ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದ ಮುಖಭಂಗದಿಂದ ಭಾರತ ತಂಡದ ಕೋಚ್, ಕೆಲ ಆಟಾಗರರ ಬದಲಾವಣೆಗೆ ಒತ್ತಾಯ ಕೇಳಿಬರುತ್ತಿದೆ. ಇದರ ನಡುವೆ ಏಕದಿನ ಪಂದ್ಯ ಆರಂಭಕ್ಕೂ ಮೊದಲೇ ಬಿಸಿಸಿಐ ಸೈಲೆಂಟ್ ಆಗಿ ಇಬ್ಬರ ಬದಲಿಸಿದೆ.
ಇಂಗ್ಲೆಂಡ್ ವಿರುದ್ದದ 5 ಟಿ20 ಪಂದ್ಯಗಳ ಸರಣಿಯಲ್ಲಿ ಸತತ 4 ಪಂದ್ಯ ಸೋತಿದ್ದು ಮಾತ್ರವಲ್ಲ ವೈಟ್ ವಾಶ್ ಮುಖಭಂಗ ಅನುಭವಿಸಿದೆ. ನಾಲ್ಕು ತಿಂಗಳ ಹಿಂದೆ ವಿಶ್ವವನ್ನೇ ಗೆದ್ದ ಚಾಂಪಿಯನ್ ಭಾರತ ತಂಡ ಇದೀಗ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧ ಸರಣಿ ಸೋಲಿನ ಕಹಿ ಅನುಭವಿಸಿದೆ. ಈ ಸೋಲಿನಿಂದ ಕೋಚ್ ಬದಲಾವಣೆ, ಕೆಲ ಆಟಗಾರರ ಬದಲಾವಣೆಗೆ ಆಗ್ರಹ ಹೆಚ್ಚಾಗುತ್ತಿದೆ.ಜುಲೈ 14 ರಿಂದ 3 ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿದೆ. ಇದಕ್ಕೂ ಮೊದಲೇ ಬಿಸಿಸಿಐ ತಂಡದ ಇಬ್ಬರನ್ನು ಬದಲಿಸಿದೆ.
26
ಏಕದಿನ ಸರಣಿಗಾಗಿ ಮಹತ್ವದ ಬದಲಾವಣೆ
ಇಂಗ್ಲೆಂಡ್ ವಿರುದ್ಧ ಟಿ20 ಸರಣಿ ಸೋತಾಗಿದೆ. ಇದೀಗ ಏಕದಿನ ಸರಣಿಯಲ್ಲಿ ತಿರುಗೇಟು ನೀಡಲಿ ಅನ್ನೋದು ಅಭಿಮಾನಿಗಳ ಆಗ್ರಹ. ಇತ್ತ ಬಿಸಿಸಿಐ ತಂಡದಲ್ಲಿ ಗಾಯಗೊಂಡ ಇಬ್ಬರನ್ನು ಬದಲಿಸಿದೆ. ಹರ್ಷತ್ ರಾಣಾ ಹಾಗೂ ವರುಣ್ ಚಕ್ರವರ್ತಿ ಟಿ20 ಪಂದ್ಯದಲ್ಲಿ ಗಾಯಗೊಂಡಿದ್ದರು. ಹೀಗಾಗಿ ಇವರಿಬ್ಬರು ತಂಡದಿಂದ ಹೊರಬಿದ್ದಿದ್ದಾರೆ. ಇವರ ಸ್ಥಾನಕ್ಕೆ ಮತ್ತಿಬ್ಬರು ಆಯ್ಕೆಯಾಗಿದ್ದಾರೆ.
36
ಇಬ್ಬರಿಗೆ ಮಣೆ ಹಾಕಿದ ಬಿಸಿಸಿಐ
ಹರ್ಷಿತ್ ರಾಣಾ ಹಾಗೂ ವರುಣ್ ಚಕ್ರವರ್ತಿ ತಂಡದಿಂದ ಹೊರಬಿದ್ದಿರುವ ಕಾರಣ ಈ ಸ್ಥಾನಕ್ಕೆ ಪ್ರಿನ್ಸ್ ಯಾದವ್ ಹಾಗೂ ರವಿ ಬಿಶ್ನೋಯ್ ಆಯ್ಕೆಯಾಗಿದ್ದಾರೆ. ಹರ್ಷಿತ್ ರಾಣಾ ಇಂಗ್ಲೆಂಡ್ ವಿರುದ್ಧ ಸರಣಿಗೆ ಹಾಗೂ ಜಿಂಬಾಬ್ವೆ ವಿರುದ್ದದ ಟಿ20 ಸರಣಿಗೆ, ರವಿ ಬಿಶ್ನೋಯ್ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಸಭೆ ಸೇರಿ ಗಾಯಗೊಂಡ ಇಬ್ಬರು ಆಟಗಾರರ ಬದಲಿ ಆಟಗಾರರ ಆಯ್ಕೆ ಮಾಡಿ ತಂಡ ಪ್ರಕಟಿಸಿದೆ.
ಟಿ20ಯಲ್ಲಿ ಭಾರತ ಸೋಲು ಕಂಡಿದೆ. ಆದರೆ ಏಕದಿನದಲ್ಲಿ ತಿರುಗೇಟು ನೀಡುವ ವಿಶ್ವಾಸ ಅಭಿಮಾನಿಗಳಲ್ಲಿದೆ. ಕಾರಣ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ತಂಡಕ್ಕೆ ಮರಳುತ್ತಿದ್ದಾರೆ. ಶುಬಮನ್ ಗಿಲ್ ನಾಯಕತ್ವದ ಏಕದಿನ ತಂಡ ಜುಲೈ 14 ರಿಂದ ಮೂರು ಪಂದ್ಯಗಳ ಸರಣಿ ಆಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.