ಬೆಂಗಳೂರು: ಭಾರತ ಹಾಗೂ ಶ್ರೀಲಂಕಾ (India vs Sri Lanka) ನಡುವಿನ ಮೂರು ಪಂದ್ಯಗಳ ಟಿ20 ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 24ರಿಂದ ಆರಂಭವಾಗಲಿರುವ ಲಂಕಾ ಎದುರಿನ ಟಿ20 ಸರಣಿಗೂ ಮುನ್ನ ಟೀಂ ಇಂಡಿಯಾಗೆ (Team India) ಬಿಗ್ ಶಾಕ್ ಎದುರಾಗಿದ್ದು, ಭಾರತ ತಂಡದ ಇಬ್ಬರು ಸ್ಟಾರ್ ಆಟಗಾರರು ಹೊರಬಿದ್ದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
ಬಿಸಿಸಿಐ ಮಾಹಿತಿಯ ಪ್ರಕಾರ, ದೀಪಕ್ ಚಹರ್ ಬಲ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರೆ, ಇನ್ನು ವಿಂಡೀಸ್ ಎದುರಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿರುವ ಸೂರ್ಯಕುಮಾರ್ ಯಾದವ್ ಕೂಡಾ ಗಾಯಕ್ಕೆ ಒಳಗಾಗಿದ್ದಾರೆ. ಈ ಇಬ್ಬರು ಆಟಗಾರರು ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
26
ಬಿಸಿಸಿಐ ಮಾಹಿತಿಯ ಪ್ರಕಾರ, ದೀಪಕ್ ಚಹರ್ ಬಲ ತೊಡೆಯ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರೆ, ಇನ್ನು ವಿಂಡೀಸ್ ಎದುರಿನ ಮೂರನೇ ಹಾಗೂ ಕೊನೆಯ ಟಿ20 ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿರುವ ಸೂರ್ಯಕುಮಾರ್ ಯಾದವ್ ಕೂಡಾ ಗಾಯಕ್ಕೆ ಒಳಗಾಗಿದ್ದಾರೆ. ಈ ಇಬ್ಬರು ಆಟಗಾರರು ಬೆಂಗಳೂರಿನಲ್ಲಿರುವ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.
36
ಈ ಇಬ್ಬರು ಆಟಗಾರರ ಅನುಪಸ್ಥಿತಿ ಟೀಂ ಇಂಡಿಯಾಗೆ ಕೊಂಚ ಹಿನ್ನಡೆಯಾಗುವ ಸಾಧ್ಯತೆಯಿದೆ. 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 27ರಿಂದ ಆರಂಭವಾಗುವ ಸಾಧ್ಯತೆಯಿದ್ದು, ಈ ವೇಳೆಗಾಗಲೇ ಸಂಪೂರ್ಣ ಫಿಟ್ ಆಗುವ ಸಾಧ್ಯತೆಯಿದೆ.
46
ದೀಪಕ್ ಚಹರ್ ಅವರನ್ನು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸಿಯು 14 ಕೋಟಿ ರುಪಾಯಿ ನೀಡಿ ತನ್ನ ತೆಕ್ಕೆಗೆ ಸೆಳೆದುಕೊಂಡಿತ್ತು. ಇನ್ನು 5 ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು 8 ಕೋಟಿ ರುಪಾಯಿ ನೀಡಿ ಹರಾಜಿಗೂ ಮುನ್ನವೇ ರೀಟೈನ್ ಮಾಡಿಕೊಂಡಿತ್ತು.
56
ತುಂಬಾ ಕುತೂಹಲಕಾರಿ ಅಂಶವೆಂದರೆ, ಇದುವರೆಗೂ ಬಿಸಿಸಿಐ, ದೀಪಕ್ ಚಹರ್ ಹಾಗೂ ಸೂರ್ಯಕುಮಾರ್ ಯಾದವ್ ಅವರಿಗೆ ಬದಲಿ ಆಟಗಾರರನ್ನು ಹೆಸರಿಸಿಲ್ಲ. ಈಗಾಗಲೇ ಲಂಕಾ ಎದುರಿನ ಸರಣಿಗೆ 16 ಆಟಗಾರನ್ನೊಳಗೊಂಡ ತಂಡವನ್ನು ಪ್ರಕಟಿಸಲಾಗಿದೆ. ಈ ಇಬ್ಬರು ಆಟಗಾರರು ಲಂಕಾ ಎದುರಿನ ಸೀಮಿತ ಓವರ್ಗಳ ಸರಣಿಯಲ್ಲಿ ಸ್ಥಾನ ಪಡೆದಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.