ಬೆಂಗಳೂರು: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನೇತೃತ್ವದ ಟೀಂ ಇಂಡಿಯಾ, ಹೀನಾಯ ಸೋಲು ಅನುಭವಿಸಿದೆ. ಇದರ ನಡುವೆ ವೈಭವ್ ಸೂರ್ಯವಂಶಿಗೆ ಇಂಗ್ಲೆಂಡ್ ಮಾರಕ ವೇಗಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಈ ಕುರಿತಾದ ಡೀಟೈಲ್ಸ್ ಇಲ್ಲಿದೆ.
ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ನೀಡಿದ್ದ 202 ರನ್ಗಳ ಕಠಿಣ ಗುರಿ ಬೆನ್ನತ್ತಿದ ಭಾರತಕ್ಕೆ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಸ್ಪೋಟಕ ಆರಂಭ ಒದಗಿಸಿಕೊಟ್ಟಿದ್ದರು. ಎರಡು ಸಿಕ್ಸರ್ ಸಿಡಿಸಿ ದೊಡ್ಡ ಇನ್ನಿಂಗ್ಸ್ ಕಟ್ಟುವ ಮುನ್ಸೂಚನೆ ನೀಡಿದ್ದ 15 ವರ್ಷದ ವೈಭವ್ ಸೂರ್ಯವಂಶಿಯನ್ನು ಬಲಿ ಪಡೆಯುವಲ್ಲಿ ವೇಗಿ ಜೋಫ್ರಾ ಆರ್ಚರ್ ಯಶಸ್ವಿಯಾದರು. ಇದೀಗ ವೈಭವ್ ಸೂರ್ಯವಂಶಿ ಬಗ್ಗೆ ಆರ್ಚರ್ ಅಚ್ಚರಿಯ ಹೇಳಿಕೆ ನೀಡಿದ್ದು ಮಾತ್ರವಲ್ಲದೇ, ಮುಂಬರುವ ಪಂದ್ಯಗಳ ಕುರಿತಂತೆ ಯುವ ಆಟಗಾರನಿಗೆ ವಾರ್ನಿಂಗ್ ಕೊಟ್ಟಿದ್ದಾರೆ.
26
ಆರ್ಚರ್-ವೈಭವ್ ನಡುವೆ ಶುರುವಾಗಿದೆ ದೊಡ್ಡ ಫೈಟ್
ಜೋಫ್ರಾ ಆರ್ಚರ್ ಹಾಗೂ ವೈಭವ್ ಸೂರ್ಯವಂಶಿ ನಡುವೆ ಈ ಟಿ20 ಸರಣಿಯಲ್ಲಿ ದೊಡ್ಡ ಪೈಪೋಟಿ ಏರ್ಪಟ್ಟಿದೆ. ಎರಡನೇ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ, ಆರ್ಚರ್ಗೆ ಸಿಕ್ಸರ್ ಚಚ್ಚಿದ್ದರು. ಮೂರನೇ ಟಿ20 ಪಂದ್ಯದಲ್ಲೂ ಅದನ್ನೇ ರಿಪೀಟ್ ಮಾಡಿದ್ದರು. ಆದರೆ ಇದಾದ ಬಳಿಕ ಸತತವಾಗಿ ಬೌನ್ಸರ್ ಎಸೆಯುವ ಮೂಲಕ ಆರ್ಚರ್, ಸೂರ್ಯವಂಶಿಯನ್ನು ಕೇವಲ 13 ರನ್ಗಳಿಗೆ ಔಟ್ ಮಾಡುವಲ್ಲಿ ಯಶಸ್ವಿಯಾದರು.
36
ವೈಭವ್ ಔಟ್ ಮಾಡಿದ್ದರ ಬಗ್ಗೆ ಜೋಫ್ರಾ ಆರ್ಚರ್ ಹೇಳಿದ್ದೇನು?
ಭಾರತ-ಇಂಗ್ಲೆಂಡ್ ನಡುವಿನ ಮೂರನೇ ಮ್ಯಾಚ್ ಮುಕ್ತಾಯವಾದ ಬಳಿಕ ಮಾತನಾಡಿದ ಆರ್ಚರ್, ಎರಡು ಸಿಕ್ಸರ್ ಚಚ್ಚಿದ ವೈಭವ್ ಸೂರ್ಯವಂಶಿಯನ್ನು ಔಟ್ ಮಾಡಿ ಸೇಡು ತೀರಿಸಿಕೊಂಡೆ. ಈಗ ಲೆಕ್ಕ ಚುಕ್ತವಾಗಿದೆ ಎಂದೆನಿಸುತ್ತಿದೆ ಎಂದು ಇಂಗ್ಲೆಂಡ್ ಮಾರಕ ವೇಗಿ ಅಭಿಪ್ರಾಯಪಟ್ಟಿದ್ದಾರೆ.
ಇದೀಗ ಭಾರತ ಹಾಗೂ ಇಂಗ್ಲೆಂಡ್ ನಡುವೆ ಇನ್ನೂ ಎರಡು ಟಿ20 ಪಂದ್ಯಗಳು ನಡೆಯುವುದು ಬಾಕಿ ಇದೆ. ಮುಂದಿನ ಎರಡು ಪಂದ್ಯಗಳಿಗೂ ಮುನ್ನ 15 ವರ್ಷದ ಸೂರ್ಯವಂಶಿಗೆ ಆರ್ಚರ್ಗೆ ವಾರ್ನಿಂಗ್ ಕೊಟ್ಟಿದ್ದಾರೆ. ಇನ್ನೂ ಎರಡು ಮ್ಯಾಚ್ ಬಾಕಿ ಇದೆ. ಯಾರು ಬೇಕಾದರೂ ಮೇಲುಗೈ ಸಾಧಿಸಬಹುದು. ಯಾರು ಚೆನ್ನಾಗಿ ಆಡುತ್ತಾರೋ ಅವರೇ ಮೇಲುಗೈ ಸಾಧಿಸುತ್ತಾರೆ ಎಂದು ಆರ್ಚರ್ ಹೇಳಿದ್ದಾರೆ.
56
ಇಂಗ್ಲೆಂಡ್ ಗೆಲುವಿನ ಬಗ್ಗೆ ಆರ್ಚರು ಮಾತು:
ಇನ್ನು ಹಾಲಿ ಚಾಂಪಿಯನ್ ಭಾರತ ಎದುರು ಸತತ ಎರಡು ಗೆಲುವು ಸಾಧಿಸಿದ ಇಂಗ್ಲೆಂಡ್ ಪ್ರದರ್ಶನದ ಬಗ್ಗೆ ಮಾತನಾಡಿದ ಆರ್ಚರ್, ಒಮ್ಮೊಮ್ಮೆ ತಮ್ಮ ಗೆಲುವಿನ ಜೋಶ್ ಅನ್ನು ಕಂಟ್ರೋಲ್ ಮಾಡಬೇಕಾಗುತ್ತದೆ. ನಾವು ಚೆನ್ನಾಗಿ ಆಡಿದ್ದರಿಂದ ಫಲಿತಾಂಶ ನಮ್ಮ ಪರವಾಗಿ ಬಂದಿದೆ ಎಂದು ಆರ್ಚರ್ ಹೇಳಿದ್ದಾರೆ.
66
ಭಾರತ-ಇಂಗ್ಲೆಂಡ್ ನಡುವಿನ ಮುಂದಿನ ಟಿ20 ಮ್ಯಾಚ್ ಯಾವಾಗ?
ಭಾರತ ಹಾಗೂ ಇಂಗ್ಲೆಂಡ್ ನಡುವಿನ ನಾಲ್ಕನೇ ಟಿ20 ಪಂದ್ಯವು ಜುಲೈ 09ರಂದು ಬ್ರಿಸ್ಟಾಲ್ನಲ್ಲಿ ನಡೆಯಲಿದೆ. ಸದ್ಯ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಮೂರು ಪಂದ್ಯಗಳು ಮುಕ್ತಾಯವಾಗಿದ್ದು ಇಂಗ್ಲೆಂಡ್ 2-0 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯ ಮಳೆಯಿಂದ ಅರ್ಧಕ್ಕೆ ರದ್ದಾಗಿತ್ತು. ಇದೀಗ ಸಮಬಲ ಸಾಧಿಸಬೇಕಿದ್ದರೇ ನಾಲ್ಕನೇ ಪಂದ್ಯ ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಟೀಂ ಇಂಡಿಯಾ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.