ಈ ಕುರಿತಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿ ವಿಲಿಯರ್ಸ್, ರವಿಚಂದ್ರನ್ ಅಶ್ವಿನ್ ಅವರನ್ನು ಭಾರತ ತಂಡದೊಳಗೆ ಸೇರಿಸಿಕೊಂಡಿರುವುದು ಉಳಿದ ಎದುರಾಳಿ ತಂಡಗಳ ಪಾಲಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
"ಇದಂತೂ ಯಾರೂ ಊಹೆ ಮಾಡಲೂ ಸಾಧ್ಯವಾಗದಂತ ತೀರ್ಮಾನವಾಗಿದೆ. ಇದು ಉಳಿದ ತಂಡಗಳ ಪಾಲಿಗೆ ಒಳ್ಳೆಯ ಸುದ್ದಿಯಂತೂ ಅಲ್ಲವೇ ಅಲ್ಲ. ತುಂಬಾ ಅನುಭವಿ, ಚಾಣಾಕ್ಷ, ಒತ್ತಡದ ಪರಿಸ್ಥಿತಿಯಲ್ಲೂ ಪರಿಣಾಮಕಾರಿ ಆಟವಾಡಬಲ್ಲ, ಅಸಾಧಾರಣ ಕೌಶಲ್ಯಗಳನ್ನು ಹೊಂದಿರುವ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಉಪಯುಕ್ತ ಕಾಣಿಕೆ ನೀಡಬಲ್ಲ ಆಟಗಾರ ಅಶ್ವಿನ್ ಎಂದು ಎಬಿಡಿ ಬಣ್ಣಿಸಿದ್ದಾರೆ.