ಯೋ ಬರ್ಕೋ..ಇವತ್ತು ಗೆಲ್ಲೋದು ನಮ್ RCB ಹುಡುಗರೇ, ಭವಿಷ್ಯ ನುಡಿದ ಶಿವ ರಾಜ್‌ಕುಮಾರ್!

Published : May 18, 2024, 07:58 PM ISTUpdated : May 18, 2024, 08:48 PM IST

ಯೋ ಬರ್ಕಯ್ಯ, ಪೇಪರ್ ಮುಂದಾಗಡೆ ಬರ್ಕೊ, ಶಿವ ರಾಜ್‌ಕುಮಾರ್ ತಮ್ಮ ಸ್ಟೈಲ್‌ನಲ್ಲೇ ಇಂದಿನ ಪಂದ್ಯದ ಭವಿಷ್ಯ ನುಡಿದಿದ್ದಾರೆ.  

PREV
18
ಯೋ ಬರ್ಕೋ..ಇವತ್ತು ಗೆಲ್ಲೋದು ನಮ್ RCB ಹುಡುಗರೇ, ಭವಿಷ್ಯ ನುಡಿದ ಶಿವ ರಾಜ್‌ಕುಮಾರ್!

ಆರ್‌ಸಿಬಿ ಹಾಗೂ ಸಿಎಸ್‌ಕೆ ನಡುವಿನ ಲೀಗ್ ಪಂದ್ಯ ಫೈನಲ್‌ಗಿಂತ ಕುತೂಹಲ ಹೆಚ್ಚಿಸಿದೆ. ಈ ಪಂದ್ಯದಲ್ಲಿ ಉತ್ತಮ ರನ್‌ರೇಟ್‌ನೊಂದಿಗೆ ಗದ್ದರೆ ಆರ್‌ಸಿಬಿ ಪ್ಲೇ ಆಫ್ ಪ್ರವೇಶಿಸಲಿದೆ

28

ಈ ಪಂದ್ಯಕ್ಕೆ ಶಿವರಾಜ್ ಕುಮಾರ್ ಆರ್‌ಸಿಬಿ ಜರ್ಸಿ ತೊಟ್ಟ ಹಾಜರಾಗಿದ್ದಾರೆ. ಇಷ್ಟೇ ಅಲ್ಲ ಈ ಪಂದ್ಯದಲ್ಲಿ ಆರ್‌ಸಿಬಿ ಗೆದ್ದೇ ಗೆಲ್ಲಲಿದೆ ಎಂದು ಶಿವರಾಜ್ ಕುಮಾರ್ ತಮ್ಮದೇ ಸ್ಟೈಲ್‌ನಲ್ಲಿ ಭವಿಷ್ಯ ನುಡಿದಿದ್ದಾರೆ.

38

ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ ಆರ್‌ಸಿಬಿ ಹುಡಗರೇ ಎಂದು ಶಿವರಾಜ್ ಕುಮಾರ್ ಟ್ವೀಟ್ ಮಾಡಿದ್ದಾರೆ.

48

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹಲವು ಸೆಲೆಬ್ರೆಟಿಗಳು ಆಗಮಿಸಿದ್ದರೆ. ಇಂದಿನ ರೋಚಕ ಪಂದ್ಯಕ್ಕೆ ಸಾಕ್ಷಿಯಾಗಿದ್ದಾರೆ. ಇತ್ತ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಹಾಜರಾಗಿದ್ದಾರೆ.

58

ಈಗಾಗಲೇ ಮಹಿಳಾ ಐಪಿಎಲ್ ಟೂರ್ನಿಯಲ್ಲಿ ಆರ್‌ಸಿಬಿಗೆ ಟ್ರೋಫಿ ಗೆಲ್ಲಿಸಿಕೊಟ್ಟ ಚಾಂಪಿಯನ್  ಮಹಿಳಾ ತಂಡ ಇಂದಿನ ಪಂದ್ಯಕ್ಕೆ ಹಾಜರಾಗಿದೆ. 

68

ಸಿಎಸ್‌ಕೆ ತಂಡ ಗೆಲುವು ಸಾಧಿಸಿದರೆ ಪ್ಲೇ ಆಫ್ ಪ್ರವೇಶಿಸಲಿದೆ. ಆದರೆ ಆರ್‌ಸಿಬಿ ಗೆಲುವಿನ ಜೊತೆಗೆ ರನ್‌ರೇಟ್ ಅವಶ್ಯಕತೆ ಇದೆ. ಸದ್ಯ ಆರ್‌ಸಿಬಿ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.

78

ಸದ್ಯ ಪಂದ್ಯಕ್ಕೆ ಮಳೆ ವಕ್ಕರಿಸಿದೆ. ಆರ್‌ಸಿಬಿ 3 ಓವರ್‌ನಲ್ಲಿ 31 ರನ್ ಸಿಡಿಸುತ್ತಿದ್ದಂತೆ ಮಳೆ ಆಗಮಿಸಿದೆ. ಹೀಗಾಗಿ ಪಂದ್ಯವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

88

ಕ್ರೀಡಾಂಗಣದಲ್ಲಿ ಅಭಿಮಾನಿಗಳು ಕೆಲ ಹೊತ್ತು ಮಳೆ ಬ್ರೇಕ್ ಪಡೆದುಕೊಳ್ಳಲು ಪ್ರಾರ್ಥಿಸುತ್ತಿದ್ದರೆ. ರೋಚಕ ಪಂದ್ಯಕ್ಕಾಗಿ ತುದಿಗಾಲಲ್ಲಿ ನಿಂತಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories