ಇಂಗ್ಲೆಂಡ್ ಎದುರಿನ ಸೆಮಿಫೈನಲ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..! ದಿಟ್ಟ ನಿರ್ಧಾರ ಕೈಗೊಂಡ್ರಾ ರೋಹಿತ್?

Published : Jun 27, 2024, 12:31 PM IST

ಗಯಾನ: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಎರಡನೇ ಸಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟವಾಗಿದ್ದು, ನಾಯಕ ರೋಹಿತ್ ಶರ್ಮಾ ದಿಟ್ಟ ನಿರ್ಧಾರ ಕೈಗೊಂಡ್ರಾ ಎನ್ನುವ ಅನುಮಾನ ಶುರುವಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.  

PREV
111
ಇಂಗ್ಲೆಂಡ್ ಎದುರಿನ ಸೆಮಿಫೈನಲ್ ಪಂದ್ಯಕ್ಕೆ ಭಾರತ ಸಂಭಾವ್ಯ ತಂಡ ಪ್ರಕಟ..! ದಿಟ್ಟ ನಿರ್ಧಾರ ಕೈಗೊಂಡ್ರಾ ರೋಹಿತ್?
1. ರೋಹಿತ್ ಶರ್ಮಾ:

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕಳೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಎದುರು ಸ್ಪೋಟಕ ಬ್ಯಾಟಿಂಗ್ ನಡೆಸಿ ಮಿಂಚಿದ್ದರು. ಇಂದು ಮತ್ತೊಮ್ಮೆ ಹಿಟ್‌ಮ್ಯಾನ್ ಆರಂಭಿಕನಾಗಿ ಹಾಗೂ ನಾಯಕನಾಗಿ ಮಿಂಚಲು ರೆಡಿಯಾಗಿದ್ದಾರೆ.
 

211
2. ವಿರಾಟ್ ಕೊಹ್ಲಿ:

ಆರಂಭಿಕನಾಗಿ ಪದೇ ಪದೇ ವೈಫಲ್ಯ ಅನುಭವಿಸುತ್ತಿದ್ದರೂ ವಿರಾಟ್ ಕೊಹ್ಲಿಗೆ ಇದೀಗ ಮತ್ತೊಮ್ಮೆ ಓಪನ್ನರ್ ಆಗಿ ಅವಕಾಶ ಸಿಗುವ ಸಾಧ್ಯತೆಯಿದೆ. ಈ ಮೂಲಕ ನಾಯಕ ರೋಹಿತ್‌, ಮತ್ತೊಮ್ಮೆ ಕೊಹ್ಲಿ ಪರ ನಿಲ್ಲುವ ದಿಟ್ಟ ನಿರ್ಧಾರ ಕೈಗೊಂಡಂತಿದೆ.
 

311
3. ರಿಷಭ್ ಪಂತ್:

ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಟೂರ್ನಿಯುದ್ದಕ್ಕೂ ಮೂರನೇ ಕ್ರಮಾಂಕದಲ್ಲಿ ಸ್ಥಿರ ಪ್ರದರ್ಶನ ತೋರುತ್ತಿದ್ದು, ಇದೀಗ ನಾಕೌಟ್ ಹಂತದಲ್ಲಿ ತಮ್ಮ ಬ್ಯಾಟಿಂಗ್ ಲಯ ಮುಂದುವರೆಸಿಕೊಂಡು ಹೋಗಲು ಎದುರು ನೋಡುತ್ತಿದ್ದಾರೆ.
 

411
4. ಸೂರ್ಯಕುಮಾರ್ ಯಾದವ್;

ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಸೂರ್ಯಕುಮಾರ್ ಯಾದವ್ ಕೂಡಾ ಉತ್ತಮ ಲಯದಲ್ಲಿದ್ದು, ಬಲಾಢ್ಯ ಇಂಗ್ಲೆಂಡ್ ಬೌಲರ್‌ಗಳನ್ನು ಕಾಡಲು ಸಜ್ಜಾಗಿದ್ದಾರೆ.
 

511
5. ಶಿವಂ ದುಬೆ:

ಆಸ್ಟ್ರೇಲಿಯಾ ಎದುರು ದುಬೆ 22 ಎಸೆತಗಳಲ್ಲಿ 28 ರನ್ ಸಿಡಿಸಿದ್ದರು. ಹೀಗಾಗಿ ರೋಹಿತ್ ಶರ್ಮಾ ಹಾಗೂ ಟೀಂ ಮ್ಯಾನೇಜ್‌ಮೆಂಟ್ ಮತ್ತೊಮ್ಮೆ ದುಬೆಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ನೀಡುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
 

611
6. ಹಾರ್ದಿಕ್ ಪಾಂಡ್ಯ:

ಟೀಂ ಇಂಡಿಯಾ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡದ ಆಪತ್ಬಾಂಧವ ಎನಿಸಿಕೊಂಡಿದ್ದು, ಸ್ಥಿರ ಪ್ರದರ್ಶನ ತೋರುತ್ತಾ ಬಂದಿದ್ದಾರೆ.
 

711
7. ರವೀಂದ್ರ ಜಡೇಜಾ:

ಟೀಂ ಇಂಡಿಯಾ ಮತ್ತೋರ್ವ ಆಲ್ರೌಂಡರ್ ರವೀಂದ್ರ ಜಡೇಜಾ ಕಳೆದ ಪಂದ್ಯದಲ್ಲಿ ಬೌಲಿಂಗ್‌ನಲ್ಲಿ ಕೊಂಚ ದುಬಾರಿಯಾಗಿದ್ದರು. ಹೀಗಿದ್ದೂ ಇಂಗ್ಲೆಂಡ್ ಎದುರು ಉತ್ತಮ ಟ್ರ್ಯಾಕ್ ರೆಕಾರ್ಡ್ ಇರುವುದರಿಂದ ಜಡ್ಡುಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಹೆಚ್ಚಿದೆ.
 

811
8. ಅಕ್ಷರ್ ಪಟೇಲ್:

ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಎಡಗೈ ಬೌಲಿಂಗ್ ಆಲ್ರೌಂಡರ್ ಅಕ್ಷರ್ ಪಟೇಲ್, ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದು, ಮತ್ತೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವುದು ಬಹುತೇಕ ಖಚಿತ.
 

911
9. ಕುಲ್ದೀಪ್ ಯಾದವ್:

ಟೀಂ ಇಂಡಿಯಾ ಮಣಿಕಟ್ಟು ಸ್ಪಿನ್ನರ್ ಕುಲ್ದೀಪ್ ಯಾದವ್, ಶಿಸ್ತುಬದ್ದ ದಾಳಿಯ ಜತೆಗೆ ವಿಕೆಟ್ ಕಬಳಿಸಿ ತಂಡಕ್ಕೆ ಆಸರೆಯಾಗುತ್ತಿದ್ದು, ಇದೀಗ ಇಂಗ್ಲೆಂಡ್ ಬ್ಯಾಟರ್‌ಗಳನ್ನು ತನ್ನ ಸ್ಪಿನ್ ಬಲೆಗೆ ಕೆಡಗಲು ರೆಡಿಯಾಗಿದ್ದಾರೆ.
 

1011
10. ಆರ್ಶದೀಪ್ ಸಿಂಗ್:

ಟೀಂ ಇಂಡಿಯಾ ಎಡಗೈ ವೇಗಿ ಆರ್ಶದೀಪ್ ಸಿಂಗ್, ಟೂರ್ನಿಯಲ್ಲಿ ಭಾರತ ಪರ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್‌ ಆಗಿ ಹೊರಹೊಮ್ಮಿದ್ದಾರೆ. ಆರ್ಶದೀಪ್ ಮತ್ತೊಮ್ಮೆ ಮ್ಯಾಜಿಕ್ ಮಾಡಲು ರೆಡಿಯಾಗಿದ್ದಾರೆ.
 

1111
11. ಜಸ್ಪ್ರೀತ್ ಬುಮ್ರಾ:

ಟೀಂ ಇಂಡಿಯಾದ ವೇಗದ ಬೌಲಿಂಗ್ ಅಸ್ತ್ರ ಜಸ್ಪ್ರೀತ್ ಬುಮ್ರಾ ಎದುರು ಬ್ಯಾಟ್ ಬೀಸಲು ಎದುರಾಳಿ ಪಡೆಯ ಬ್ಯಾಟರ್‌ಗಳು ತಡಬಡಾಯಿಸುತ್ತಿದ್ದಾರೆ. ಟೀಂ ಇಂಡಿಯಾ ಫೈನಲ್‌ಗೇರಬೇಕಿದ್ದರೇ ಬುಮ್ರಾ, ಮತ್ತೆ ಮಾರಕ ದಾಳಿ ನಡೆಸಬೇಕಿದೆ.
 

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Photos on
click me!

Recommended Stories