ಬಿಸಿಸಿಐ ಇದೀಗ ಬೆಂಗಳೂರು ಸಹವಾಸವೇ ಬೇಡ ಅನ್ನೋ ನಿರ್ಧಾರಕ್ಕೆ ಬಂದಂತಿದೆ. ಕಾರಣ ಚಿನ್ನಸ್ವಾಮಿ ಕ್ರೀಡಾಂಗಣದ ಪಂದ್ಯಗಳನ್ನು ಬಿಸಿಸಿಐ ಸ್ಥಳಾಂತರಿಸಿದೆ. ಕಾಲ್ತುಳಿತ ಪ್ರಕರಣ, ಎಫ್ಐಆರ್, ಜನರ ಆಕ್ರೋಶ ಸೇರಿದಂತೆ ಹಲವು ಕಾರಣಗಳಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜನೆಗೊಂಡಿದ್ದ ಪಂದ್ಯಗಳನ್ನು ಸ್ಥಳಾಂತರಿಸಿದೆ. ಹೌದು, ಭಾರತ ಎ ಹಾಗೂ ಸೌತ್ ಆಫ್ರಿಕಾ ಎ ನಡುವಿನ ಪಂದ್ಯವನ್ನು ಬಿಸಿಸಿಐ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಿಂದ ಸ್ಥಳಾಂತರಿಸಿದೆ.