ಮತ್ತೆ ವೈಭವ್ ಸೂರ್ಯವಂಶಿ ಕಡೆಗಣನೆ; ಟೀಂ ಇಂಡಿಯಾಗೆ ಖಡಕ್ ಎಚ್ಚರಿಕೆ ಕೊಟ್ಟ ಸನ್ನಿ!

Published : Jul 02, 2026, 03:13 PM IST

ಬೆಂಗಳೂರು: ಇಂಗ್ಲೆಂಡ್ ಎದುರಿನ ಮೊದಲ ಟಿ20 ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಬಹುದು ಎನ್ನುವ ನಿರೀಕ್ಷೆ ಹುಸಿಯಾಗಿದೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಂ ಇಂಡಿಯಾ ಮ್ಯಾನೇಜ್‌ಮೆಂಟ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. 

PREV
16
ಕಳೆದ ಮೂರು ಪಂದ್ಯಗಳಿಂದ ಬೆಂಚ್ ಕಾಯಿಸಿರುವ ವೈಭವ್ ಸೂರ್ಯವಂಶಿ

ಭಾರತದ ಪ್ರತಿಭಾನ್ವಿತ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ, ಇಂಗ್ಲೆಂಡ್ ಎದುರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಟೀಮ್‌ ಮ್ಯಾನೇಜ್‌ಮೆಂಟ್ 2026ರ ಟಿ20 ವಿಶ್ವಕಪ್ ಗೆಲ್ಲಿಸಿಕೊಟ್ಟ ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಮೇಲೆ ಹೆಚ್ಚಿನ ನಂಬಿಕೆ ಇಟ್ಟುಕೊಂಡಿದೆ. ಇದೇ ಕಾರಣಕ್ಕಾಗಿ 15 ವರ್ಷದ ವೈಭವ್ ಸೂರ್ಯವಂಶಿ ಕಳೆದ ಮೂರು ಪಂದ್ಯಗಳಲ್ಲೂ ಬೆಂಚ್ ಕಾಯಿಸುತ್ತಿದ್ದಾರೆ.

26
ಟೀಂ ಇಂಡಿಯಾಗೆ ಎಚ್ಚರಿಕೆ ಕೊಟ್ಟ ಗವಾಸ್ಕರ್

ಐರ್ಲೆಂಡ್ ಎದುರಿನ ಎರಡೂ ಪಂದ್ಯಗಳಲ್ಲೂ ಭಾರತದ ಅಗ್ರಕ್ರಮಾಂಕದ ಬ್ಯಾಟರ್‌ಗಳಾದ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದರು. ಹೀಗಾಗಿ ಇಂಗ್ಲೆಂಡ್‌ ಎದುರಿನ ಸರಣಿಯಲ್ಲಿ ಮೊದಲ ಪಂದ್ಯದಲ್ಲೇ ವೈಭವ್ ಸೂರ್ಯವಂಶಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಸಿಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಆ ನಿರೀಕ್ಷೆ ಹುಸಿಯಾಗಿದೆ. ಈ ಕುರಿತಂತೆ ಭಾರತದ ದಿಗ್ಗಜ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಎಚ್ಚರಿಕೆ ನೀಡಿದ್ದಾರೆ.

36
ವೈಭವ್ ಸೂರ್ಯವಂಶಿ ಬಗ್ಗೆ ಸನ್ನಿ ಹೇಳಿದ್ದೇನು?

ವೈಭವ್ ಸೂರ್ಯವಂಶಿಯನ್ನು ಸಾಕಷ್ಟು ಕಾಯಿಸಿದ ಬಳಿಕ ಅವಕಾಶ ನೀಡಿದರೇ, ಅವರಿಗೆ ಉತ್ತಮ ಪ್ರದರ್ಶನ ತೋರಬೇಕು ಎನ್ನುವ ಒತ್ತಡ ಮತ್ತಷ್ಟು ಹೆಚ್ಚಾಗಲಿದೆ. 'ವೈಭವ್ ಸೂರ್ಯವಂಶಿಗೆ ಯಾವಾಗ ಅವಕಾಶ ಸಿಕ್ಕರೂ, ಖಂಡಿತ ಅವರ ಮೇಲೆ ಸಾಕಷ್ಟು ಒತ್ತಡ ಇರಲಿದೆ. ಆದರೆ 15 ವರ್ಷದ ಆಟಗಾರನಾಗಿರುವುದರಿಂದ ಒತ್ತಡದ ಬಗ್ಗೆ ಸಾಕಷ್ಟು ಯೋಚಿಸುವುದಿಲ್ಲ. ಒಂದುವೇಳೆ ಆತನಿಗೆ ಎರಡನೇ ಇಲ್ಲವೇ ಮೂರನೇ ಮ್ಯಾಚ್‌ನಲ್ಲಿ ಅವಕಾಶ ಸಿಕ್ಕಿದರೆ, ಅವರು ಉತ್ತಮ ಪ್ರದರ್ಶನ ತೋರಬೇಕಾಗುತ್ತದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಆತನಿಂದ ಬಯಸುವುದು ಅದನ್ನೇ. ಹೀಗಾಗಿ ಆದಷ್ಟು ಬೇಗ ಅವರಿಗೆ ಅವಕಾಶ ನೀಡಬೇಕು ಎಂದು ಟೀಮ್‌ ಮ್ಯಾನೇಜ್‌ಮೆಂಟ್‌ಗೆ ಸನ್ನಿ ಎಚ್ಚರಿಸಿದ್ದಾರೆ.

46
ಇದು ವೈಭವ್ ಸೂರ್ಯವಂಶಿಗೆ ಭವಿಷ್ಯದಲ್ಲಿ ಹೆಚ್ಚು ಅನುಕೂಲವಾಗಲಿದೆ

ವೈಭವ್ ಸೂರ್ಯವಂಶಿ ಭಾರತ ತಂಡದ ಜತೆಗಿರುವುದು ಅವರ ಕಲಿಕೆಗೆ ಹೆಚ್ಚು ಅನುಕೂಲವಾಗಲಿದೆ. ಡ್ರೆಸ್ಸಿಂಗ್ ರೂಮ್‌ನಲ್ಲಿ ಸಾಕಷ್ಟು ಅನುಭವಿ ಹಾಗೂ ವಿಶ್ವದರ್ಜೆಯ ಆಟಗಾರರಿಂದ ವೈಭವ್ ಸೂರ್ಯವಂಶಿ ಸಾಕಷ್ಟು ಕಲಿಯುವ ಅವಕಾಶ ಸಿಗಲಿದೆ. ಇದು ಅವರ ಭವಿಷ್ಯದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದು ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ.

56
2026ರ ಐಪಿಎಲ್‌ನಲ್ಲಿ ಅಬ್ಬರಿಸಿದ್ದ ವೈಭವ್ ಸೂರ್ಯವಂಶಿ:

ಇನ್ನು ವೈಭವ್ ಸೂರ್ಯವಂಶಿ, 19ನೇ ಸೀಸನ್‌ ಐಪಿಎಲ್ ಟೂರ್ನಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ವಿಸ್ಪೋಟಕ ಬ್ಯಾಟಿಂಗ್ ನಡೆಸುವ ಮೂಲಕ ಆರೆಂಜ್ ಕ್ಯಾಪ್ ಜಯಿಸುವಲ್ಲಿ ಯಶಸ್ವಿಯಾಗಿದ್ದರು. ಇದರ ಬೆನ್ನಲ್ಲೇ ವೈಭವ್ ಸೂರ್ಯವಂಶಿ, ಐರ್ಲೆಂಡ್, ಇಂಗ್ಲೆಂಡ್ ಹಾಗೂ ಏಷ್ಯನ್ ಗೇಮ್ಸ್ ಟೂರ್ನಿಗೆ ಭಾರತ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೀಗ ಭಾರತಕ್ಕೆ ಪಾದಾರ್ಪಣೆ ಮಾಡಲು ಬಿಹಾರ ಮೂಲದ ಆಟಗಾರ ತುದಿಗಾಲಿನಲ್ಲಿ ನಿಂತಿದ್ದಾರೆ.

66
ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯುವ ನಿರೀಕ್ಷೆಯಲ್ಲಿ ವೈಭವ್:

ಭಾರತ ಸೀನಿಯರ್ಸ್ ಪುರುಷರ ಕ್ರಿಕೆಟ್ ತಂಡದ ಪರ ಪಾದಾರ್ಪಣೆ ಮಾಡಿದ ಅತಿಕಿರಿಯ ಕ್ರಿಕೆಟಿಗ ಎನ್ನುವ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ 16 ವರ್ಷಕ್ಕೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದರು. ಇದೀಗ 15 ವರ್ಷದ ವೈಭವ್ ಸೂರ್ಯವಂಶಿ, ಮಾಸ್ಟರ್ ಬ್ಲಾಸ್ಟರ್ ದಾಖಲೆ ಮುರಿಯುವ ಹಾದಿಯಲ್ಲಿದ್ದಾರೆ.

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories