ಆರ್‌ಸಿಬಿ ಪಂದ್ಯ ಆರಂಭಕ್ಕೂ ಮುನ್ನ ದುರ್ಘಟನೆ ನಡೆಯದಂತೆ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ವಿಶೇಷ ಪೂಜೆ

Published : Mar 25, 2026, 11:22 AM IST

ಆರ್‌ಸಿಬಿ ಪಂದ್ಯ ಆರಂಭಕ್ಕೂ ಮುನ್ನ ದುರ್ಘಟನೆ ನಡೆಯದಂತೆ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ವಿಶೇಷ ಪೂಜೆ ನಡೆದಿದೆ. ಗಣಹೋಮ ಸೇರಿದಂತೆ ವಿಶೇಷ ಪೂಜೆ ಮಾಡಲಾಗಿದೆ. ಕ್ರೀಡಾಂಗಣ, ಗೇಟ್ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೂಜೆ ಮಾಡಲಾಗಿದೆ. 

PREV
15
ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನ ಪೂಜೆ

ಮಾರ್ಚ್ 28 ರಿಂದ ಐಪಿಎಲ್ ಟೂರ್ನಿ 2026ರ ಪಂದ್ಯಗಳು ಆರಂಭಗೊಳ್ಳುತ್ತಿದೆ. ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ ನಡಯಲಿದೆ. ಮೊದಲ ಪಂದದಲ್ಲಿ ಆರ್‌ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡ ಹೋರಾಟ ನಡೆಸಲಿದೆ. ಪಂದ್ಯ ಆರಂಭಕ್ಕೂ ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಗೇಟ್‌ಗಳಿಗೆ ವಿಶೇಷ ಪೂಜೆ ಮಾಡಲಾಗಿದೆ.

25
ಗಣಹೋಮ ಮಾಡಿಸಿದ ಕೆಎಸ್‌ಸಿಎ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗಣಹೋಮ ಸೇರಿದಂತೆ ವಿಶೇಷ ಪೂಜೆ ಮಾಡಲಾಗಿದೆ. ಕ್ರೀಡಾಂಗಣದ ಒಳಗಡೆ ಹಾಗೂ ಕ್ರೀಡಾಂಗಣ ಪ್ರಮುಖ ಗೇಟ್‌ಗಳಿಗೆ ಪೂಜೆ ಮಾಡಲಾಗಿದೆ. ಪಂಚ ಅರ್ಚಕರು ವಿಶೇಷ ಪೂಜೆ ನೆರವೇರಿಸಿದ್ದಾರೆ. ಶನಿವಾರದಿಂದ ಪಂದ್ಯಗಳು ಆರಂಭಗೊಳ್ಳುತ್ತಿರುವ ಕಾರಣ ಇಂದು (ಮಾ.25) ಪೂಜೆ ನಡೆದಿದೆ

35
ದುರ್ಘಟನೆಗಳು ನಡೆಯದಂತೆ ಪೂಜೆ

2025ರ ಐಪಿಎಲ್ ಟೂರ್ನಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ 11 ಅಭಿಮಾನಿಗಳು ಮೃತಪಟ್ಟಿದ್ದರು. ಕ್ರಿಕೆಟ್ ಇತಿಹಾಸದಲ್ಲೇ ಅತೀ ದೊಡ್ಡ ದುರ್ಘಟನೆ ನಡೆದಿತ್ತು. ಇದು ಬೆಂಗಳೂರು ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕಪ್ಪು ಚುಕ್ಕೆ ತಂದಿತ್ತು. ಹೀಗಾಗಿ ಟೂರ್ನಿ ಆರಂಭಕ್ಕೂ ಮುನ್ನವೇ ದುರ್ಘಟನೆಗಳು ನಡೆಯದಂತೆ, ಎಲ್ಲಾ ಪಂದ್ಯದಳು ಸೂಸೂತ್ರವಾಗಿ ಹಾಗೂ ಯಶಸ್ವಿಯಾಗಿ ನಡೆಯಲು ವಿಶೇಷ ಪೂಜೆ ಮೂಲಕ ಪ್ರಾರ್ಥನೆ ಮಾಡಲಾಗಿದೆ.

45
ಕಾಲ್ತುಳಿತ ಬಳಿಕ ಮೊದಲ ಟೂರ್ನಿ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದ ಬಳಿಕ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಬಿಸಿಸಿಐ ಕಪ್ಪು ಪಟ್ಟಿಗೆ ಸೇರಿತ್ತು. ಬೆಂಗಳೂರಿನಲ್ಲಿ ಆಯೋಜನೆಗೊಳ್ಳಬೇಕಿದ್ದ ಪಂದ್ಯಗಳು ಕೈತಪ್ಪಿಹೋಗಿತ್ತು. ಈ ದುರ್ಘಟನೆ ಬಳಿಕ ವೆಂಕಟೇಶ್ ಪ್ರಸಾದ್ ನೇತೃತ್ವದ ಹೊಸ ಆಡಳಿತ ಮಂಡಳಿ ಮತ್ತೆ ಕ್ರಿಕೆಟ್ ತರುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ವಿಶೇಷ ಪೂಜೆ ಮೂಲಕ ಚಿನ್ನಸ್ವಾಮಿಯ ಯಶಸ್ಸಿಗೆ ಪ್ರಾರ್ಥಿಸಲಾಗಿದೆ.

55
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭಾರಿ ಭದ್ರತೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಟೂರ್ನಿ ಪಂದ್ಯಗಳು ಆರಂಭಗೊಳ್ಳುವ ಹಿನ್ನಲೆಯಲ್ಲಿ ಭಾರಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿದೆ. ಒಂದಡೆ ಅಭಿಮಾನಿಗಳ ನಿಯಂತ್ರಿಸುವುದರ ಜೊತೆ ಹಲವು ಹಂತದ ಭದ್ರತೆಯನ್ನು ಕೈಗೊಳ್ಳಲಾಗಿದೆ. ಇನ್ನು ಪಂದ್ಯದ ದಿನ ಸಂಚಾರ ಮಾರ್ಗದಲ್ಲೂ ಕೆಲ ಬದಲಾವಣೆ ಮಾಡಲಾಗುತ್ತದೆ.

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭಾರಿ ಭದ್ರತೆ

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories