ಗೌತಮ್ ಗಂಭೀರ್ ಕೋಚ್ ಆದ ನಂತರ ಯುವ ಆಟಗಾರರಿಗೆ ಆದ್ಯತೆ ನೀಡಲಾಗುತ್ತಿದೆ. ಈ ಬದಲಾವಣೆಯಿಂದಾಗಿ, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ, ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಪ್ರಮುಖ ಹಿರಿಯ ಆಟಗಾರರು ತಂಡದಿಂದ ಹೊರಗುಳಿದಿದ್ದಾರೆ. ಈ ಕುರಿತ ಸ್ಟೋರಿ ಇಲ್ಲಿದೆ.
ಜುಲೈ 2024ರಲ್ಲಿ ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡರು. ಆರಂಭದಿಂದಲೂ ಗಂಭೀರ್ ಅವರು ತಂಡದಲ್ಲಿ ಯುವ ಆಟಗಾರರಿಗೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದ್ದಾರೆ. ಐಪಿಎಲ್ 2026 ರ ನಂತರ ವೈಭವ್ ಸೂರ್ಯವಂಶಿ, ಪ್ರಿನ್ಸ್ ಯಾದವ್, ಗುರ್ನೂರ್ ಮತ್ತು ಸೂರ್ಯಾಂಶ್ ಶೆಡ್ಗೆ ಸೇರಿದಂತೆ ಹಲವು ಯುವ ಪ್ರತಿಭೆಗಳು ಈಗಾಗಲೇ ಅಂತರರಾಷ್ಟಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ.
ಆದರೆ, ಯುವ ಆಟಗಾರರಿಗೆ ಮಣೆ ಹಾಕುವ ಈ ಪರ್ವದಲ್ಲಿ ತಂಡದ ಕೆಲವು ಪ್ರಮುಖ ಹಿರಿಯ ಆಟಗಾರರು ನಿಧಾನವಾಗಿ ಕಣ್ಮರೆಯಾಗುತ್ತಿದ್ದಾರೆ. ಗಂಭೀರ್ ಮಾರ್ಗದರ್ಶನದಲ್ಲಿ ವೃತ್ತಿಜೀವನ ಬಹುತೇಕ ಅಂತ್ಯದ ಹಂತಕ್ಕೆ ತಲುಪಿದಂತೆ ಕಾಣಿಸುತ್ತಿರುವ ಮೂವರು ಪ್ರಮುಖ ಹಿರಿಯ ಆಟಗಾರರ ವಿವರ ಇಲ್ಲಿದೆ.
24
ಮೊಹಮ್ಮದ್ ಶಮಿ (Mohammed Shami)
ಮೊಹಮ್ಮದ್ ಶಮಿ ಅವರು 2025 ರ ಚಾಂಪಿಯನ್ಸ್ ಟ್ರೋಫಿಯ ನಂತರ ಭಾರತ ತಂಡದ ಪರ ಯಾವುದೇ ಪಂದ್ಯವನ್ನು ಆಡಿಲ್ಲ. ಅಂದಿನಿಂದ ಆಯ್ಕೆಗಾರರು ಶಮಿ ಅವರನ್ನು ನಿರಂತರವಾಗಿ ಕಡೆಗಣಿಸುತ್ತಾ ಬಂದಿದ್ದಾರೆ. ರಾಷ್ಟ್ರೀಯ ತಂಡದಿಂದ ಹೊರಬಿದ್ದ ನಂತರ ಶಮಿ ದೇಶಿ ಕ್ರಿಕೆಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. 2025-26ರ ರಣಜಿ ಟ್ರೋಫಿ ಸೀಸನ್ನ 7 ಪಂದ್ಯಗಳಲ್ಲಿ 37 ವಿಕೆಟ್, ವಿಜಯ್ ಹಜಾರೆ ಟ್ರೋಫಿಯ 7 ಪಂದ್ಯಗಳಲ್ಲಿ 15 ವಿಕೆಟ್ ಹಾಗೂ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ 16 ವಿಕೆಟ್ ಸೇರಿದಂತೆ ಒಟ್ಟು 68 ವಿಕೆಟ್ಗಳನ್ನು ಕಬಳಿಸಿದ್ದಾರೆ. ಇತ್ತೀಚೆಗೆ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಈ ಬಗ್ಗೆ ಪ್ರತಿಕ್ರಿಯಿಸಿ, ಫಿಟ್ನೆಸ್ ಕಾರಣದಿಂದಾಗಿ ಶಮಿ ಅವರನ್ನು ತಂಡದಿಂದ ಹೊರಗಿಡಲಾಗಿದೆ ಎಂದಿದ್ದರು. ಆದರೆ ದೇಶಿ ಕ್ರಿಕೆಟ್ನಲ್ಲಿ ಅವರು ತೋರಿದ ಬದ್ಧತೆ ಮತ್ತು ಕಬಳಿಸಿದ ವಿಕೆಟ್ಗಳು ಅವರ ಫಿಟ್ನೆಸ್ಗೆ ಸಾಕ್ಷಿಯಾಗಿವೆ.
34
ರವೀಂದ್ರ ಜಡೇಜಾ (Ravindra Jadeja)
ಭಾರತ ತಂಡದ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಟೀಮ್ ಇಂಡಿಯಾದಿಂದ ಯಾವಾಗ ದೂರವಾದರು ಎಂಬುದು ಯಾರಿಗೂ ಸರಿಯಾಗಿ ತಿಳಿಯಲಿಲ್ಲ. 2024 ರ ಟಿ20 ವಿಶ್ವಕಪ್ ಗೆಲುವಿನ ನಂತರ ಅವರು ಟಿ20 ಮಾದರಿಗೆ ನಿವೃತ್ತಿ ಘೋಷಿಸಿದ್ದರು. ಈ ವರ್ಷದ ಜನವರಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ ಜಡೇಜಾ ಅವರು ಟೆಸ್ಟ್ ಆಗಲಿ ಅಥವಾ ಏಕದಿನ ತಂಡದಲ್ಲಾಗಲಿ ಕಾಣಿಸಿಕೊಂಡಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯ ಹಾಗೂ ನಂತರ ನಡೆದ ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಗಳಿಗೂ ಇವರನ್ನು ಆಯ್ಕೆ ಮಾಡಲಾಗಿಲ್ಲ.
ಕಳೆದ ವರ್ಷದವರೆಗೂ ಭಾರತ ತಂಡದ ಪ್ರಮುಖ ವೇಗಿಗಳಲ್ಲಿ ಒಬ್ಬರಾಗಿದ್ದ ಮೊಹಮ್ಮದ್ ಸಿರಾಜ್ ಅವರ ಸ್ಥಾನ ಈಗ ತೂಗುಯ್ಯಾಲೆಯಲ್ಲಿದೆ. ಸದ್ಯ ಅವರು ಟಿ20 ಮತ್ತು ಏಕದಿನ ತಂಡಗಳಿಂದ ಸಂಪೂರ್ಣವಾಗಿ ಹೊರಗುಳಿದಿದ್ದಾರೆ. ಇತ್ತೀಚೆಗೆ ಅಫ್ಘಾನಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಮಾತ್ರ ಅವರು ಕಾಣಿಸಿಕೊಂಡಿದ್ದರು. ಪ್ರಸ್ತುತ ಅವರನ್ನು ಏಕದಿನ ತಂಡಕ್ಕೆ ಪರಿಗಣಿಸುತ್ತಿಲ್ಲದಿರುವುದನ್ನು ಗಮನಿಸಿದರೆ, ಅವರು 2027 ರ ಏಕದಿನ ವಿಶ್ವಕಪ್ನ ಯೋಜನೆಯಲ್ಲಿಲ್ಲ ಎಂಬುದು ಸ್ಪಷ್ಟವಾಗುತ್ತದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.