2. ನಿರ್ಣಾಯಕ ಘಟ್ಟದಲ್ಲಿ ನಿರಂತರವಾಗಿ ವಿಕೆಟ್ ಕಳೆದುಕೊಂಡ ಆರ್ಸಿಬಿ
ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್ಸಿಬಿ ಆರಂಭದಲ್ಲೇ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡಿತಾದರೂ, ಆ ಬಳಿಕ ನಾಯಕ ಫಾಫ್ ಡು ಪ್ಲೆಸಿಸ್ ಹಾಗೂ ರಜತ್ ಪಾಟೀದಾರ್ ತಂಡಕ್ಕೆ ಆಸರೆಯಾಗುವ ಯತ್ನ ನಡೆಸಿದರು. ಆದರೆ ಇನಿಂಗ್ಸ್ನ ಕೊನೆಯಲ್ಲಿ ಆರ್ಸಿಬಿ ನಿರಂತರ ವಿಕೆಟ್ ಕಳೆದುಕೊಂಡ ಪರಿಣಾಮ ದೊಡ್ಡ ಮೊತ್ತ ಗಳಿಸಲು ಆರ್ಸಿಬಿಗೆ ಸಾಧ್ಯವಾಗಲಿಲ್ಲ.