ಕಠಿಣ ಗುರಿ ಬೆನ್ನತ್ತಿದ ಟೀಂ ಇಂಡಿಯಾ ಒಂದು ಹಂತದಲ್ಲಿ 79 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಒಳಗಾಗಿತ್ತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್(63), ಸಂಜು ಸ್ಯಾಮ್ಸನ್ (54) ಹಾಗೂ ಅಕ್ಷರ್ ಪಟೇಲ್ (64*) ಬಾರಿಸಿದ ಆಕರ್ಷಕ ಅರ್ಧಶತಕಗಳ ನೆರವಿನಿಂದ ಇನ್ನೂ 2 ಎಸೆತಗಳು ಬಾಕಿ ಇರುವಂತೆಯೇ ಭಾರತ ಗೆಲುವಿನ ನಗೆ ಬೀರಿತು.