ಟೀಂ ಇಂಡಿಯಾದಲ್ಲಿ ಬಿಗಡಾಯಿಸಿದ ಸಮಸ್ಯೆ, ಗಂಭೀರ್ ಬಳಗದ ಸಹಾಯಕ ಕೋಚ್ ಶೀಘ್ರದಲ್ಲೇ ರಾಜೀನಾಮೆ

Published : Jul 11, 2026, 06:33 PM IST

ಸತತ ಸರಣಿ ಸೋಲಿನಿಂದ ಟೀಂ ಇಂಡಿಯಾದಲ್ಲಿ ಸಮಸ್ಯೆ ತೀವ್ರಗೊಂಡಿದೆ. ಗೌತಮ್ ಗಂಭೀರ್ ಪಾಳಯದ ಕೆಲ ಸಹಾಯಕ ಕೋಚ್‌ಗಳು ರಾಜೀನಾಮೆಗೆ ಸಜ್ಜಾಗಿದ್ದಾರೆ. ಇತ್ತ ಐಪಿಎಲ್ ತಂಡದ ಜೊತೆಗೆ ಮಾತುಕತೆಯೂ ನಡೆಸಿದ್ದಾರೆ.

PREV
16
ಗಂಭೀರ್ ಕೋಚಿಂಗ್ ಪಾಳಯದಲ್ಲಿ ಕೋಲಾಹಲ

ಐರ್ಲೆಂಡ್ ಹಾಗೂ ಇಂಗ್ಲೆಂಡ್ ಸರಣಿ ಸೋಲು ಟೀಂ ಇಂಡಿಯಾದಲ್ಲಿ ಕೋಲಾಹಲ ಎಬ್ಬಿಸಿದೆ. ಪ್ರಮುಖವಾಗಿ ಟೀಂ ಮ್ಯಾನೇಜ್ಮೆಂಟ್ ಹಾಗೂ ಕೋಚ್ ಗಂಭೀರ್ ಮೇಲೆ ಗಂಭೀರ ಟೀಕೆಗಳು ಎದುರಾಗಿದೆ. ಟಿ20 ಚಾಂಪಿಯನ್ ತಂಡವನ್ನು ತಮ್ಮ ವೈಯುಕ್ತಿಕ ನಿರ್ಧಾರಗಳಿಂದ ಹಳ್ಳ ಹಿಡಿಸಿದ್ದಾರೆ ಅನ್ನೋ ಆರೋಪಗಳು ಕೇಳಿಬಂದಿದೆ. ಇದರ ಬೆನ್ನಲ್ಲೇ ಮತ್ತೊಂದು ಕೋಲಾಹಲ ಎದ್ದಿದೆ. ಟೀಂ ಇಂಡಿಯಾ ಪಾಳಯದಲ್ಲಿ ಸಮಸ್ಯೆಗಳು ತೀವ್ರಗೊಂಡಿದ್ದು, ಶೀಘ್ರದಲ್ಲೇ ಕೋಚ್ ಗೌತಮ್ ಗಂಭೀರ್ ಸಹಾಯ ಕೋಚ್‌ಗಳು ರಾಜೀನಾಮೆ ನೀಡಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.

26
ಸಪೋರ್ಟ್ ಸ್ಟಾಫ್ ರಾಜೀನಾಮೆಗೆ ಸಿದ್ದತೆ

ಗೌತಮ್ ಗಂಭೀರ್ ಟೀಂ ಇಂಡಿಯಾ ಪ್ರಧಾನ ಕೋಚ್. ಇನ್ನು ಬ್ಯಾಟಿಂಗ್ ಕೋಚ್, ಬೌಲಿಂಗ್ ಸೇರಿದಂತೆ ಸಹಾಯಕ ಸಿಬ್ಬಂದಿಗಳಿದ್ದಾರೆ. ಇದೀಗ ಕೋಚಿಂಗ್ ಪಾಳಯದಲ್ಲಿ ಸಮಸ್ಯೆ ತೀವ್ರಗೊಂಡಿದೆ. ಪರಿಣಾಮ ಸಪೋರ್ಟ್ ಸ್ಟಾಫ್ ಅವಧಿಗೂ ಮೊದಲೇ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

36
ಅವಧಿಗೂ ಮೊದಲೇ ತಂಡ ತೊರೆಯುವ ನಿರ್ಧಾರ

ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಆಗಿ ಟಿ ದಿಲೀಪ್, ರ್ಯಾನ್ ಟೆನ್ ಡೊಶೆಟ್ ಮಾರ್ಗದರ್ಶನ ನೀಡುತ್ತಿದ್ದಾರೆ. ಇತ್ತ ಮಾರ್ನೆ ಮಾರ್ಕೆಲ್ ಬೌಲಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮೂವರು 2 ವರ್ಷದ ಒಪ್ಪಂದ ಹಾಗೂ ಒಂದು ವರ್ಷ ಅವಧಿ ವಿಸ್ತರಣೆ ಮಾಡುವ ಆಯ್ಕೆಯನ್ನು ಹೊಂದಿದ್ದಾರೆ. ಆದರೆ ಈ ಪೈಕಿ ಸಹಾಯಕ ಸ್ಟಾಫ್‌ಗಳು ಅವಧಿಗೂ ಮೊದಲೇ ತಂಡ ತೊರೆಯುವ ಮಾತುಗಳು ನೆಡೆದಿದೆ ಎನ್ನಲಾಗುತ್ತಿದೆ.

46
ಐಪಿಎಲ್ ತಂಡದ ಜೊತೆ ಮಾತುಕತೆ

ಮೂಲಗಳ ಪ್ರಕಾರ ಟೀಂ ಇಂಡಿಯಾ ಸಪೋರ್ಟ್ ಸ್ಟಾಫ್ ಐಪಿಎಲ್ ಫ್ರಾಂಚೈಸಿ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಾಲಾಗಿದೆ. ಐಪಿಎಲ್ ಹಾಗೂ ಇತರ ವಿದೇಶಿ ಲೀಗ್‌ಗಳಲ್ಲಿ ತಂಡ ಹೊಂದಿರುವ ಫ್ರಾಂಚೈಸಿ ಜೊತೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಶೀಘ್ರದಲ್ಲೇ ಟೀಂ ಇಂಡಿಯಾ ಸಪೋರ್ಟ್ ಸ್ಟಾಫ್ ಸ್ಥಾನಕ್ಕೆ ರಾಜೀನಾಮೆ ನೀಡಿ ಫ್ರಾಂಚೈಸಿ ಸೇರಿಕೊಳ್ಳುವ ಸಾಧ್ಯತೆ ಇದೆ.

56
ಗಂಭೀರ್ ತಲೆದಂಡಕ್ಕೆ ಆಗ್ರಹ

ಟೀಂ ಇಂಡಿಯಾ ಕಳಪೆ ಪ್ರದರ್ಶನ, ಆಟಗಾರರ ಸ್ಥಾನ, ಅವಕಾಶಗಳ ಕುರಿತು ಕೋಚ್ ಗೌತಮ್ ಗಂಭೀರ್ ವಿರುದ್ಧ ಆರೋಪಗಳು ಕೇಳಿಬರುತ್ತಿದೆ. ಟೀಂ ಇಂಡಿಯಾ ಕೋಚಿಂಗ್ ಸ್ಥಾನದಿಂದ ಗಂಭೀರ್ ವಜಾ ಮಾಡಿ ಅನ್ನೋ ಆಕ್ರೋಶಗಳು ವ್ಯಕ್ತವಾಗುತ್ತಿದೆ. ಇತ್ತ ಬಿಸಿಸಿಐ ಸೋಲಿನ ಪರಾಮರ್ಶೆ ನಡೆಸಲು ಮುಂದಾಗಿದೆ.

66
ಟೀಂ ಇಂಡಿಯಾದಲ್ಲೂ ಬದಲಾವಣೆಗೆ ಆಗ್ರಹ

2026ರಲ್ಲಿ ಟೀಂ ಇಂಡಿಯಾ ಟಿ20 ಚಾಂಪಿಯನ್ ಆಗಿತ್ತು. ಆದರೆ ಕೇವಲ ನಾಲ್ಕು ತಿಂಗಳಿಗೆ ಭಾರತ ತಂಡ ಇದೀ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ದ ಮುಗ್ಗರಿಸಿ ಮುಖಭಂಗ ಅನುಭವಿಸಿದೆ. ಹೀಗಾಗಿ ತಂಡದಲ್ಲೂ ಕೆಲ ಬದಲಾವಣೆ ಮಾಡಲು ಮುಂದಾಗಿದೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories