ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರಿನಲ್ಲಿ ಶಿವರಾತ್ರಿಯ ಸಂಭ್ರಮದ ನಡುವೆಯೇ ರಾಮಲಿಂಗೇಶ್ವರ ಹಾಗೂ ನಂದಿ ವಿಗ್ರಹಗಳನ್ನು ಭಗ್ನಗೊಳಿಸಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾದ ಘಟನೆಯ ವಿವರ ಇಲ್ಲಿದೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಶಿಂಗಟಾಲೂರು ಗ್ರಾಮದಲ್ಲಿ ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲೇ ಆಘಾತಕಾರಿ ಘಟನೆಯೊಂದು ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಪುರಾತನ ರಾಮಲಿಂಗೇಶ್ವರ ದೇವಸ್ಥಾನಕ್ಕೆ ನುಗ್ಗಿದ ಅನಾಮಿಕ ದುಷ್ಕರ್ಮಿಗಳು ದೇವರ ವಿಗ್ರಹಗಳನ್ನು ಭಗ್ನಗೊಳಿಸುವ ಮೂಲಕ ವಿಕೃತಿ ಮೆರೆದಿದ್ದಾರೆ
23
ಪೂಜೆಗೆ ಹೋದಾಗ ಬೆಳಕಿಗೆ ಬಂದ ದುಷ್ಕೃತ್ಯ
ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗುರುವಾರವಷ್ಟೇ ದೇವಸ್ಥಾನಕ್ಕೆ ಸುಣ್ಣ-ಬಣ್ಣ ಬಳಿದು ಪೂಜೆಗೆ ಸಿದ್ಧತೆ ಮಾಡಿಕೊಂಡಿದ್ದರು. ಇಂದು ಬೆಳಿಗ್ಗೆ ಎಂದಿನಂತೆ ಭಕ್ತರು ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದಾಗ ವಿಗ್ರಹಗಳು ಭಗ್ನಗೊಂಡಿರುವುದು ಕಂಡುಬಂದಿದೆ. ಇದನ್ನು ಕಂಡು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
33
ಲಿಂಗ, ನಂದಿ ವಿಗ್ರಹ ವಿರೂಪ
ದುಷ್ಕರ್ಮಿಗಳು ರಾಮಲಿಂಗೇಶ್ವರ ಲಿಂಗದ ಪಾಣಿಬಟ್ಟಲು ಹಾಗೂ ಎದುರಿಗಿದ್ದ ನಂದಿ ವಿಗ್ರಹದ ಮುಖವನ್ನು ಪೂರ್ಣವಾಗಿ ಧ್ವಂಸಗೊಳಿಸಿದ್ದಾರೆ. ಅಷ್ಟೇ ಅಲ್ಲದೆ, ದೇವಸ್ಥಾನದ ಹಿಂಭಾಗದಲ್ಲಿದ್ದ ಹೊನ್ನತ್ತೆಮ್ಮ ದೇವಿಯ ವಿಗ್ರಹವನ್ನೂ ವಿರೂಪಗೊಳಿಸಿ ವಿಕೃತಿ ಪ್ರದರ್ಶಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ