ಆಸ್ಪತ್ರೆಯಿಂದ ಅಭಿಷೇಕ್ ಶರ್ಮಾ ಡಿಸ್ಚಾರ್ಜ್! ಪಾಕ್ ಬೌಲರ್‌ಗಳಿಗೆ ಶುರುವಾಗಿದೆ ನಡುಕ!

Published : Feb 12, 2026, 08:33 AM IST

ಟೀಮ್ ಇಂಡಿಯಾ ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಪಾಕಿಸ್ತಾನ ವಿರುದ್ಧದ ಮಹತ್ವದ ಪಂದ್ಯಕ್ಕೂ ಮುನ್ನ ಅವರು ಚೇತರಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ. ಇದು ಭಾರತ ತಂಡಕ್ಕೆ ದೊಡ್ಡ ಬೂಸ್ಟ್ ನೀಡಿದೆ.

PREV
16
IND vs PAK ಪಂದ್ಯಕ್ಕೂ ಮುನ್ನ ಗುಡ್‌ ನ್ಯೂಸ್
ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್. ಟೀಮ್ ಇಂಡಿಯಾದ ಯುವ ಆಟಗಾರ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಹ ಆಟಗಾರ ತಿಲಕ್ ವರ್ಮಾ ಬುಧವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಷಯವನ್ನು ಖಚಿತಪಡಿಸಿದ್ದಾರೆ. ಅಭಿಷೇಕ್ ಈಗ ಆರೋಗ್ಯವಾಗಿದ್ದಾರೆ ಎಂದು ತಿಲಕ್ ವರ್ಮಾ ಸ್ಪಷ್ಟಪಡಿಸಿದ್ದು, ಭಾರತೀಯ ಪಾಳಯದಲ್ಲಿ ಸಂತಸ ಮನೆಮಾಡಿದೆ.
26
ಅಭಿಷೇಕ್‌ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದರು
2026ರ ಟಿ20 ವಿಶ್ವಕಪ್‌ನಲ್ಲಿ ಅಮೆರಿಕ ವಿರುದ್ಧದ ಮೊದಲ ಪಂದ್ಯದ ನಂತರ ಅಭಿಷೇಕ್ ಶರ್ಮಾಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಹೆಡ್ ಕೋಚ್ ಗೌತಮ್ ಗಂಭೀರ್ ಮನೆಯಲ್ಲಿ ಆಯೋಜಿಸಿದ್ದ ಡಿನ್ನರ್ ಪಾರ್ಟಿ ವೇಳೆ ನೋವು ಹೆಚ್ಚಾಗಿದ್ದರಿಂದ, ಅವರನ್ನು ತಕ್ಷಣವೇ ದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಫೆಬ್ರವರಿ 15ರಂದು ಪಾಕಿಸ್ತಾನ ವಿರುದ್ಧ ಮಹತ್ವದ ಪಂದ್ಯವಿರುವಾಗ ಅಭಿಷೇಕ್ ಆಸ್ಪತ್ರೆಗೆ ದಾಖಲಾಗಿದ್ದು ಆತಂಕ ಮೂಡಿಸಿತ್ತು.
36
ಇಂದು ಭಾರತ-ನಮೀಬಿಯಾ ನಡುವೆ ಫೈಟ್

ಟಿ20 ವಿಶ್ವಕಪ್‌ನಲ್ಲಿ ಭಾರತ ಗುರುವಾರವಾದ ಇಂದು ನಮೀಬಿಯಾ ವಿರುದ್ಧ ಆಡಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಅಭಿಷೇಕ್ ಆಡುತ್ತಾರೆಯೇ ಎಂಬುದು ಇನ್ನೂ ಖಚಿತವಾಗಿಲ್ಲ. 'ಅಭಿಷೇಕ್ ಇಂದು ಡಿಸ್ಚಾರ್ಜ್ ಆಗಿದ್ದಾರೆ. ನಾಳೆ ಅವರ ಚೇತರಿಕೆ ನೋಡಿಕೊಂಡು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ' ಎಂದು ತಿಲಕ್ ವರ್ಮಾ ಹೇಳಿದ್ದಾರೆ. ಮ್ಯಾನೇಜ್‌ಮೆಂಟ್ ಅವರ ಮೇಲೆ ಯಾವುದೇ ಒತ್ತಡ ಹೇರಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

46
ಪಾಕ್ ವಿರುದ್ದ ಕಣಕ್ಕಿಳಿಯುವುದಂತೂ ಕನ್ಫರ್ಮ್

ನಮೀಬಿಯಾ ವಿರುದ್ಧದ ಪಂದ್ಯಕ್ಕೆ ಅಭಿಷೇಕ್ ಲಭ್ಯರಿರಲಿ, ಇಲ್ಲದಿರಲಿ, ಫೆಬ್ರವರಿ 15ರಂದು ಕೊಲಂಬೊದಲ್ಲಿ ಪಾಕಿಸ್ತಾನ ವಿರುದ್ಧದ ಬಿಗ್ ಫೈಟ್‌ಗೆ ಅವರು ಸಿದ್ಧರಾಗುವ ನಿರೀಕ್ಷೆಯಿದೆ. ಪಾಕ್ ವಿರುದ್ಧ ಅಭಿಷೇಕ್ ಉತ್ತಮ ದಾಖಲೆ ಹೊಂದಿದ್ದಾರೆ. ಏಷ್ಯಾಕಪ್ 2025ರಲ್ಲಿ ಪಾಕ್ ಬೌಲರ್ ಶಾಹೀನ್ ಅಫ್ರಿದಿ ಬೌಲಿಂಗ್‌ಅನ್ನು ಧೂಳೀಪಟ ಮಾಡಿದ್ದರು. ಸಲ್ಮಾನ್ ಆಘಾ ನಾಯಕತ್ವದ ಪಾಕ್ ತಂಡಕ್ಕೆ ಅಭಿಷೇಕ್ ದೊಡ್ಡ ಅಪಾಯಕಾರಿಯಾಗಬಲ್ಲರು.

56
ಗಂಭೀರ್ ಮಾರ್ಗದರ್ಶನದಲ್ಲಿ ಆಕ್ರಮಣಕಾರಿ ಆಟ

ಕೋಚ್ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಟೀಮ್ ಇಂಡಿಯಾ ಆಕ್ರಮಣಕಾರಿ ಆಟವಾಡುತ್ತಿದೆ. ಅಭಿಷೇಕ್ ಶರ್ಮಾ ನೀಡುವ ಆರಂಭ ತಂಡಕ್ಕೆ ಬಹಳ ಮುಖ್ಯ. ಪಾಕಿಸ್ತಾನದಂತಹ ಒತ್ತಡದ ಪಂದ್ಯಗಳಲ್ಲಿ ಅಭಿಷೇಕ್ ಅವರಂತಹ ನಿರ್ಭೀತ ಬ್ಯಾಟರ್‌ಗಳು ತಂಡದಲ್ಲಿರುವುದು ಭಾರತಕ್ಕೆ ದೊಡ್ಡ ಪ್ಲಸ್ ಪಾಯಿಂಟ್. 

66
ಪಾಕಿಸ್ತಾನಕ್ಕೆ ಶುರುವಾಗಿದೆ ಚಳಿಜ್ವರ

ಅವರು ಚೇತರಿಸಿಕೊಂಡಿರುವುದು ಪಾಕ್ ಬೌಲರ್‌ಗಳಲ್ಲಿ ಈಗಾಗಲೇ ನಡುಕ ಹುಟ್ಟಿಸಿದೆ. ಕೊಲಂಬೊದಲ್ಲಿ ನಡೆಯಲಿರುವ ಈ ಹೈ-ವೋಲ್ಟೇಜ್ ಪಂದ್ಯಕ್ಕಾಗಿ ಕ್ರಿಕೆಟ್ ಜಗತ್ತು ಕಾಯುತ್ತಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories