Ind vs NZ Mumbai Test: ಎರಡನೇ ಟೆಸ್ಟ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್. ಮೂವರು ಆಟಗಾರರು ಔಟ್‌!

Suvarna News   | Asianet News
Published : Dec 03, 2021, 10:05 AM ISTUpdated : Dec 03, 2021, 03:21 PM IST

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಎರಡನೇ ಟೆಸ್ಟ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಮುಂಬೈನಲ್ಲಿ (Mumbai) ಕಳೆದೆರಡು ದಿನ ಸುರಿದ ನಿರಂತರ ಮಳೆಯಿಂದಾಗಿ ಪಂದ್ಯ ನಿಗದಿತ ಸಮಯಕ್ಕೆ ಆರಂಭವಾಗಿಲ್ಲ. ಹೀಗಿರುವಾಗಲೇ ಸರಣಿ ಗೆಲ್ಲಲು ಎದುರು ನೋಡುತ್ತಿರುವ ಭಾರತ ತಂಡಕ್ಕೆ (Indian Cricket Team) ಅತಿದೊಡ್ಡ ಶಾಕ್ ಎದುರಾಗಿದ್ದು, ತಂಡದ ಮೂರು ಸ್ಟಾರ್ ಆಟಗಾರರು ಎರಡಮೇ ಟೆಸ್ಟ್ ಪಂದ್ಯದಿಂದ (Test Cricket) ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

PREV
18
Ind vs NZ Mumbai Test: ಎರಡನೇ ಟೆಸ್ಟ್‌ ಆರಂಭಕ್ಕೂ ಮುನ್ನ ಟೀಂ ಇಂಡಿಯಾಗೆ ಬಿಗ್. ಮೂವರು ಆಟಗಾರರು ಔಟ್‌!

ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಕಾನ್ಪುರದ ಗ್ರೀನ್‌ ಪಾರ್ಕ್‌ ಕ್ರಿಕೆಟ್‌ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ಮೂಲದ ರಚಿನ್ ರವೀಂದ್ರ ಹಾಗೂ ಅಜಾಜ್ ಪಟೇಲ್‌ ದಿಟ್ಟ ಹೋರಾಟ ನಡೆಸುವ ಮೂಲಕ ಪಂದ್ಯ ರೋಚಕ ಡ್ರಾದಲ್ಲಿ ಅಂತ್ಯವಾಗುವಂತೆ ಮಾಡಿದ್ದರು.

28

ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಡ್ರಾದಲ್ಲಿ ಅಂತ್ಯವಾಗಿದ್ದರಿಂದ ಇದೀಗ ಎರಡನೇ ಟೆಸ್ಟ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಹೀಗಿರುವಾಗಲೇ ಎರಡನೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ಮಳೆ ಸುರಿದಿದ್ದರಿಂದ ಮುಂಬೈನ ವಾಂಖೆಡೆ ಮೈದಾನದಲ್ಲಿ ಇನ್ನೂ ಟಾಸ್ ಕೂಡಾ ನಡೆದಿಲ್ಲ.

38

ಎರಡನೇ ಟೆಸ್ಟ್ ಪಂದ್ಯ ಗೆದ್ದು ತವರಿನಲ್ಲಿ ಸರಣಿ ಕೈವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದ್ದ ಟೀಂ ಇಂಡಿಯಾಗೆ ಬಿಗ್‌ ಶಾಕ್ ಎದುರಾಗಿದ್ದು, ತಂಡದ ಮೂವರು ಅನುಭವಿ ಕ್ರಿಕೆಟಿಗರು ಮುಂಬೈ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ.

48

ಹೌದು, ಟೀಂ ಇಂಡಿಯಾ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ ಹಾಗೂ ವೇಗಿ ಇಶಾಂತ್ ಶರ್ಮಾ ಮುಂಬೈ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿರುವುದಾಗಿ ಬಿಸಿಸಿಐ ಖಚಿತಪಡಿಸಿದೆ. 

58

ಕಿವೀಸ್ ವಿರುದ್ದದ ಮೊದಲ ಟೆಸ್ಟ್‌ ಪಂದ್ಯದ ಕೊನೆಯ ದಿನದಾಟದಲ್ಲಿ ಇಶಾಂತ್ ಶರ್ಮಾ ಅವರ ಎಡ ಕಿರುಬೆರಳು ಕೀಲು ತಪ್ಪಿದ್ದು, ವೈದ್ಯಕೀಯ ಸಿಬ್ಬಂದಿಗಳು ಅವರ ಬೆರಳಿನ ಮೇಲೆ ನಿಗಾಯಿಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಸಿಸಿಐ ತಿಳಿಸಿದೆ.
 

68

ಇನ್ನು ಮೊದಲ ಟೆಸ್ಟ್‌ ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದಷ್ಟೇ ಅಲ್ಲದೇ ಬೌಲಿಂಗ್‌ನಲ್ಲೂ ನೆರವಾಗಿದ್ದ ಆಲ್ರೌಂಡರ್ ರವೀಂದ್ರ ಜಡೇಜಾ ಅವರ ಬಲ ಮುಂಗೈ ಗಾಯಗೊಂಡಿದ್ದು, ವೈದ್ಯಕೀಯ ಸಿಬ್ಬಂದಿ ವಿಶ್ರಾಂತಿ ಪಡೆಯಲು ಸೂಚಿಸಿರುವುದರಿಂದ ಜಡ್ಡು ಸಹಾ ಎರಡನೇ ಟೆಸ್ಟ್ ಪಂದ್ಯದಿಂದ ಹೊರಬಿದ್ದಿದ್ದಾರೆ.
 

78
Ajinkya Rahane

ಇನ್ನು ಅಜಿಂಕ್ಯ ರಹಾನೆ ಕಾನ್ಪುರ ಟೆಸ್ಟ್ ವೇಳೆ ಫೀಲ್ಡಿಂಗ್ ಮಾಡುವಾಗ ಎಡಗಾಲು ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ರಹಾನೆ ಸಂಪೂರ್ಣವಾಗಿ ಸ್ನಾಯು ಸೆಳೆತದಿಂದ ಗುಣಮುಖರಾಗದ ಹಿನ್ನೆಲೆಯಲ್ಲಿ ಮುಂಬೈ ಟೆಸ್ಟ್‌ ಪಂದ್ಯದಿಂದ ಹೊರಬಿದ್ದಿದ್ದಾರೆ.

88

ಇದೀಗ ರಹಾನೆ ಬದಲಿಗೆ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ ಬದಲಿಗೆ ಮೊಹಮ್ಮದ್ ಸಿರಾಜ್ ತಂಡ ಕೂಡಿಕೊಳ್ಳುವುದು ಖಚಿತ ಎನಿಸಿದ್ದು, ಜಡೇಜಾ ಬದಲಿಗೆ ಯಾರು ತಂಡ ಕೂಡಿಕೊಳ್ಳಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.

Read more Photos on
click me!

Recommended Stories