ಪಂತ್ ಬಳಿಕ ಪಾಕ್ ವೇಗಿ ಮೇಲೆ ಕಣ್ಹಾಕಿದ ಊರ್ವಶಿ; ಆತ ಈಗ ವಿಶ್ವಕಪ್‌ನಿಂದಲೇ ಔಟ್..! ಹಿಡಿಶಾಪ ಹಾಕಿದ ಫ್ಯಾನ್ಸ್

Published : Sep 22, 2023, 04:35 PM IST

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಊರ್ವಶಿ ರೌಟೇಲಾ ಮತ್ತೆ ಸುದ್ದಿಗೆ ಬಂದಿದ್ದಾಳೆ. ರಿಷಭ್ ಪಂತ್ ಬಳಿಕ ಇದೀಗ ಪಾಕಿಸ್ತಾನದ ಮಾರಕ ವೇಗಿಯ ಬಾಳಿನಲ್ಲಿ ಐರನ್ ಲೆಗ್ ಇಟ್ಟಿದ್ದಾರೆ. ಹೀಗಾಗಿ ಪಾಕಿಸ್ತಾನದ ಫ್ಯಾನ್ಸ್, ಬಾಲಿವುಡ್ ನಟಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

PREV
19
ಪಂತ್ ಬಳಿಕ ಪಾಕ್ ವೇಗಿ ಮೇಲೆ ಕಣ್ಹಾಕಿದ ಊರ್ವಶಿ; ಆತ ಈಗ ವಿಶ್ವಕಪ್‌ನಿಂದಲೇ ಔಟ್..! ಹಿಡಿಶಾಪ ಹಾಕಿದ ಫ್ಯಾನ್ಸ್

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯು ಅಕ್ಟೋಬರ್ 05ರಿಂದ ಆರಂಭವಾಗಲಿದ್ದು, ನವೆಂಬರ್ 19ರ ವರೆಗೆ ನಡೆಯಲಿದೆ. ಈ ಬಾರಿ ಸಂಪೂರ್ಣ ವಿಶ್ವಕಪ್ ಟೂರ್ನಿಗೆ ಭಾರತ ಆತಿಥ್ಯ ವಹಿಸಿದ್ದು, 10 ವಿವಿಧ ಸ್ಟೇಡಿಯಂಗಳಲ್ಲಿ ಪಂದ್ಯಾಟಗಳು ನಡೆಯಲಿವೆ.

29

ಇನ್ನು ಏಕದಿನ ವಿಶ್ವಕಪ್ ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಪಾಕಿಸ್ತಾನ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ಗಾಯದ ಸಮಸ್ಯೆಯಿಂದಾಗಿ ಪ್ರಮುಖ ವೇಗಿ ನಸೀಂ ಶಾ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
 

39

ಏಷ್ಯಾಕಪ್ ಟೂರ್ನಿಯಲ್ಲಿ ಪಾಲ್ಗೊಂಡಿದ್ದ ನಸೀಂ ಶಾ, ಕ್ಷೇತ್ರರಕ್ಷಣೆ ಮಾಡುವ ಸಂದರ್ಭದಲ್ಲಿ ಗಾಯಗೊಂಡು ತಂಡದಿಂದ ಹೊರಬಿದ್ದಿದ್ದರು. ಇದಾದ ಬಳಿಕ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದ ನಸೀಂ ಶಾ, ಇದೀಗ ಪ್ರತಿಷ್ಠಿತ ಏಕದಿನ ವಿಶ್ವಕಪ್ ಟೂರ್ನಿಯಿಂದಲೂ ಹೊರಬಿದ್ದಿದ್ದಾರೆ. 

49

ಇನ್ನು ರಿಷಭ್ ಪಂತ್ ಮಾಜಿ ಪ್ರೇಯಸಿ, ಬಾಲಿವುಡ್ ನಟಿ ಊರ್ವಶಿ ರೌಟೇಲಾ, ಪಾಕಿಸ್ತಾನದ ವೇಗಿ ನಸೀಂ ಶಾ ಮೇಲೆ ಕಣ್ಣು ಹಾಕಿದ್ದರು. ಮಾತ್ರವಲ್ಲದೇ ಸೋಷಿಯಲ್ ಮೀಡಿಯಾದಲ್ಲೂ ಒಂದು ಸ್ಟೋರಿ ಪೋಸ್ಟ್‌ ಮಾಡಿ ಸುದ್ದಿಗೆ ಗ್ರಾಸವಾಗಿದ್ದರು.
 

59

ಏಷ್ಯಾಕಪ್ ಟೂರ್ನಿಯ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯವನ್ನು ಮನೆಯ ಟಿವಿಯಲ್ಲಿ ವೀಕ್ಷಿಸುತ್ತಾ, ಪಾಕಿಸ್ತಾನದ ಕ್ರಿಕೆಟಿಗ ನಸೀಂ ಶಾ ಅವರಿರುವ ಫೋಟೋವನ್ನು ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಂ ಸ್ಟೇಟಸ್‌ನಲ್ಲಿ ಸ್ಟೋರಿ ಪೋಸ್ಟ್ ಮಾಡಿದ್ದರು. ಇದರ ಬೆನ್ನಲ್ಲೇ ನಸೀಂ ಶಾ ಅವರಿಗೆ ಬಿಗ್ ಶಾಕ್ ಎದುರಾಗಿದೆ.

69

ನಸೀಂ ಶಾ ಮೇಲೆ ಕಣ್ಣಿಟ್ಟಿದ್ದ ಸನಮ್‌ ರೇ ಸಿನಿಮಾ ಖ್ಯಾತಿಯ ಊರ್ವಸಿ ರೌಟೇಲಾ, ಅವರ ಕ್ರಿಕೆಟ್ ಬದುಕಿಗೆ ಕಂಟಕವಾಗಿ ಪರಿಣಮಿಸಿದ್ದಾರೆ. ನಸೀಂ ಶಾ ಮೇಲೆ ಕಣ್ಣು ಹಾಕಿದ್ದರಿಂದಲೇ ಪಾಕ್ ವೇಗಿ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ ಎಂದು ಪಾಕ್ ಫ್ಯಾನ್ಸ್, ಊರ್ವಶಿಗೆ ಹಿಡಿ ಶಾಪ ಹಾಕಲಾರಂಭಿಸಿದ್ದಾರೆ.

79

ಇನ್ನು ಇದಕ್ಕೂ ಮೊದಲು ಬಾಲಿವುಡ್ ನಟಿ ಊರ್ವಶಿ ರೌಟೇಲಾ ಅವರ ಹೆಸರು ಟೀಂ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಜತೆ ಥಳುಕು ಹಾಕಿಕೊಂಡಿತ್ತು. ಇದಾದ ಬಳಿಕ ಈ ಇಬ್ಬರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಮುಸುಕಿನ ಗುದ್ದಾಟ ಕೂಡಾ ನಡೆದಿತ್ತು.
 

89

ಇದಾದ ಕೆಲವೇ ತಿಂಗಳಿನಲ್ಲಿ ರಿಷಭ್ ಪಂತ್, ಕಳೆದ ಡಿಸೆಂಬರ್ 30ರಂದು ತಡರಾತ್ರಿ ಕಾರು ಚಲಾಯಿಸುವಾಗ ಅಪಘಾತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರು. ಪರಿಣಾಮ ಪಂತ್, ಏಕದಿನ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದ್ದಿದ್ದರು.
 

99

ಇದೀಗ ಅದೇ ಪರಿಸ್ಥಿತಿ ನಸೀಂ ಶಾಗೂ ಎದುರಾಗಿದ್ದು, ಊರ್ವಶಿ ಎಂಟ್ರಿಯಿಂದಾಗಿ ನಸೀಂ ಶಾ ಏಕದಿನ ವಿಶ್ವಕಪ್ ಆಡುವ ಕನಸು ಭಗ್ನವಾಗಿದೆ. ಇದು ವಿಶ್ವಕಪ್ ಗೆಲ್ಲಬೇಕೆನ್ನುವ ಕನಸು ಕಾಣುತ್ತಿರುವ ಪಾಕ್ ಪಾಲಿಗಂತೂ ದೊಡ್ಡ ಹೊಡೆತವೇ ಸರಿ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories