ವಿದಾಯದಿಂದ ಯುವರಾಜ್ ಸಿಂಗ್ ವಾಪಸ್, ಕೇರಳ ತಂಡಕ್ಕೆ ಶ್ರೀಶಾಂತ್ ಕಮ್‌ಬ್ಯಾಕ್!

Published : Dec 16, 2020, 02:52 PM ISTUpdated : Dec 16, 2020, 03:12 PM IST

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಆದರೆ ಯುವಿ ಇದೀಗ ವಿದಾಯದಿಂದ ಮರಳಿ ಮತ್ತೆ ಕ್ರಿಕೆಟ್ ಆಡಲು ಸಜ್ಜಾಗಿದ್ದಾರೆ. ಇತ್ತ ಸ್ಪಾಟ್ ಫಿಕ್ಸಿಂಗ್ ಆರೋಪದಡಿ ನಿಷೇಧಕ್ಕೊಳಗಾಗಿದ್ದ ವೇಗಿ ಶ್ರೀಶಾಂತ್ ಇದೀಗ ಕೇರಳ ತಂಡದ ಸಂಭವನೀಯ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾದರೆ ಯುವರಾಜ್ ಸಿಂಗ್ ಹಾಗೂ ಶ್ರೀಶಾಂತ್ ಯಾವ ಟೂರ್ನಿ ಆಡಲಿದ್ದಾರೆ? ಇಲ್ಲಿದೆ ಮಾಹಿತಿ.

PREV
19
ವಿದಾಯದಿಂದ ಯುವರಾಜ್ ಸಿಂಗ್ ವಾಪಸ್, ಕೇರಳ ತಂಡಕ್ಕೆ ಶ್ರೀಶಾಂತ್ ಕಮ್‌ಬ್ಯಾಕ್!

2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ವಿದಾಯದಿಂದ ಮರಳುತ್ತಿದ್ದಾರೆ. ಹೌದು. ಯುವಿ ಈಗಾಗಲೇ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇದೀಗ ಮಹತ್ವದ ಟೂರ್ನಿಗೆ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಯುವಿ ಕಾಣಿಸಿಕೊಂಡಿದ್ದಾರೆ.

2011ರ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ವಿದಾಯದಿಂದ ಮರಳುತ್ತಿದ್ದಾರೆ. ಹೌದು. ಯುವಿ ಈಗಾಗಲೇ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇದೀಗ ಮಹತ್ವದ ಟೂರ್ನಿಗೆ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಯುವಿ ಕಾಣಿಸಿಕೊಂಡಿದ್ದಾರೆ.

29

ಬಿಸಿಸಿಐ ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿ ಆಯೋಜಿಸುವುದಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಆಯಾ ರಾಜ್ಯಗಳು ಸಂಭವನೀಯ ತಂಡ ಪ್ರಕಟಿಸುತ್ತಿದೆ. 

ಬಿಸಿಸಿಐ ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿ ಆಯೋಜಿಸುವುದಾಗಿ ಘೋಷಿಸಿದೆ. ಇದರ ಬೆನ್ನಲ್ಲೇ ಆಯಾ ರಾಜ್ಯಗಳು ಸಂಭವನೀಯ ತಂಡ ಪ್ರಕಟಿಸುತ್ತಿದೆ. 

39

ಪಂಜಾಬ್ ಕ್ರಿಕೆಟ್ ಸಂಸ್ಥೆ ಸಯ್ಯದ್ ಮುಷ್ತಾಕ್ ಆಲಿ ಟೂರ್ನಿಗೆ ಸಂಭವನೀಯ 30 ಆಟಗಾರರ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಯುವರಾಜ್ ಸಿಂಗ್ ಹೆಸರನ್ನು ಪಂಜಾಬ್ ಪ್ರಕಟಿಸಿದೆ

ಪಂಜಾಬ್ ಕ್ರಿಕೆಟ್ ಸಂಸ್ಥೆ ಸಯ್ಯದ್ ಮುಷ್ತಾಕ್ ಆಲಿ ಟೂರ್ನಿಗೆ ಸಂಭವನೀಯ 30 ಆಟಗಾರರ ತಂಡ ಪ್ರಕಟಿಸಿದೆ. ಈ ತಂಡದಲ್ಲಿ ಯುವರಾಜ್ ಸಿಂಗ್ ಹೆಸರನ್ನು ಪಂಜಾಬ್ ಪ್ರಕಟಿಸಿದೆ

49

ಕಳೆದ ವರ್ಷ ಜೂನ್ ತಿಂಗಳಲ್ಲಿ ಯುವಿ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇತ್ತೀಚೆಗೆ ಯುವಿ ಪಂಜಾಬ್ ತಂಡ ಪ್ರತಿನಿಧಿಸುವುದಾಗಿ ಪಂಜಾಬ್ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಪುನೀತ್ ಬಾಲಿ ಬಳಿ ಹೇಳಿಕೊಂಡಿದ್ದರು.

ಕಳೆದ ವರ್ಷ ಜೂನ್ ತಿಂಗಳಲ್ಲಿ ಯುವಿ ಎಲ್ಲಾ ಮಾದರಿ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಇತ್ತೀಚೆಗೆ ಯುವಿ ಪಂಜಾಬ್ ತಂಡ ಪ್ರತಿನಿಧಿಸುವುದಾಗಿ ಪಂಜಾಬ್ ಕ್ರಿಕೆಟ್ ಸಂಸ್ಥೆ ಕಾರ್ಯದರ್ಶಿ ಪುನೀತ್ ಬಾಲಿ ಬಳಿ ಹೇಳಿಕೊಂಡಿದ್ದರು.

59

ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿಗೆ ಕೇರಳ ಕ್ರಿಕೆಟ್ ಸಂಸ್ಥೆ ಕೂಡ 26 ಸದಸ್ಯರ ಸಂಭವನೀಯ ತಂಡ ಪ್ರಕಟಿಸಿದೆ. ಈ ತಂಡದಲ್ಲಿ 37 ವರ್ಷದ ಶ್ರೀಶಾಂತ್ ಸ್ಥಾನ ಪಡೆದಿದ್ದಾರೆ.

ಸಯ್ಯದ್ ಮುಷ್ತಾಕ್ ಆಲಿ ಟಿ20 ಟೂರ್ನಿಗೆ ಕೇರಳ ಕ್ರಿಕೆಟ್ ಸಂಸ್ಥೆ ಕೂಡ 26 ಸದಸ್ಯರ ಸಂಭವನೀಯ ತಂಡ ಪ್ರಕಟಿಸಿದೆ. ಈ ತಂಡದಲ್ಲಿ 37 ವರ್ಷದ ಶ್ರೀಶಾಂತ್ ಸ್ಥಾನ ಪಡೆದಿದ್ದಾರೆ.

69

2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಲ್ಲಿ ಜೈಲು ಸೇರಿದ್ದ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಇತ್ತ ಬಿಸಿಸಿಐ ಆಜೀವ ನಿಷೇಧವನ್ನು ಕಡಿತಗೊಳಿಸಿತ್ತು.

2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣಲ್ಲಿ ಜೈಲು ಸೇರಿದ್ದ ಶ್ರೀಶಾಂತ್‌ಗೆ ಕೋರ್ಟ್ ಕ್ಲೀನ್ ಚಿಟ್ ನೀಡಿತ್ತು. ಇತ್ತ ಬಿಸಿಸಿಐ ಆಜೀವ ನಿಷೇಧವನ್ನು ಕಡಿತಗೊಳಿಸಿತ್ತು.

79

ಕೇರಳ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಸಂಜು ಸಾಮ್ಸನ್, ಸಚಿನ್ ಬೇಬಿ, ಕನ್ನಡಿಗ ರಾಬಿನ್ ಉತ್ತಪ್ಪ, ಜಲಜ್ ಸಕ್ಸೇನಾ, ಬಸಿಲ್ ಥಂಪಿ ಸೇರಿದಂತೆ ಹಲವು ಪ್ರಮುಖರು ಸ್ಥಾನ ಪಡೆದಿದ್ದಾರೆ.

ಕೇರಳ ಪ್ರಕಟಿಸಿದ ಸಂಭವನೀಯ ತಂಡದಲ್ಲಿ ಸಂಜು ಸಾಮ್ಸನ್, ಸಚಿನ್ ಬೇಬಿ, ಕನ್ನಡಿಗ ರಾಬಿನ್ ಉತ್ತಪ್ಪ, ಜಲಜ್ ಸಕ್ಸೇನಾ, ಬಸಿಲ್ ಥಂಪಿ ಸೇರಿದಂತೆ ಹಲವು ಪ್ರಮುಖರು ಸ್ಥಾನ ಪಡೆದಿದ್ದಾರೆ.

89

39 ವರ್ಷದ ಯುವರಾಜ್ ಸಿಂಗ್ ವಿದಾಯದ ಬಳಿಕ ಕೆನಡಾ ಟಿ20 ಲೀಗ್ ಟೂರ್ನಿ ಆಡಿದ್ದರು. ಇದೀಗ ಯುವಿ ಮೊಹಾಲಿ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

39 ವರ್ಷದ ಯುವರಾಜ್ ಸಿಂಗ್ ವಿದಾಯದ ಬಳಿಕ ಕೆನಡಾ ಟಿ20 ಲೀಗ್ ಟೂರ್ನಿ ಆಡಿದ್ದರು. ಇದೀಗ ಯುವಿ ಮೊಹಾಲಿ ಕ್ರೀಡಾಂಗಣದಲ್ಲಿ ಅಭ್ಯಾಸ ಆರಂಭಿಸಿದ್ದಾರೆ.

99

ಅತ್ತ ಶಾಂತಕುಮಾರನ್ ಶ್ರೀಶಾಂತ್ ಇಂದಿನಿಂದ(ಡಿ.17) ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ ಸ್ಥಳೀಯ ಟಿ20 ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 

ಅತ್ತ ಶಾಂತಕುಮಾರನ್ ಶ್ರೀಶಾಂತ್ ಇಂದಿನಿಂದ(ಡಿ.17) ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸಿರುವ ಸ್ಥಳೀಯ ಟಿ20 ಟೂರ್ನಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories