Published : Apr 04, 2021, 10:16 AM ISTUpdated : Apr 04, 2021, 10:23 AM IST
ಚೆನ್ನೈ: ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು 14ನೇ ಆವೃತ್ತಿಯಲ್ಲಿ ಕಪ್ ಎತ್ತಿಹಿಡಿಯುವ ಕನವರಿಕೆಯೊಂದಿಗೆ ಕಣಕ್ಕಿಳಿಯಲು ಸಜ್ಜಾಗಿದೆ. ಏಪ್ರಿಲ್ 09ರಿಂದ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಆರಂಭವಾಗಲಿದೆ. ಹೀಗಿರುವಾಗಲೇ ವಿರಾಟ್ ಕೊಹ್ಲಿ ಪಡೆಗೆ ಆರಂಭಿಕ ವಿಘ್ನ ಎದುರಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 09ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.
14ನೇ ಆವೃತ್ತಿಯ ಐಪಿಎಲ್ ಟೂರ್ನಿಯು ಏಪ್ರಿಲ್ 09ರಿಂದ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಕಾದಾಡಲಿವೆ.
29
ಈ ಹೈವೋಲ್ಟೇಜ್ ಪಂದ್ಯಕ್ಕೆ ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯ ವಹಿಸಲಿದ್ದು, ಚುಟುಕು ಕ್ರಿಕೆಟ್ ಹಬ್ಬವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
ಈ ಹೈವೋಲ್ಟೇಜ್ ಪಂದ್ಯಕ್ಕೆ ಚೆನ್ನೈನ ಎಂ ಎ ಚಿದಂಬರಂ ಸ್ಟೇಡಿಯಂ ಆತಿಥ್ಯ ವಹಿಸಲಿದ್ದು, ಚುಟುಕು ಕ್ರಿಕೆಟ್ ಹಬ್ಬವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ತುದಿಗಾಲಿನಲ್ಲಿ ನಿಂತಿದ್ದಾರೆ.
39
ಇನ್ನು ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಭಿಯಾನ ಆರಂಭಿಸಲು ಬೆರಳೆಣಿಕೆ ದಿನಗಳು ಉಳಿದಿರುವಾಗಲೇ ಬಿಗ್ ಶಾಕ್ ಎದುರಾಗಿದೆ.
ಇನ್ನು ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿರುವ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಅಭಿಯಾನ ಆರಂಭಿಸಲು ಬೆರಳೆಣಿಕೆ ದಿನಗಳು ಉಳಿದಿರುವಾಗಲೇ ಬಿಗ್ ಶಾಕ್ ಎದುರಾಗಿದೆ.
49
ಹೌದು, ತಂಡದ ಪ್ರತಿಭಾನ್ವಿತ ಆರಂಭಿಕ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ಗೆ ಭಾನುವಾರ(ಏ.04) ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
ಹೌದು, ತಂಡದ ಪ್ರತಿಭಾನ್ವಿತ ಆರಂಭಿಕ ಬ್ಯಾಟ್ಸ್ಮನ್ ದೇವದತ್ ಪಡಿಕ್ಕಲ್ಗೆ ಭಾನುವಾರ(ಏ.04) ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
59
ಇದೀಗ ಪಡಿಕ್ಕಲ್ ಅವರನ್ನು ಐಸೋಲೇಷನ್ನಲ್ಲಿ ಇಡಲಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ದದ ಉದ್ಘಾಟನಾ ಪಂದ್ಯದಲ್ಲಿ ಕರ್ನಾಟಕದ ಎಡಗೈ ಬ್ಯಾಟ್ಸ್ಮನ್ ಕಣಕ್ಕಿಳಿಯುವುದು ಅನುಮಾನ ಎನಿಸಿದೆ.
ಇದೀಗ ಪಡಿಕ್ಕಲ್ ಅವರನ್ನು ಐಸೋಲೇಷನ್ನಲ್ಲಿ ಇಡಲಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ದದ ಉದ್ಘಾಟನಾ ಪಂದ್ಯದಲ್ಲಿ ಕರ್ನಾಟಕದ ಎಡಗೈ ಬ್ಯಾಟ್ಸ್ಮನ್ ಕಣಕ್ಕಿಳಿಯುವುದು ಅನುಮಾನ ಎನಿಸಿದೆ.
69
ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ಪಡಿಕ್ಕಲ್ ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.
ಯುಎಇನಲ್ಲಿ ನಡೆದ 13ನೇ ಆವೃತ್ತಿಯ ಐಪಿಎಲ್ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರುವ ಮೂಲಕ ಪಡಿಕ್ಕಲ್ ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದರು.
79
ಮೊದಲ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಅಲಭ್ಯತೆ ತಂಡಕ್ಕೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದ್ದು, ಪಡಿಕ್ಕಲ್ ಬದಲಿಗೆ ಯಾರು ಆರ್ಸಿಬಿ ಪರ ಆರಂಭಿಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.
ಮೊದಲ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಅಲಭ್ಯತೆ ತಂಡಕ್ಕೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆಯಿದ್ದು, ಪಡಿಕ್ಕಲ್ ಬದಲಿಗೆ ಯಾರು ಆರ್ಸಿಬಿ ಪರ ಆರಂಭಿಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಜೋರಾಗಿದೆ.
89
14ನೇ ಆವೃತ್ತಿಯ ಐಪಿಎಲ್ಗೂ ಕೋವಿಡ್ 19 ಸೋಂಕಿಗೆ ಒಳಗಾದ 3ನೇ ಆಟಗಾರ ಪಡಿಕ್ಕಲ್. ಈ ಮೊದಲು ಕೆಕೆಆರ್ನ ನಿತೀಶ್ ರಾಣಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ನ ಅಕ್ಷರ್ ಪಟೇಲ್ಗೂ ಕೊರೋನಾ ವೈರಸ್ ತಗುಲಿದ್ದು.
14ನೇ ಆವೃತ್ತಿಯ ಐಪಿಎಲ್ಗೂ ಕೋವಿಡ್ 19 ಸೋಂಕಿಗೆ ಒಳಗಾದ 3ನೇ ಆಟಗಾರ ಪಡಿಕ್ಕಲ್. ಈ ಮೊದಲು ಕೆಕೆಆರ್ನ ನಿತೀಶ್ ರಾಣಾ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ನ ಅಕ್ಷರ್ ಪಟೇಲ್ಗೂ ಕೊರೋನಾ ವೈರಸ್ ತಗುಲಿದ್ದು.
99
ದೇವದತ್ ಪಡಿಕ್ಕಲ್ ಆದಷ್ಟು ಬೇಗ ಗುಣಮುಖರಾಗಿ ತಂಡ ಕೂಡಿಕೊಳ್ಳಲಿ ಎನ್ನುವುದು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ಹಾಗೂ ಕ್ರಿಕೆಟ್ ಅಭಿಮಾನಿಗಳ ಹಾರೈಕೆಯಾಗಿದೆ.
ದೇವದತ್ ಪಡಿಕ್ಕಲ್ ಆದಷ್ಟು ಬೇಗ ಗುಣಮುಖರಾಗಿ ತಂಡ ಕೂಡಿಕೊಳ್ಳಲಿ ಎನ್ನುವುದು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂ ಹಾಗೂ ಕ್ರಿಕೆಟ್ ಅಭಿಮಾನಿಗಳ ಹಾರೈಕೆಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.