ಮಾಸ್ಟರ್‌ ಬ್ಲಾಸ್ಟರ್ ಸಚಿನ್‌ ತೆಂಡುಲ್ಕರ್ ಆಸ್ಪತ್ರೆಗೆ ದಾಖಲು..!

First Published Apr 2, 2021, 12:26 PM IST

ಮುಂಬೈ: ಒಂದು ಕಡೆ ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ ಐಸಿಸಿ ಏಕದಿನ ವಿಶ್ವಕಪ್ ಜಯಿಸಿ 10 ವರ್ಷದ ಸಂಭ್ರಮಾಚರಣೆ ಮಾಡುತ್ತಿದ್ದರೆ, ಮತ್ತೊಂದು ಕಡೆಯಿಂದ ಕ್ರಿಕೆಟ್‌ ದಂತಕಥೆ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡುಲ್ಕರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಆತಂಕಕಾರಿಯಾದ ಸುದ್ದಿಯೊಂದು ಹೊರಬಿದ್ದಿದೆ. ಅಷ್ಟಕ್ಕೂ ಸಚಿನ್‌ ತೆಂಡುಲ್ಕರ್‌ಗೆ ಏನಾಯ್ತು ಎನ್ನುವ ನಿಮ್ಮ ಕುತೂಹಲಕ್ಕೆ ಇಲ್ಲಿದೆ ನೋಡಿ ಉತ್ತರ.
 

ಇಡೀ ಕ್ರಿಕೆಟ್‌ ಜಗತ್ತೇ ಭಾರತ ತಂಡ 2011ರಲ್ಲಿ ಐಸಿಸಿ ಏಕದಿನ ವಿಶ್ವಕಪ್‌ ಜಯಿಸಿದ ಸುಂದರ ಕ್ಷಣಗಳನ್ನು ಮೆಲುಕು ಹಾಕುತ್ತಿದೆ.
undefined
ಹೀಗಾಗಿರುವಾಗಲೇ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್ ತೆಂಡುಲ್ಕರ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಆತಂಕಕಾರಿ ಸುದ್ದಿಯೊಂದು ಬರಸಿಡಿಲಿನಂತೆ ಬಂದೆರಗಿದೆ.
undefined
ಮಾರ್ಚ್‌ 27ರಂದು ಲಿಟ್ಲ್‌ ಮಾಸ್ಟರ್‌ ಸಚಿನ್ ತೆಂಡುಲ್ಕರ್‌ಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿತ್ತು. ಹೀಗಾಗಿ ಸಚಿನ್‌ ಮನೆಯಲ್ಲಿಯೇ ಐಸೋಲೇಷನ್‌ಗೆ ಒಳಗಾಗಿದ್ದರು.
undefined
ಇದೀಗ ಸೋಂಕು ತಗುಲಿ ಒಂದು ವಾರ ಕಳೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕ್ರಿಕೆಟ್‌ ದಿಗ್ಗಜ ತೆಂಡುಲ್ಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
undefined
ಈ ಕುರಿತಂತೆ ಟ್ವೀಟ್‌ ಮಾಡಿರುವ ಸಚಿನ್ ತೆಂಡುಲ್ಕರ್, ನಿಮ್ಮ ಪ್ರಾರ್ಥನೆ ಹಾಗೂ ಹಾರೈಕೆಗಳಿಗೆ ಧನ್ಯವಾದಗಳು. ವೈದ್ಯಕೀಯ ಸಿಬ್ಬಂದಿಗಳ ಸಲಹೆಯ ಮೇರೆಗೆ ಮುನ್ನೆಚ್ಚರಿಕಾ ಕ್ರಮವಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಇನ್ನು ಕೆಲವೇ ದಿನಗಳಲ್ಲಿ ನಾನು ಮನೆಗೆ ವಾಪಾಸಾಗುವ ವಿಶ್ವಾಸವಿದೆ. ಎಲ್ಲರೂ ತಮ್ಮ ಆರೋಗ್ಯ ಕಾಳಜಿ ವಹಿಸುವ ಮೂಲಕ ಸುರಕ್ಷಿತವಾಗಿರಿ ಎಂದು ಟ್ವೀಟ್‌ ಮಾಡಿದ್ದಾರೆ.
undefined
ಸಚಿನ್ ತೆಂಡುಲ್ಕರ್‌ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವಾಸವಾಗಿದ್ದು, ಎರಡನೇ ಹಂತದಲ್ಲಿ ಅತಿವೇಗವಾಗಿ ಕೋವಿಡ್‌ ಸ್ಪೋಟಗೊಳ್ಳುತ್ತಿರುವ ರಾಜ್ಯಗಳಲ್ಲಿ ಮೊದಲ ಸ್ಥಾನ ಪಡೆದಿದೆ.
undefined
ಸಚಿನ್ ತೆಂಡುಲ್ಕರ್‌ ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವಾಸವಾಗಿದ್ದು, ಎರಡನೇ ಹಂತದಲ್ಲಿ ಅತಿವೇಗವಾಗಿ ಕೋವಿಡ್‌ ಸ್ಪೋಟಗೊಳ್ಳುತ್ತಿರುವ ರಾಜ್ಯಗಳಲ್ಲಿ ಮೊದಲ ಸ್ಥಾನ ಪಡೆದಿದೆ.
undefined
click me!