ಸಿಎಸ್ಕೆಯಲ್ಲಿ ಋತುರಾಜ್ ಗಾಯಕ್ವಾಡ್, ಮುಂಬೈ ಇಂಡಿಯನ್ಸ್ನಲ್ಲಿ ಹಾರ್ದಿಕ್ ಪಾಂಡ್ಯ, ಲಕ್ನೋದಲ್ಲಿ ಕೆಎಲ್ ರಾಹುಲ್, ಡೆಲ್ಲಿಯಲ್ಲಿ ರಿಷಭ್ ಪಂತ್, ಕೆಕೆಆರ್ನಲ್ಲಿ ಶ್ರೇಯಸ್ ಅಯ್ಯರ್, ಗುಜರಾತ್ನಲ್ಲಿ ಶುಭ್ಮನ್ ಗಿಲ್ ನಾಯಕರಾಗಿದ್ದಾರೆ. ಅದರ ಜೊತೆಗೆ ಹೈದರಾಬಾದ್ನಲ್ಲಿ ಪ್ಯಾಟ್ ಕಮಿನ್ಸ್ ನಾಯಕರಾಗಿದ್ದಾರೆ. ಹೀಗಾಗಿ, ಈ ತಂಡಗಳನ್ನು ಹೊರತುಪಡಿಸಿ ಡೆಲ್ಲಿ ಕ್ಯಾಪಿಟಲ್ಸ್, ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ಮಾತ್ರ 17 ವರ್ಷಗಳಿಂದ ಟ್ರೋಫಿಗಾಗಿ ಹೋರಾಡುತ್ತಿವೆ. 18ನೇ ಆವೃತ್ತಿಯ ಐಪಿಎಲ್ನಲ್ಲಿ ಈ ಮೂರು ತಂಡಗಳಲ್ಲಿ ಒಂದು ತಂಡ ಟ್ರೋಫಿ ಗೆದ್ದರೆ ಪ್ರಶಸ್ತಿ ಬರ ನೀಗಿದಂತಾಗುತ್ತದೆ.