ಜಿಂಬಾಬ್ವೆ ಪ್ರವಾಸದಿಂದ ವಾಷಿಂಗ್ಟನ್ ಸುಂದರ್ ಔಟ್, RCB ಕ್ರಿಕೆಟಿಗನಿಗೆ ಒಲಿದ ಜಾಕ್ಪಾಟ್..!
First Published Aug 16, 2022, 3:35 PM ISTಹರಾರೆ: ಮೂರು ಪಂದ್ಯಗಳ ಏಕದಿನ ಸರಣಿಯನ್ನಾಡಲು ಕೆ ಎಲ್ ರಾಹುಲ್ ನೇತೃತ್ವದ ಭಾರತ ಕ್ರಿಕೆಟ್ ತಂಡವು ಈಗಾಗಲೇ ಜಿಂಬಾಬ್ವೆಗೆ ಬಂದಿಳಿದಿದೆ. ಜಿಂಬಾಬ್ವೆ ಎದುರಿನ ಏಕದಿನ ಸರಣಿಗೂ ಮುನ್ನ ಭುಜದ ನೋವಿಗೆ ತುತ್ತಾಗಿದ್ದ ವಾಷಿಂಗ್ಟನ್ ಸುಂದರ್, ಜಿಂಬಾಬ್ವೆ ಪ್ರವಾಸದಿಂದ ಹೊರಬಿದ್ದಿದ್ದರು. ಇದೀಗ ವಾಷಿಂಗ್ಟನ್ ಸುಂದರ್ ಅವರ ಬದಲಿ ಆಟಗಾರರನ್ನು ಬಿಸಿಸಿಐ ಆಯ್ಕೆ ಸಮಿತಿ ಹೆಸರಿಸಿದ್ದು, ಆರ್ಸಿಬಿ ಆಟಗಾರನಿಗೆ ಜಾಕ್ಪಾಟ್ ಹೊಡೆದಿದೆ.