Published : Sep 26, 2023, 01:56 PM ISTUpdated : Sep 26, 2023, 02:09 PM IST
ಬೆಂಗಳೂರು: 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಹೀಗಿರುವಾಗಲೇ ಟೀಂ ಇಂಡಿಯಾಗೆ ಹೊಸ ಅಸ್ತ್ರ ಸೇರ್ಪಡೆಯಾಗಿದೆ. ಇದೀಗ ಆ ಅಸ್ತ್ರದ ಬಗ್ಗೆ ಆಧುನಿಕ ಕ್ರಿಕೆಟ್ನ ಸೂಪರ್ ಸ್ಟಾರ್ ಬ್ಯಾಟರ್ ಎನಿಸಿಕೊಂಡಿರುವ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬಹುನಿರೀಕ್ಷಿತ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭವಾಗಿ ನವೆಂಬರ್ 19ರವರೆಗೆ ನಡೆಯಲಿದೆ. ಇದೇ ಮೊದಲ ಬಾರಿಗೆ ಸಂಪೂರ್ಣ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯವನ್ನು ವಹಿಸಿದೆ.
210
ನವೆಂಬರ್ 05ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಕಳೆದ ಆವೃತ್ತಿಯ ವಿಶ್ವಕಪ್ ರನ್ನರ್ ಅಪ್ ನ್ಯೂಜಿಲೆಂಡ್ ವಿರುದ್ದ ಕಣಕ್ಕಿಳಿಯುವ ಮೂಲಕ ಟೂರ್ನಿಗೆ ಅಧಿಕೃತ ಚಾಲನೆ ಸಿಗಲಿದೆ.
310
ಇನ್ನು ಆತಿಥೇಯ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ, ಅಕ್ಟೋಬರ್ 08ರಂದು ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂನಲ್ಲಿ 5 ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ.
410
ವಿಶ್ವಕಪ್ ಟೂರ್ನಿಗೆ ಪಾಲ್ಗೊಳ್ಳುವ ಮುನ್ನ ಟೀಂ ಇಂಡಿಯಾ ಕೊನೆಯ ಹಂತದ ತಯಾರಿಯಲ್ಲಿದೆ. ಹೀಗಾಗಿ ಆಸ್ಟ್ರೇಲಿಯಾ ಎದುರು ತವರಿನಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದೆ. ಸದ್ಯ ಮೊದಲೆರಡು ಪಂದ್ಯಗಳನ್ನು ಜಯಿಸುವ ಮೂಲಕ ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಭಾರತ ಸರಣಿಯನ್ನು 2-0 ಅಂತರದಲ್ಲಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
510
ಇನ್ನು ಏಷ್ಯಾಕಪ್ ಟೂರ್ನಿಯ ಸೂಪರ್ 4 ಹಂತದ ಕೊನೆಯ ಪಂದ್ಯದ ವೇಳೆ ಟೀಂ ಇಂಡಿಯಾ ಆಲ್ರೌಂಡರ್ ಅಕ್ಷರ್ ಪಟೇಲ್ ಗಾಯಗೊಂಡಿದ್ದರು. ಹೀಗಾಗಿ ಆಸ್ಟ್ರೇಲಿಯಾ ಎದುರಿನ ಏಕದಿನ ಸರಣಿಗೆ ಅನುಭವಿ ಆಫ್ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ಗೆ ಭಾರತ ತಂಡಕ್ಕೆ ಬುಲಾವ್ ಬಂದಿತ್ತು.
610
ಬಿಸಿಸಿಐ ಆಯ್ಕೆ ಸಮಿತಿ ಹಾಗೂ ಟೀಂ ಮ್ಯಾನೇಜ್ಮೆಂಟ್ ತೆಗೆದುಕೊಂಡ ಮಾಸ್ಟರ್ ಪ್ಲಾನ್, ತಂಡದ ಕೈಹಿಡಿದಂತಿದ್ದು, ಮೊದಲೆರಡು ಪಂದ್ಯಗಳಲ್ಲಿ ಅಶ್ವಿನ್ ಶಿಸ್ತುಬದ್ದ ದಾಳಿ ನಡೆಸುವ ಮೂಲಕ 4 ವಿಕೆಟ್ ಕಬಳಿಸಿ ಗಮನ ಸೆಳೆದಿದ್ದಾರೆ. ಹೀಗಾಗಿ ಅಶ್ವಿನ್ ಕೊನೆಯ ಕ್ಷಣದಲ್ಲಿ ವಿಶ್ವಕಪ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.
710
ಈ ಕುರಿತಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ ಎಬಿ ಡಿ ವಿಲಿಯರ್ಸ್, ರವಿಚಂದ್ರನ್ ಅಶ್ವಿನ್ ಅವರನ್ನು ಭಾರತ ತಂಡದೊಳಗೆ ಸೇರಿಸಿಕೊಂಡಿರುವುದು ಉಳಿದ ಎದುರಾಳಿ ತಂಡಗಳ ಪಾಲಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
"ಇದಂತೂ ಯಾರೂ ಊಹೆ ಮಾಡಲೂ ಸಾಧ್ಯವಾಗದಂತ ತೀರ್ಮಾನವಾಗಿದೆ. ಇದು ಉಳಿದ ತಂಡಗಳ ಪಾಲಿಗೆ ಒಳ್ಳೆಯ ಸುದ್ದಿಯಂತೂ ಅಲ್ಲವೇ ಅಲ್ಲ. ತುಂಬಾ ಅನುಭವಿ, ಚಾಣಾಕ್ಷ, ಒತ್ತಡದ ಪರಿಸ್ಥಿತಿಯಲ್ಲೂ ಪರಿಣಾಮಕಾರಿ ಆಟವಾಡಬಲ್ಲ, ಅಸಾಧಾರಣ ಕೌಶಲ್ಯಗಳನ್ನು ಹೊಂದಿರುವ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಉಪಯುಕ್ತ ಕಾಣಿಕೆ ನೀಡಬಲ್ಲ ಆಟಗಾರ ಅಶ್ವಿನ್ ಎಂದು ಎಬಿಡಿ ಬಣ್ಣಿಸಿದ್ದಾರೆ.
810
ಅಶ್ವಿನ್ ತಂಡ ಕೂಡಿಕೊಂಡಿದ್ದು ನಿಜಕ್ಕೂ ಭಾರತಕ್ಕೆ ತುಂಬಾ ಪ್ರಯೋಜನವಾಗಲಿದೆ. ಅವರ್ಯಾಕೆ ಇಷ್ಟು ಕಾಲ ಭಾರತ ಸೀಮಿತ ಓವರ್ಗಳ ತಂಡದಲ್ಲಿರಲಿಲ್ಲವೆಂದು ಅರ್ಥವಾಗುತ್ತಿಲ್ಲ. ನಾನು ಅವರ ಅತಿದೊಡ್ಡ ಅಭಿಮಾನಿ. ಅವರು ಯಾವಾಗಲೂ ತಂಡದ ಗೆಲುವಿಗಾಗಿಯೇ ಚಿಂತಿಸುತ್ತಿರುತ್ತಾರೆ. ಅವರು ಪಂದ್ಯದಲ್ಲಿ ಇಂಪ್ಯಾಕ್ಟ್ ಮಾಡಬಲ್ಲ ಆಟಗಾರರಾಗಿದ್ದಾರೆ ಎಂದು ಎಬಿಡಿ ಹೇಳಿದ್ದಾರೆ.
910
ಅವರು ಒತ್ತಡದ ಪರಿಸ್ಥಿತಿಯಲ್ಲಿ ಚೆನ್ನಾಗಿ ಬೌಲಿಂಗ್ ಮಾಡಲು ಇಷ್ಟಪಡುತ್ತಾರೆ. ಒತ್ತಡದ ಪರಿಸ್ಥಿತಿಯಲ್ಲಿ ಅವರು ಬೌಲಿಂಗ್ ಮಾಡಲು ಹಿಂಜರಿಯುವಂತ ಆಟಗಾರ ಅವರಲ್ಲ ಎಂದು ಅಶ್ವಿನ್ ಪ್ರತಿಭೆಯನ್ನು ಎಬಿಡಿ ಕೊಂಡಾಡಿದ್ದಾರೆ.
1010
ವಿಶ್ವಕಪ್ ಟೂರ್ನಿಗೆ ತಂಡವನ್ನು ಅಂತಿಮಗೊಳಿಸಲು ಸೆಪ್ಟೆಂಬರ್ 27 ಕೊನೆಯ ದಿನಾಂಕವಾಗಿದ್ದು, ಅನುಭವಿ ಆಫ್ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಭಾರತ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.