀಮನ್ನಾರಾಯಣ ನಿರ್ದೇಶಕ ಬಾಲಿವುಡ್‌ಗೆ ಎಂಟ್ರಿ: ಟೈಗರ್ ಶ್ರಾಫ್ ಜೊತೆ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ

Published : Aug 01, 2025, 05:05 PM IST

ಸಚಿನ್‌ ಅವರು ಇದೀಗ ಹೊಸ ಬಾಲಿವುಡ್‌ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್‌. ಇದೊಂದು ಭಾವನಾತ್ಮಕ ಕತೆಯುಳ್ಳ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ಎನ್ನಲಾಗಿದೆ.

PREV
15

‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಿರ್ದೇಶಿಸಿದ್ದ ಸಚಿನ್‌ ಅವರು ಇದೀಗ ಹೊಸ ಬಾಲಿವುಡ್‌ ಸಿನಿಮಾ ಆರಂಭಿಸಿದ್ದಾರೆ. ಈ ಚಿತ್ರದ ಹೀರೋ ಟೈಗರ್ ಶ್ರಾಫ್‌.

25

ಬಾಲಿವುಡ್‌ನ ಖ್ಯಾತ ನಾಯಕ ನಟ ಟೈಗರ್‌ ಶ್ರಾಫ್‌ ಅವರು ಈ ಸಿನಿಮಾದ ಕತೆ ಕೇಳಿ ಥ್ರಿಲ್‌ ಆಗಿ ಬೇರೊಂದು ಸಿನಿಮಾವನ್ನು ಹೋಲ್ಡ್‌ ಮಾಡಿ ಈ ಸಿನಿಮಾ ಆರಂಭಿಸಲು ಸೂಚನೆ ನೀಡಿದ್ದಾರೆ.

35

ಹಾಗಾಗಿ ಸಚಿನ್‌ ನಿರ್ದೇಶನದ ಸಿನಿಮಾ ತಕ್ಷಣವೇ ಶುರುವಾಗಲಿದ್ದು, ಅಕ್ಟೋಬರ್‌ನಲ್ಲಿ ಚಿತ್ರೀಕರಣ ಆರಂಭವಾಗಲಿದೆ. ‘ಅನಿಮಲ್‌’, ‘ಕಬೀರ್‌ ಸಿಂಗ್‌’ ಸಿನಿಮಾ ನಿರ್ಮಿಸಿದ್ದ ಮುರದ್‌ ಖೇತನಿ ಈ ಸಿನಿಮಾ ನಿರ್ಮಿಸುತ್ತಿದ್ದಾರೆ.

45

ಇದೊಂದು ಭಾವನಾತ್ಮಕ ಕತೆಯುಳ್ಳ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ಎನ್ನಲಾಗಿದೆ. ಪ್ರೀ-ಪ್ರೊಡಕ್ಷನ್‌ ಕೆಲಸ ಆರಂಭವಾಗಿದೆ. ತಾರಾಗಣ, ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. ಇದೊಂದು ಹೈಬಜೆಟ್‌ ಸಿನಿಮಾ ಆಗಿದ್ದು, ಬಹುತೇಕ ಮುಂಬೈನಲ್ಲಿಯೇ ಚಿತ್ರೀಕರಣ ನಡೆಯಲಿದೆ.

55

ಸಚಿನ್‌ ಅವರು ಶಾಹೀದ್‌ ಕಪೂರ್‌ ನಟನೆಯ ‘ಅಶ್ವತ್ಥಾಮ’ ಸಿನಿಮಾ ನಿರ್ದೇಶಿಸಬೇಕಿತ್ತು. ಆ ಸಿನಿಮಾ ಮುಂದಕ್ಕೆ ಹೋಗಿರುವುದರಿಂದ ಸಚಿನ್‌ ಅವರು ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories