ಕೊರೋನಾ ಫೈಟ್: ಪೊಲೀಸರ ನಿಸ್ವಾರ್ಥ ಸೇವೆಗೆ ಸಲಾಂ ಎಂದ ಕ್ಯಾಪ್ಟನ್ ವಿರಾಟ್ ಕೊಹ್ಲಿ

Suvarna News   | Asianet News
Published : Apr 11, 2020, 03:14 PM ISTUpdated : Apr 11, 2020, 03:28 PM IST

ಕೊರೋನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 7,500ದ ಗಡಿ ದಾಟಿದೆ. ಇಂತಹ ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಕೊರೋನಾ ವಾರಿಯರ್ಸ್‌ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅದರಲ್ಲೂ ದೇಶಾದ್ಯಂತ ಇರುವ ಪೊಲೀಸರು ಸೇವೆಯನ್ನು ಕೊಂಡಿದ್ದಾರೆ. ಇನ್ನು ವಿಶೇಷವಾಗಿ ಡೆಲ್ಲಿ ಪೊಲೀಸರನ್ನು ವಿರಾಟ್ ಕೊಹ್ಲಿ ಸ್ಮರಿಸಿಕೊಂಡಿದ್ದಾರೆ. ಪೊಲೀಸರು ತಮ್ಮ ಕರ್ತವ್ಯವನ್ನು ನಿಭಾಯಿಸುವುದರ ಜತೆಗೆ ಬಡವರಿಗೆ ಆಹಾರ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆಂದು ವಿರಾಟ್ ಕೊಹ್ಲಿ ಹೇಳಿದ್ದಾರೆ. ಈ ವಿಡಿಯೋವನ್ನು ಡೆಲ್ಲಿ ಪೊಲೀಸ್ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

PREV
110
ಕೊರೋನಾ ಫೈಟ್: ಪೊಲೀಸರ ನಿಸ್ವಾರ್ಥ ಸೇವೆಗೆ ಸಲಾಂ ಎಂದ ಕ್ಯಾಪ್ಟನ್ ವಿರಾಟ್ ಕೊಹ್ಲಿ
ಕಠಿಣ ಪರಿಸ್ಥಿತಿಯಲ್ಲಿಯೂ ಸೇವೆ ಸಲ್ಲಿಸುತ್ತಿರುವ ದೇಶದ ಪೊಲೀಸರಿಗೆ ಸಲಾಂ ಎಂದ ವಿರಾಟ್ ಕೊಹ್ಲಿ
ಕಠಿಣ ಪರಿಸ್ಥಿತಿಯಲ್ಲಿಯೂ ಸೇವೆ ಸಲ್ಲಿಸುತ್ತಿರುವ ದೇಶದ ಪೊಲೀಸರಿಗೆ ಸಲಾಂ ಎಂದ ವಿರಾಟ್ ಕೊಹ್ಲಿ
210
ಡೆಲ್ಲಿ ಪೊಲೀಸರು ತಮ್ಮ ಕರ್ತವ್ಯದ ಜತೆ ಬಡವರಿಗೆ ಆಹಾರ ನೀಡುತ್ತಿರುವ ವಿಚಾರ ತಿಳಿದು ಮನತುಂಬಿ ಬಂದಿದೆ
ಡೆಲ್ಲಿ ಪೊಲೀಸರು ತಮ್ಮ ಕರ್ತವ್ಯದ ಜತೆ ಬಡವರಿಗೆ ಆಹಾರ ನೀಡುತ್ತಿರುವ ವಿಚಾರ ತಿಳಿದು ಮನತುಂಬಿ ಬಂದಿದೆ
310
ಇಂತಹ ಜನೋಪಯೋಗಿ ಕೆಲಸಗಳನ್ನು ಮಾಡಿ ಎಂದು ಪೊಲೀಸರಿಗೆ ಹುರಿದುಂಬಿಸಿದ ವಿರಾಟ್
ಇಂತಹ ಜನೋಪಯೋಗಿ ಕೆಲಸಗಳನ್ನು ಮಾಡಿ ಎಂದು ಪೊಲೀಸರಿಗೆ ಹುರಿದುಂಬಿಸಿದ ವಿರಾಟ್
410
ವಿರಾಟ್ ಸ್ಪೂರ್ತಿಯ ಮಾತುಗಳಿಗೆ ಧನ್ಯವಾದಗಳನ್ನು ಅರ್ಪಿಸಿದ ಡೆಲ್ಲಿ ಪೊಲೀಸರು
ವಿರಾಟ್ ಸ್ಪೂರ್ತಿಯ ಮಾತುಗಳಿಗೆ ಧನ್ಯವಾದಗಳನ್ನು ಅರ್ಪಿಸಿದ ಡೆಲ್ಲಿ ಪೊಲೀಸರು
510
ಕೊರೋನಾ ವಿರುದ್ಧದ ಹೋರಾಟದಲ್ಲಿ ನಮ್ಮ ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದ ಖಾಕಿ ಪಡೆ
ಕೊರೋನಾ ವಿರುದ್ಧದ ಹೋರಾಟದಲ್ಲಿ ನಮ್ಮ ನಾಗರಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ ಎಂದ ಖಾಕಿ ಪಡೆ
610
ಕೊರೋನಾ ವೈರಸ್‌ನಿಂದ ಬಚಾವಾಗಲೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದ ಕ್ಯಾಪ್ಟನ್
ಕೊರೋನಾ ವೈರಸ್‌ನಿಂದ ಬಚಾವಾಗಲೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದ ಕ್ಯಾಪ್ಟನ್
710
ಈಗಾಗಲೇ ಕೊರೋನಾ ಹೋರಾಟಕ್ಕೆ PM-CARES ಗೆ ಕೋಟ್ಯಾಂತರ ರುಪಾಯಿ ದೇಣಿಗೆ ನೀಡಿರುವ ವಿರುಷ್ಕಾ ಜೋಡಿ
ಈಗಾಗಲೇ ಕೊರೋನಾ ಹೋರಾಟಕ್ಕೆ PM-CARES ಗೆ ಕೋಟ್ಯಾಂತರ ರುಪಾಯಿ ದೇಣಿಗೆ ನೀಡಿರುವ ವಿರುಷ್ಕಾ ಜೋಡಿ
810
ಟೀಂ ಇಂಡಿಯಾ ಮಾಜಿ ವೇಗಿ ಜಾವಗಲ್ ಶ್ರೀನಾಥ್ ರಾಜ್ಯದ ಪೊಲೀಸರ ಸೇವೆಗೆ ಸಲಾಂ ಎಂದಿದ್ದಾರೆ
ಟೀಂ ಇಂಡಿಯಾ ಮಾಜಿ ವೇಗಿ ಜಾವಗಲ್ ಶ್ರೀನಾಥ್ ರಾಜ್ಯದ ಪೊಲೀಸರ ಸೇವೆಗೆ ಸಲಾಂ ಎಂದಿದ್ದಾರೆ
910
ಕೊರೋನಾ ವೈರಸ್‌ನಿಂದ ಜನಜೀವನ ಮಾತ್ರವಲ್ಲ, ಕ್ರೀಡಾ ಚಟುವಟಿಕೆಗಳು ಸ್ತಬ್ಧವಾಗಿವೆ
ಕೊರೋನಾ ವೈರಸ್‌ನಿಂದ ಜನಜೀವನ ಮಾತ್ರವಲ್ಲ, ಕ್ರೀಡಾ ಚಟುವಟಿಕೆಗಳು ಸ್ತಬ್ಧವಾಗಿವೆ
1010
ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 15ಕ್ಕೆ ಮುಂದೂಡಲಾಗಿದೆಯಾದರೂ, ಸದ್ಯಕ್ಕೆ ಟೂರ್ನಿ ನಡೆಯುವುದು ಅನುಮಾನ ಎನಿಸಿದೆ
ಬಹುನಿರೀಕ್ಷಿತ 13ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 15ಕ್ಕೆ ಮುಂದೂಡಲಾಗಿದೆಯಾದರೂ, ಸದ್ಯಕ್ಕೆ ಟೂರ್ನಿ ನಡೆಯುವುದು ಅನುಮಾನ ಎನಿಸಿದೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories