ಸೇಂಟ್ ಲೂಸಿಯಾ: 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಹಂತದ ಪಂದ್ಯದಲ್ಲಿಂದು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯವು ಉಭಯ ತಂಡಗಳ ಪಾಲಿಗೆ ಸಾಕಷ್ಟು ಮಹತ್ವದ್ದೆನಿಸಿದೆ. ಇದರ ಬೆನ್ನಲ್ಲೇ ಭಾರತ ಸಂಭಾವ್ಯ ತಂಡ ಪ್ರಕಟವಾಗಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಯಾರಿಗೆಲ್ಲಾ ಸ್ಥಾನ ಸಿಕ್ಕಿದೆ ನೋಡೋಣ ಬನ್ನಿ.
ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ನಾಯಕನಾಗಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದು, ಇದೀಗ ಸೆಮೀಸ್ ಪಂದ್ಯಕ್ಕೂ ಮುನ್ನ ಬಲಾಢ್ಯ ಆಸ್ಟ್ರೇಲಿಯಾ ಎದುರು ದೊಡ್ಡ ಮೊತ್ತ ಗಳಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಸಜ್ಜಾಗಿದ್ದಾರೆ.
211
2. ವಿರಾಟ್ ಕೊಹ್ಲಿ:
ಟೀಂ ಇಂಡಿಯಾ ರನ್ ಮಷೀನ್, ನಿಧಾನವಾಗಿ ಫಾರ್ಮ್ ಕಂಡುಕೊಳ್ಳುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದು, ಕಳೆದ ಪಂದ್ಯದಲ್ಲಿ ಚುರುಕಿನ 37 ರನ್ ಸಿಡಿಸಿದ್ದರು. ಇಂದು ಕೂಡಾ ಕೊಹ್ಲಿ ದೊಡ್ಡ ಇನಿಂಗ್ಸ್ ಆಡಲು ಎದುರು ನೋಡುತ್ತಿದ್ದಾರೆ.
311
3. ರಿಷಣ್ ಪಂತ್:
ಈ ಬಾರಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾದ ನಿಜವಾದ ಬ್ಯಾಟಿಂಗ್ ಆಪತ್ಬಾಂಧವ ಎನಿಸಿರುವ ಪಂತ್ ಸ್ಥಿರ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿದ್ದು, ವಿಕೆಟ್ ಕೀಪರ್ ಹಾಗೂ ಬ್ಯಾಟರ್ ಆಗಿ ಯಶಸ್ವಿಯಾಗಿದ್ದಾರೆ.
411
4. ಸೂರ್ಯಕುಮಾರ್ ಯಾದವ್:
ಭಾರತದ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಕಳೆದ ಪಂದ್ಯದಲ್ಲಿ ಕೇವಲ ಒಂದು ಸಿಕ್ಸರ್ ಸಿಡಿಸಿ ವಿಕೆಟ್ ಒಪ್ಪಿಸಿದ್ದರು. ಇಂದು ಆಸೀಸ್ ಎದುರು ಭಾರತ ಗೆಲ್ಲಬೇಕಿದ್ದರೇ ಸೂರ್ಯ ಸಿಡಿಯಲೇಬೇಕಿದೆ.
511
5. ಹಾರ್ದಿಕ್ ಪಾಂಡ್ಯ:
ಟೀಂ ಇಂಡಿಯಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ತಂಡಕ್ಕೆ ಉಪಯುಕ್ತ ಕೊಡುಗೆ ನೀಡುತ್ತಿರುವುದು ತಂಡದ ಆತ್ಮವಿಶ್ವಾಸ ಹೆಚ್ಚುವಂತೆ ಮಾಡಿದೆ.
611
6. ಶಿವಂ ದುಬೆ:
ನೀಳಕಾಯದ ಎಡಗೈ ಬ್ಯಾಟರ್ ಶಿವಂ ದುಬೆ ಕಳೆದ ಪಂದ್ಯದಲ್ಲಿ ಬಾಂಗ್ಲಾ ಎದುರು ಆಕರ್ಷಕ ಬ್ಯಾಟಿಂಗ್ ನಡೆಸಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ದುಬೆಗೆ ಮತ್ತೊಂದು ಅವಕಾಶ ಸಿಕ್ಕರೂ ಅಚ್ಚರಿಯಿಲ್ಲ.
711
7. ರವೀಂದ್ರ ಜಡೇಜಾ:
ಟೀಂ ಇಂಡಿಯಾ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾಗೆ ಕಳೆದ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಬೌಲಿಂಗ್ನಲ್ಲಿ ಒಂದು ವಿಕೆಟ್ ಕಬಳಿಸಿ ಮಿಂಚಿದ್ದರು.
811
8. ಅಕ್ಷರ್ ಪಟೇಲ್:
ಟೀಂ ಇಂಡಿಯಾದ ಮತ್ತೊರ್ವ ಎಡಗೈ ಆಲ್ರೌಂಡರ್ ಅಕ್ಷರ್ ಪಟೇಲ್, ಸಿಕ್ಕ ಅವಕಾಶವನ್ನು ಚೆನ್ನಾಗಿಯೇ ಬಳಸಿಕೊಳ್ಳುತ್ತಿದ್ದು, ಮತ್ತೊಮ್ಮೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಪಡೆಯೋದು ಗ್ಯಾರಂಟಿ.
911
9. ಕುಲ್ದೀಪ್ ಯಾದವ್:
ಟೀಂ ಇಂಡಿಯಾದ ತಜ್ಞ ಲೆಗ್ಸ್ಪಿನ್ನರ್ ಕುಲ್ದೀಪ್ ಯಾದವ್, ಕಳೆದೆರಡು ಪಂದ್ಯಗಳಲ್ಲೂ ಅದ್ಭುತ ದಾಳಿ ನಡೆಸುತ್ತಿದ್ದಾರೆ. ಬಾಂಗ್ಲಾ ಎದುರು ಕುಲ್ದೀಪ್ ಪ್ರಮುಖ 3 ಬಲಿ ಪಡೆದಿದ್ದರು.
1011
10. ಆರ್ಶದೀಪ್ ಸಿಂಗ್:
ಟೀಂ ಇಂಡಿಯಾ ಪರ ಈ ಆವೃತ್ತಿಯ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಗರಿಷ್ಠ ವಿಕೆಟ್ ಕಬಳಿಸಿದ ಬೌಲರ್ ಆಗಿರುವ ಎಡಗೈ ವೇಗಿ ಆರ್ಶದೀಪ್ ಸಿಂಗ್ ಡೆತ್ ಓವರ್ನಲ್ಲಿ ಹಾಗೂ ಪವರ್ಪ್ಲೇ ಓವರ್ನಲ್ಲಿ ಪರಿಣಾಮಕಾರಿ ದಾಳಿ ನಡೆಸುತ್ತಿದ್ದಾರೆ.
1111
11. ಜಸ್ಪ್ರೀತ್ ಬುಮ್ರಾ:
ಟೀಂ ಇಂಡಿಯಾ ಮಾರಕ ವೇಗಿ ಜಸ್ಪ್ರೀತ್ ಬುಮ್ರಾ ಎದುರು ರನ್ ಗಳಿಸಲು ಎದುರಾಳಿ ಬ್ಯಾಟರ್ಗಳು ಪರದಾಡುತ್ತಿದ್ದಾರೆ. ಇಂದು ಕೂಡಾ ಬುಮ್ರಾ ಭಯದಲ್ಲೇ ಕಾಂಗರೂ ಪಡೆ ಕಣಕ್ಕಿಳಿದರೂ ಅಚ್ಚರಿಯಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.