ಭಾರತಕ್ಕೆ ಈಗಲೂ ಏಷ್ಯಾಕಪ್ ಟ್ರೋಫಿ ಕೊಡಲು ರೆಡಿ, ಆದ್ರೆ ಒಂದು ಕಂಡೀಷನ್ ಎಂದ ನಖ್ವಿ! ಏನದು?

Published : Sep 30, 2025, 04:53 PM IST

ದುಬೈ: 17ನೇ ಆವೃತ್ತಿಯ ಏಷ್ಯಾಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ ಟ್ರೋಫಿ ಸಿಕ್ಕಿಲ್ಲ. ಇದೀಗ ಟ್ರೋಫಿ ಬೇಕಿದ್ದರೇ ಒಂದು ಕಂಡೀಷನ್ ಇದೆ ಅಂತ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಹೊಸ ರಾಗ ಎಳೆದಿದ್ದಾರೆ.

PREV
17
ಭಾರತ ಏಷ್ಯಾಕಪ್ ಚಾಂಪಿಯನ್

ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಸೆಪ್ಟೆಂಬರ್ 28ರಂದು ನಡೆದ ಏಷ್ಯಾಕಪ್ ಫೈನಲ್‌ನಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಬದ್ದ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದು ಚಾಂಪಿಯನ್ ಪಟ್ಟ ಅಲಂಕರಿಸಿದೆ.

27
ಹಠ ಹಿಡಿದ ಮೊಹ್ಸಿನ್ ಖಾನ್

ಆದರೆ ಪಾಕಿಸ್ತಾನ ಗೃಹ ಸಚಿವರೂ ಆಗಿರುವ ಮೊಹ್ಸಿನ್ ನಖ್ವಿ ಅವರಿಂದ ಏಷ್ಯಾಕಪ್ ಟ್ರೋಫಿ ಸ್ವೀಕರಿಸಲು ಭಾರತ ತಂಡ ನಿರಾಕರಿಸಿತು. ಆದರೆ ಪಟ್ಟು ಬಿಡದ ಮೊಹ್ಸಿನ್ ನಖ್ವಿ ಭಾರತಕ್ಕೆ ತಾವೇ ಟ್ರೋಫಿ ನೀಡಬೇಕು ಎಂದು ಹಠ ಹಿಡಿದರು.

37
ಸ್ಟೇಡಿಯಂನಿಂದ ಪರಾರಿಯಾದ ನಖ್ವಿ

ಇದೆಲ್ಲದರ ಹೊರತಾಗಿಯೂ ಭಾರತೀಯ ಆಟಗಾರರು ಟ್ರೋಫಿ ಸ್ವೀಕರಿಸಲು ವೇದಿಕೆ ಬಳಿ ಹೋಗಲಿಲ್ಲ. ಹೀಗಾಗಿ ಸಿಟ್ಟಿಗೆದ್ದ ಮೊಹ್ಸಿನ್ ನಖ್ವಿ, ತಮ್ಮ ಸಿಬ್ಬಂದಿ ಜತೆ ಟ್ರೋಫಿ ಹಾಗೂ ಚಾಂಪಿಯನ್ ತಂಡಕ್ಕೆ ನೀಡಲಾಗುವ ಮೆಡಲ್ ಸಹಿತ ತಾವಿದ್ದ ಹೋಟೆಲ್‌ಗೆ ಪರಾರಿಯಾದರು.

47
ಏಷ್ಯಾಕಪ್ ಟ್ರೋಫಿ ಇಲ್ಲದೇ ಸಂಭ್ರಮಿಸಿದ ಭಾರತ

ಇನ್ನು ಟೀಂ ಇಂಡಿಯಾ ಆಟಗಾರರು ಟ್ರೋಫಿ ಇಲ್ಲದೇ ಮೈದಾನದಲ್ಲಿ ಚಾಂಪಿಯನ್ ಖುಷಿಯನ್ನು ಸಂಭ್ರಮಿಸಿದರು. ಇದರ ಜತೆಗೆ ಭಾರತ ತಂಡವು ಟ್ರೋಫಿ ಇಲ್ಲದೇ ತವರಿಗೆ ವಾಪಾಸ್ಸಾಗಿದೆ.

57
ಟೀಕೆಗೆ ಗುರಿಯಾಗಿರುವ ನಖ್ವಿ

ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷರ ಈ ನಡೆಯು ವ್ಯಾಪಕ ಟೀಕೆಗೆ ಗುರಿಯಾಗಿದೆ. ಇದನ್ನು ಬಿಸಿಸಿಐ ಕೂಡಾ ಕಟುವಾದ ಶಬ್ದಗಳಿಂದ ಖಂಡಿಸಿದೆ. ಇದೀಗ ಟ್ರೋಫಿ ನೀಡುವ ವಿಚಾರವಾಗಿ ನಖ್ವಿ ಹೊಸದೊಂದು ಕಂಡೀಷನ್ ಇಟ್ಟಿದ್ದಾರೆ.

67
ಹೊಸ ಕಂಡೀಷನ್ ಹಾಕಿದ ನಖ್ವಿ

ತಾವು ಭಾರತ ತಂಡಕ್ಕೆ ಏಷ್ಯಾಕಪ್ ಟ್ರೋಫಿ ಹಸ್ತಾಂತರಿಸಲು ರೆಡಿಯಿದ್ದೇವೆ, ಆದರೆ ಅದಕ್ಕೊಂದು ಔಪಚಾರಿಕ ಕಾರ್ಯಕ್ರಮವನ್ನು ಆಯೋಜಿಸಬೇಕು. ಇದರ ಜತೆಗೆ ತಮ್ಮ ಕೈಯಿಂದ ಮಾತ್ರ ಏಷ್ಯಾಕಪ್ ಟ್ರೋಫಿಯನ್ನು ಸೂರ್ಯಕುಮಾರ್ ಪಡೆಗೆ ನೀಡುತ್ತೇನೆ ಎಂದು ಕಂಡೀಷನ್ ಹಾಕಿದ್ದಾರೆ ಎಂದು ಕ್ರಿಕ್‌ಬಜ್ ವರದಿ ಮಾಡಿದೆ.

77
ಹದಗೆಟ್ಟಿರುವ ಭಾರತ-ಪಾಕ್ ಸಂಬಂಧ

ಸದ್ಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಸಂಬಂಧ ಹಳಸಿದ್ದು, ಈ ರೀತಿಯ ಔಪಚಾರಿಕ ಕಾರ್ಯಕ್ರಮ ನಡೆಯೋದು ಅನುಮಾನ ಎನಿಸಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಭಾರತ ನಖ್ವಿ ಕೈಯಿಂದ ಏಷ್ಯಾಕಪ್ ಟ್ರೋಫಿ ಸ್ವೀಕರಿಸುವುದಂತೂ ಕನಸಿನ ಮಾತೇ ಸರಿ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories