ರೇಖಾ ಕದಿರೇಶ್ ಮರ್ಡರ್: ವೈಯಕ್ತಿಕ ಹಗೆತನಕ್ಕೆ ಮೂರು ವರ್ಷಗಳ ಹಿಂದೆ ರೇಖಾ ಅವರ ಪತಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರಾಗಿದ್ದ ಕದಿರೇಶ್ ಅವರು ಕೂಡ ಹಾಡಹಗಲೇ ಕೊಲೆಯಾಗಿದ್ದರು. ಇದಾದ ಮೇಲೆ ಕಳೆದ ಜೂನ್ ನಲ್ಲಿ ರೇಖಾ ಕದಿರೇಶ್ ಹತ್ಯೆ ಅವರನ್ನು ಹತ್ಯೆ ಮಾಡಲಾಗಿತ್ತು. ಸಂಬಂಧಿಕರಿಂದಲೇ ಕೃತ್ಯ ನಡೆದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ನಲ್ಲಿ ನೆಲೆಸಿದ್ದ ರೇಖಾ ಅವರು, ತಮ್ಮ ಮನೆ ಹತ್ತಿರದ ಗೃಹ ಕಚೇರಿಯಲ್ಲಿ ಬಡವರಿಗೆ ಆಹಾರ ಕಿಟ್ ವಿತರಣೆಗೆ ಸಿದ್ಧತೆ ನಡೆಸಿದ್ದರು. ಎಲ್ಲರ ಎದುರಿನಲ್ಲೇ ದುಷ್ಕರ್ಮಿಗಳು ಚಾಕುವಿನಿಂದ ಮನಬಂದಂತೆ ಇರಿದು ಪರಾರಿಯಾಗಿದ್ದರು. ರೌಡಿಶೀಟರ್ ಮಾಲಾ, ಸೂರ್ಯ, ಪೀಟರ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಆರೋಪಿಗಳನ್ನು ಬಂಧಿಸಿ ಕಾಟನ್ಪೇಟೆ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.