ಪೋರ್ಟ್ ಆಫ್ ಸ್ಪೇನ್: ವೆಸ್ಟ್ ಇಂಡೀಸ್ ಎದುರಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಸೋತಿರುವ ಹಾರ್ದಿಕ್ ಪಾಂಡ್ಯ ನೇತೃತ್ವದ ಟೀಂ ಇಂಡಿಯಾ, ಇದೀಗ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ. ಹೀಗಾಗಿ ಇಂದು ನಡೆಯಲಿರುವ ಪಂದ್ಯಕ್ಕೆ ಎರಡು ಪ್ರಮುಖ ಬದಲಾವಣೆಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ.
ಪಿಎಲ್ ಟೂರ್ನಿಯಲ್ಲಿ ಅಬ್ಬರಿಸಿದ್ದ ಗಿಲ್, ಇದೀಗ ವೆಸ್ಟ್ ಇಂಡೀಸ್ ಎದುರು ಘರ್ಜಿಸಲು ವೈಫಲ್ಯ ಅನುಭವಿಸಿದ್ದಾರೆ. ಹೀಗಿದ್ದೂ ಮೂರನೇ ಪಂದ್ಯದಲ್ಲಿ ಗಿಲ್ಗೆ ಮತ್ತೊಂದು ಅವಕಾಶ ಸಿಗುವ ಸಾಧ್ಯತೆಯಿದೆ.
211
2. ಯಶಸ್ವಿ ಜೈಸ್ವಾಲ್:
ಏಕದಿನ ಸರಣಿಯಲ್ಲಿ ಮಿಂಚಿದ್ದ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್, ಟಿ20 ಕ್ರಿಕೆಟ್ನಲ್ಲಿ ನಿರಾಸೆ ಮೂಡಿಸಿದ್ದಾರೆ. ಹೀಗಾಗಿ ಕಿಶನ್ಗೆ ವಿಶ್ರಾಂತಿ ನೀಡಿ ಎಡಗೈ ಸ್ಪೋಟಕ ಬ್ಯಾಟರ್ ಯಶಸ್ವಿ ಜೈಸ್ವಾಲ್ಗೆ ಇಂದಿನ ಪಂದ್ಯದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.
311
3. ಸೂರ್ಯಕುಮಾರ್ ಯಾದವ್:
ಭಾರತದ ಮಿಸ್ಟರ್ 360 ಖ್ಯಾತಿಯ ಸ್ಪೋಟಕ ಬ್ಯಾಟರ್ ಸೂರ್ಯ, ಇಂದಿನ ಪಂದ್ಯದಲ್ಲಿ ಜವಾಬ್ದಾರಿಯುತ ಆಟ ಪ್ರದರ್ಶಿಸಬೇಕಾಗಿದೆ. ಸೂರ್ಯ ಸಿಡಿದರೆ, ವಿಂಡೀಸ್ ಬೌಲರ್ಗಳಿಗೆ ಉಳಿಗಾಲವಿಲ್ಲ.
411
4. ಸಂಜು ಸ್ಯಾಮ್ಸನ್:
ಟೀಂ ಇಂಡಿಯಾ ಅಗ್ರಕ್ರಮಾಂಕದ ಬ್ಯಾಟರ್ಗಳ ದಯಾನೀಯ ವೈಫಲ್ಯದಿಂದಾಗಿ ಮಧ್ಯಮ ಕ್ರಮಾಂಕದ ಮೇಲೆ ಒತ್ತಡ ಬೀಳುತ್ತಿದೆ. ಹೀಗಾಗಿ ಮಧ್ಯಮ ಕ್ರಮಾಂಕದಲ್ಲಿ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ.
511
5. ತಿಲಕ್ ವರ್ಮಾ:
ಭಾರತ ಪರ ಮೊದಲೆರಡು ಪಂದ್ಯಗಳಲ್ಲಿ ನಂಬಿಕೆ ಉಳಿಸಿಕೊಳ್ಳುವಂತ ಪ್ರದರ್ಶನ ತೋರಿದ ಬ್ಯಾಟರ್ ಎಂದರೆ ಅದು ತಿಲಕ್ ವರ್ಮಾ. ಉತ್ತಮ ಲಯದಲ್ಲಿರುವ ತಿಲಕ್ ವರ್ಮಾ ಮತ್ತೊಂದು ಉತ್ತಮ ಇನಿಂಗ್ಸ್ ಆಡುವ ವಿಶ್ವಾಸದಲ್ಲಿದ್ದಾರೆ.
611
6. ಹಾರ್ದಿಕ್ ಪಾಂಡ್ಯ:
ನಾಯಕ ಹಾರ್ದಿಕ್ ಪಾಂಡ್ಯ ಮೊದಲ ಪಂದ್ಯ ಸೋತಿದ್ದರಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದು, ಇದೀಗ ಆಟಗಾರನಾಗಿ ಹಾಗೂ ನಾಯಕನಾಗಿ ಜವಾಬ್ದಾರಿಯುತ ಪ್ರದರ್ಶನ ತೋರಬೇಕಾದ ಒತ್ತಡ ಪಾಂಡ್ಯ ಮೇಲಿದೆ.
711
7. ಅಕ್ಷರ್ ಪಟೇಲ್:
ಕಳೆದ ಟಿ20 ಪಂದ್ಯದಲ್ಲಿ ಅಕ್ಷರ್ ಪಟೇಲ್ 14 ರನ್ ಬಾರಿಸಿದ್ದರು. ಆದರೆ ಬೌಲಿಂಗ್ ಮಾಡಿರಲಿಲ್ಲ. ಇಂದು ಪಂದ್ಯ ಗೆಲ್ಲಬೇಕಿದ್ದರೇ ಅಕ್ಷರ್ ಪಟೇಲ್ ಬ್ಯಾಟಿಂಗ್ ಹಾಗೂ ಬೌಲಿಂಗ್ನಲ್ಲಿ ಮಿಂಚಬೇಕಿದೆ.
811
8. ಕುಲ್ದೀಪ್ ಯಾದವ್:
ಎರಡನೇ ಟಿ20 ಪಂದ್ಯದಲ್ಲಿ ರವಿ ಬಿಷ್ಣೋಯ್ ಯಾವುದೇ ವಿಕೆಟ್ ಕಬಳಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ರವಿ ಬಿಷ್ಣೋಯ್ ಬದಲಿಗೆ ಕುಲ್ದೀಪ್ ಯಾದವ್ ತಂಡ ಕೂಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.
911
9. ಯುಜುವೇಂದ್ರ ಚಹಲ್:
ಕಳೆದ ಪಂದ್ಯದಲ್ಲಿ ಪಂದ್ಯದ ದಿಕ್ಕನ್ನೇ ತಿರುವಂತಹ ಪ್ರದರ್ಶನ ತೋರಿದ್ದ ಚಹಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದು, ಚಹಲ್ ಹಾಗೂ ಕುಲ್ದೀಪ್ ಜೋಡಿ ವಿಂಡೀಸ್ ಬ್ಯಾಟರ್ಗಳನ್ನು ಕಾಡುವ ಸಾಧ್ಯತೆಯಿದೆ.
1011
10. ಮುಕೇಶ್ ಕುಮಾರ್:
27 ವರ್ಷದ ವೇಗಿ ಮುಕೇಶ್ ಕುಮಾರ್ ಕಳೆದ ಪಂದ್ಯದಲ್ಲಿ ಒಂದು ವಿಕೆಟ್ ಕಬಳಿಸಿದ್ದು, ಆದರೆ ಹೆಚ್ಚು ರನ್ ಬಿಟ್ಟುಕೊಟ್ಟು ದುಬಾರಿ ಬೌಲರ್ ಎನಿಸಿದ್ದರು. ಇಂದಿನ ಪಂದ್ಯದಲ್ಲಿ ಮುಕೇಶ್ ಕುಮಾರ್ ಕಮ್ಬ್ಯಾಕ್ ಮಾಡಲು ಎದುರು ನೋಡುತ್ತಿದ್ದಾರೆ.
1111
11. ಆರ್ಶದೀಪ್ ಸಿಂಗ್:
ಭಾರತದ ಡೆತ್ ಓವರ್ ಸ್ಪೆಷಲಿಸ್ಟ್ ಆರ್ಶದೀಪ್ ಸಿಂಗ್, ಇತ್ತೀಚೆಗೆ ಕೊಂಚ ದುಬಾರಿಯಾಗುತ್ತಿದ್ದಾರೆ. ಹೀಗಿದ್ದು, ಮೂರನೇ ಟಿ20 ಪಂದ್ಯದಲ್ಲಿ ಎಡಗೈ ವೇಗಿ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ದಟ್ಟವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.