ಭೀಕರ ಕಾರು ಅಪಘಾತದಲ್ಲಿ ತೀವ್ರ ಗಾಯದಿಂದ ಚೇತರಿಸಿಕೊಂಡು ಟೆಸ್ಟ್ ತಂಡಕ್ಕೆ ಮರಳಿದ ಭಾರತದ ವಿಕೆಟ್ ಕೀಪರ್ ರಿಷಭ್ ಪಂತ್ ಅವರನ್ನು ಕೂಡ ಅಶ್ವಿನ್ ಶ್ಲಾಘಿಸಿದ್ದಾರೆ. ಬಾಂಗ್ಲಾದೇಶದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ ಪಂತ್ ತಮ್ಮ ಮರಳುವಿಕೆಯನ್ನು ಸ್ಮರಣೀಯವಾಗಿಸಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಿಷಭ್ ಪಂತ್ ಕ್ರಿಕೆಟ್ ಗಾಗಿ ಹುಟ್ಟಿದ್ದಾರೆ ಮತ್ತು ಅವರ ಸಾಮರ್ಥ್ಯವನ್ನು ಹೆಚ್ಚಾಗಿ ಕಡಿಮೆ ಅಂದಾಜು ಮಾಡಲಾಗುತ್ತದೆ ಎಂದು ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ. 'ಅವರು (ಪಂತ್) ತುಂಬಾ ಚೆನ್ನಾಗಿ ಆಡಿದರು. ರೋಹಿತ್ ಬಳಿ ಪಂತ್ ಬ್ಯಾಟಿಂಗ್ ಮಾಡುತ್ತಿರುವಾಗ ನಾನು 10 ಬಾರಿ ಹೇಳಿದೆ, ಅವರು ತುಂಬಾ ಚೆನ್ನಾಗಿ ಆಡುತ್ತಿದ್ದಾರೆ, ಆದರೆ ಅವರು ಹೇಗೆ ಔಟ್ ಆಗುತ್ತಾರೆಂದು ನನಗೆ ತಿಳಿದಿಲ್ಲ. ಅವರು ಕ್ರಿಕೆಟ್ ಗಾಗಿಯೇ ಹುಟ್ಟಿದ್ದಾರೆ. ತುಂಬಾ ಬಲಶಾಲಿ ವ್ಯಕ್ತಿ' ಎಂದಿದ್ದಾರೆ.