ಎಂ ಎಸ್ ಧೋನಿ ಏಕದಿನ ವಿಶ್ವಕಪ್ ವಿನ್ನಿಂಗ್ ಸಿಕ್ಸರ್ ಅಜರಾಮರವಾಗಿಸಿದ ಮುಂಬೈ ಕ್ರಿಕೆಟ್ ಸಂಸ್ಥೆ..!
First Published Apr 8, 2023, 4:16 PM ISTಮುಂಬೈ(ಏ.08): ಮಹೇಂದ್ರ ಸಿಂಗ್ ಧೋನಿ ನೇತೃತ್ವದ ಟೀಂ ಇಂಡಿಯಾ, 2011ರಲ್ಲಿ ಶ್ರೀಲಂಕಾವನ್ನು ಮಣಿಸಿ ಐಸಿಸಿ ಏಕದಿನ ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಮುಂಬೈನ ವಾಂಖೇಡೆ ಮೈದಾನದಲ್ಲಿ ನಡೆದ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಧೋನಿ ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ತಂಡವನ್ನು ಚಾಂಪಿಯನ್ ಪಟ್ಟಕ್ಖೇರಿಸಿದ್ದರು. ಇದೀಗ ಧೋನಿ ಬಾರಿಸಿದ ಚೆಂಡು ಬಿದ್ದ ಸ್ಥಳವನ್ನು ಸ್ಮಾರಕವನ್ನಾಗಿ ಮಾಡುವ ಮೂಲಕ ಮುಂಬೈ ಕ್ರಿಕೆಟ್ ಸಂಸ್ಥೆಯು ಧೋನಿಗೆ ವಿಶೇಷ ಗೌರವ ನೀಡಿದೆ. ಧೋನಿ ಈ ಸ್ಮಾರಕವನ್ನು ಉದ್ಘಾಟಿಸಿದ್ದಾರೆ.