ಗುವಾಹಟಿ: ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯವು ಇಂದು ಗುವಾಹಟಿಯಲ್ಲಿ ಆರಂಭವಾಗಲಿದ್ದು, ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಸರಣಿ ಗೆಲ್ಲುವ ಲೆಕ್ಕಾಚಾರದಲ್ಲಿದೆ. ಟೀಂ ಇಂಡಿಯಾದಲ್ಲಿ ಒಂದು ಮೇಜರ್ ಚೇಂಜ್ ಆಗುವ ಸಾಧ್ಯತೆಯಿದೆ.
ನ್ಯೂಜಿಲೆಂಡ್ ವಿರುದ್ಧದ ಮೊದಲೆರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿ ಗೆಲುವು ದಾಖಲಿಸಿದ್ದ ಭಾರತ, ಭಾನುವಾರ ಇಲ್ಲಿ ನಡೆಯಲಿರುವ 3ನೇ ಟಿ20 ಪಂದ್ಯದಲ್ಲೂ ಜಯ ಸಾಧಿಸಿ 5 ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳಲು ಎದುರು ನೋಡುತ್ತಿದೆ.
26
ಒತ್ತಡದಲ್ಲಿ ಸಂಜು ಸ್ಯಾಮ್ಸನ್
ನಾಯಕ ಸೂರ್ಯಕುಮಾರ್, ಇಶಾನ್ ಕಿಶನ್ ಲಯ ಕಂಡುಕೊಂಡಿರುವುದು ತಂಡದ ಬ್ಯಾಟಿಂಗ್ ಬಲ ಹೆಚ್ಚಿಸಿದ್ದು, ಸಂಜು ಸ್ಯಾಮ್ಸನ್ ಸ್ಥಿರ ಆಟ ಪ್ರದರ್ಶಿಸಬೇಕಾದ ಒತ್ತಡದಲ್ಲಿದ್ದಾರೆ.
36
ದೊಡ್ಡ ಮೊತ್ತ ಕಲೆಹಾಕಬೇಕಾದ ಅನಿವಾರ್ಯತೆ ಸಂಜು ಸ್ಯಾಮ್ಸನ್ಗೆ
ಕಳೆದ ಪಂದ್ಯದಲ್ಲಿ ಇಶಾನ್ ಕಿಶನ್ ಸ್ಪೋಟಕ ಬ್ಯಾಟಿಂಗ್ ನಡೆಸಿರುವುದರಿಂದ ಇದೀಗ ಸಂಜು ಸ್ಯಾಮ್ಸನ್, ದೊಡ್ಡ ಮೊತ್ತ ಕಲೆಹಾಕಲೇಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಮುಂಬರುವ ಟಿ20 ವಿಶ್ವಕಪ್ಗೂ ಮುನ್ನ ಸಂಜು ಲಯಕ್ಕೆ ಮರಳಬೇಕಿದೆ.
ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಆಡುವ ಸಾಧ್ಯತೆ ಇದೆ. ಆಲ್ರೌಂಡರ್ ಜೇಮ್ಸ್ ನೀಶಮ್ ಕಿವೀಸ್ ತಂಡ ಕೂಡಿಕೊಂಡಿದ್ದು, ಇಂದು ಕಣಕ್ಕಿಳಿಯಬಹುದು. ಇಲ್ಲಿನ ಪಿಚ್ ಬ್ಯಾಟಿಂಗ್ ಸ್ನೇಹಿ ಎನಿಸಿದ್ದು, ದೊಡ್ಡ ಸ್ಕೋರ್ ನಿರೀಕ್ಷಿಸಬಹುದಾಗಿದೆ.
56
ಸರಣಿ ಗೆಲ್ಲುವ ವಿಶ್ವಾಸದಲ್ಲಿ ಟೀಂ ಇಂಡಿಯಾ
ಭಾರತ ತಂಡವು ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ್ದು, ಇದೀಗ ಇನ್ನೂ ಎರಡು ಪಂದ್ಯ ಬಾಕಿ ಇರುವಂತೆಯೇ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಇಂದಿನ ಪಂದ್ಯ ಗೆದ್ದರೇ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಬೆಂಚ್ ಸ್ಟ್ರೆಂಥ್ ಪರೀಕ್ಷಿಸುವ ಲೆಕ್ಕಾಚಾರದಲ್ಲಿದೆ ಭಾರತ.
66
ನೇರ ಪ್ರಸಾರದ ವಿವರ
ಇನ್ನು ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಪಂದ್ಯವು ಇಂದು ಸಂಜೆ 7 ಗಂಟೆಯಿಂದ ಆರಂಭವಾಗಲಿದ್ದು, ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಹಾಗೂ ಜಿಯೋ ಹಾಟ್ಸ್ಟಾರ್ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.