ICC T20 World Cup: ಜಸ್ಪ್ರೀತ್ ಬುಮ್ರಾ ಕುರಿತಂತೆ ಅಚ್ಚರಿಯ ಹೇಳಿಕೆ ನೀಡಿದ ಸೌರವ್ ಗಂಗೂಲಿ..!
First Published Oct 1, 2022, 12:28 PM ISTನವದೆಹಲಿ(ಅ.1): ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗಾಯದ ಸಮಸ್ಯೆ ಭಾರತ ಕ್ರಿಕೆಟ್ ತಂಡವನ್ನು ಕಾಡಲಾರಂಭಿಸಿದೆ. ಎರಡನೇ ಟಿ20 ವಿಶ್ವಕಪ್ ಟ್ರೋಫಿ ಗೆಲ್ಲುವ ಕನವರಿಕೆಯಲ್ಲಿರುವ ಭಾರತ ತಂಡವು ಬುಮ್ರಾ ಸೇವೆಯಿಂದ ವಂಚಿತರಾಗುವ ಬಗ್ಗೆ ಸುದ್ದಿಗಳು ಹರಿದಾಡಲಾರಂಭಿಸಿವೆ. ಇದೆಲ್ಲದರ ನಡುವೆ ಬುಮ್ರಾ ಲಭ್ಯತೆ ಕುರಿತಂತೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.