ಸಿಡ್ನಿ: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದ ವೇಳೆ ಕ್ಷೇತ್ರರಕ್ಷಣೆ ವೇಳೆ ಗಾಯಗೊಂಡು, ಸಿಡ್ನಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಇದೀಗ ಡಿಸ್ಚಾರ್ಜ್ ಆಗಿದ್ದಾರೆ. ಈ ಕುರಿತಾದ ಅಪ್ಡೇಟ್ಸ್ ಇಲ್ಲಿದೆ ನೋಡಿ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಅಲೆಕ್ಸ್ ಕ್ಯಾರಿ ಅವರ ಕ್ಯಾಚ್ ಹಿಡಿಯುವ ಯತ್ನದಲ್ಲಿ ಶ್ರೇಯಸ್ ಅಯ್ಯರ್ ಗಂಭೀರವಾಗಿ ಗಾಯಗೊಂಡು ಸಿಡ್ನಿ ಆಸ್ಪತ್ರೆಗೆ ದಾಖಲಾಗಿದ್ದರು.
27
ಶ್ರೇಯಸ್ ಪಕ್ಕೆಲುಬಿಗೆ ಗಾಯ
ಇದಾದ ಬಳಿಕ ಅವರಿಗೆ ಆಂತರಿಕ ರಕ್ತಸ್ರಾವ ಆಗಿರುವ ವಿಚಾರ ಬೆಳಕಿಗೆ ಬಂದಿತ್ತು. ಇದಷ್ಟೇ ಅಲ್ಲದೇ ಪಕ್ಕೆಲುಬಿಗೂ ಹಾನಿಯಾಗಿದ್ದರಿಂದ ಶ್ರೇಯಸ್ ಅಯ್ಯರ್ ಅವರನ್ನು ತೀವ್ರ ನಿಗಾ ಘಟಕಕ್ಕೆ(ಐಸಿಯು) ದಾಖಲು ಮಾಡಲಾಗಿತ್ತು.
37
ಸರಿಯಾದ ಸಮಯದಲ್ಲಿ ಅಯ್ಯರ್ಗೆ ಚಿಕಿತ್ಸೆ
ತಂಡದ ವೈದ್ಯರು ಮತ್ತು ಫಿಸಿಯೋ ಶ್ರೇಯಸ್ ಅವರನ್ನು ಆದಷ್ಟು ಬೇಗ ಆಸ್ಪತ್ರೆಗೆ ಸೇರಿಸಿ ಪರಿಸ್ಥಿತಿ ಸುಲಭಗೊಳಿಸಿದರು. ಆದರೆ ಅದು ಮಾರಣಾಂತಿಕವಾಗಬಹುದಿತ್ತು ಎಂದು ವರದಿಯಾಗಿತ್ತು.
ಇನ್ನು ಕೆಲ ದಿನಗಳ ಹಿಂದಷ್ಟೇ ಸ್ವತಃ ಶ್ರೇಯಸ್ ಅಯ್ಯರ್ ತಮ್ಮ ಆರೋಗ್ಯದ ಕುರಿತಂತೆ ಮಹತ್ವದ ಅಪ್ಡೇಟ್ ನೀಡಿದ್ದರು.
57
ಟ್ವೀಟ್ ಮೂಲಕ ಹೆಲ್ತ್ ಅಪ್ಡೇಟ್ ನೀಡಿದ್ದ ಅಯ್ಯರ್
'ನಾನು ದಿನದಿಂದ ದಿನಕ್ಕೆ ಚೇತರಿಸಿಕೊಳ್ಳುತ್ತಿದ್ದೇನೆ. ನೀವೆಲ್ಲರೂ ನೀಡಿದ ಪ್ರೀತಿ, ಬೆಂಬಲ ಹಾಗೂ ಹಾರೈಕೆಗಳಿಗೆ ನಾನು ಋಣಿ. ನನಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಶ್ರೇಯಸ್ ಅಯ್ಯರ್ ಟ್ವೀಟ್ ಮಾಡಿದ್ದರು.
67
ಆಸ್ಪತ್ರೆಯಿಂದ ಅಯ್ಯರ್ ಡಿಸ್ಚಾರ್ಜ್
ಇದೀಗ ಶ್ರೇಯಸ್ ಅಯ್ಯರ್ ಸಿಡ್ನಿಯ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಬಿಸಿಸಿಐ ಖಚಿತಪಡಿಸಿದೆ. ಇದೀಗ ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿರವಾಗಿದ್ದು, ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
77
ಸಿಡ್ನಿಯಲ್ಲೇ ಉಳಿದುಕೊಂಡಿರುವ ಅಯ್ಯರ್
ಸದ್ಯ ಶ್ರೇಯಸ್ ಅಯ್ಯರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದರೂ, ಕೆಲ ಸಮಯದ ಮಟ್ಟಿಗೆ ಸಿಡ್ನಿಯಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಅಯ್ಯರ್ ಒಂದು ಹಂತದಲ್ಲಿ ಫಿಟ್ ಆದ ಬಳಿಕ ಭಾರತಕ್ಕೆ ವಿಮಾನ ಏರಲಿದ್ದಾರೆ ಎಂದು ತಿಳಿದುಬಂದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.