ಕೆಂಗೇರಿ ಒಂಟಿ ಮಹಿಳೆ ಹತ್ಯೆ ಕೇಸ್‌ಗೆ ಟ್ವಿಸ್ಟ್, ಲವರ್‌ಗೆ ಗಾಡಿ ಕೊಡಿಸಲು ರೀಲ್ಸ್ ರಾಣಿಯಿಂದ ಡೆಡ್ಲಿ ಮರ್ಡರ್!

First Published May 15, 2024, 12:12 PM IST

ಕೆಂಗೇರಿ ಠಾಣಾ ವ್ಯಾಪ್ತಿಯ ಒಂಟಿ ಮಹಿಳೆ ಕೊಲೆ ಪ್ರಕರಣಕ್ಕೆ ಈಗ  ಬಿಗ್‌ ಟ್ವಿಸ್ಟ್  ಸಿಕ್ಕಿದೆ. ಬಾಡಿಗೆ ಮನೆಯಲ್ಲಿದ್ದ ಯುವತಿಯೊಬ್ಬಳು ಈ ಕೊಲೆ ಮಾಡಿದ್ದು,  ಕುತ್ತಿಗೆಯಲ್ಲಿದ್ದ ಚಿನ್ನದ ಸರಕ್ಕಾಗಿ  ರೀಲ್ಸ್ ರಾಣಿ ಕೊಂದಿರುವುದು ಬೆಳಕಿಗೆ ಬಂದಿದೆ.

ಸದ್ಯ ಸಾಲ ತೀರಿಸಲು ಮನೆ ಮಾಲಕಿಯನ್ನೆ ಹತ್ಯೆ ಮಾಡಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ವರ್ಷದ ಬಂಧಿತ ಆರೋಪಿಯಾಗಿದ್ದಾಳೆ. ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಈ ಹತ್ಯೆ ನಡೆದಿತ್ತು.
 

ಕಂಪೆನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ  ಮಾಡಿಕೊಂಡಿದ್ದ ಮೋನಿಕಾ, ಸಾಲ ತೀರಿಸಲು ಹಾಗೂ ಶೋಕಿ ಜೀವನ ನಡೆಸಲು ಬಾಡಿಗೆ ಪಡೆದುಕೊಂಡಿದ್ದ ಮನೆಯ ಮಾಲಕಿಯನ್ನು  ಹತ್ಯೆ ಮಾಡಿದ್ದಾಳೆ. 

Latest Videos


ಮೂಲತಃ ಕೋಲಾರ ಜಿಲ್ಲೆಯ ಮೋನಿಕ ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಮೂರು ತಿಂಗಳ ಹಿಂದಷ್ಟೇ  ಗುರುಮೂರ್ತಿ ಎಂಬುವವರ ಮನೆಯಲ್ಲಿ ಬಾಡಿಗೆಗೆ ಬಂದಿದ್ದಳು. ತನ್ನ ಪ್ರಿಯಕರನನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿದ್ದಳು. 

ಆದ್ರೆ ಒಬ್ಬಂಟಿಯಾಗಿ ವಾಸವಿದ್ದ ಮೋನಿಕ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ. ತನ್ನ ಶೋಕಿಗಾಗಿ  ಮೋನಿಕ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆ ಪ್ರಿಯಕರನಿಗೆ ಟಾಟಾ ಎಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ (36) ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಕಣ್ಣು ಬಿದ್ದಿತ್ತು.

ಕೊಲೆಯಾದ ದಿವ್ಯ ಪತಿ ಗುರುಮೂರ್ತಿ ಕೆಂಗೇರಿ ಉಪನಗರದ ಶಿವನಪಾಳ್ಯದಲ್ಲಿ ಸಲೂನ್ ಶಾಪ್ ನಡೆಸುತ್ತಿದ್ದರು. ದಿವ್ಯ ಅತ್ತೆ ಮಾವ ಕೂಡ ಬೆಳಗಾದ್ರೆ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ ಮನೆಯಲ್ಲಿ ದಿವ್ಯ ಹಾಗೂ 2 ವರ್ಷದ ಮಗು ಮಾತ್ರ ಇರುತ್ತಿದ್ದರು.

ಇದನ್ನೇ ಬಂಡವಾಳ ಮಾಡಿಕೊಂಡ ಮೋನಿಕಾ,  ದಿವ್ಯ ಒಬ್ಬಂಟಿಯಾಗಿದ್ದಾಗ ಹಿಂಬದಿಯಿಂದ ಬಂದು ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾಳೆ. ಕೊಲೆ ಮಾಡಿ ಕುತ್ತಿಗೆಯಲ್ಲಿದ್ದ 36 ಗ್ರಾಂ ಚಿನ್ನದ ಸರ ಕಸಿದು ಕೊಂಡು ಹೋಗಿದ್ದಳು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಕೆಂಗೇರಿ ಪೊಲೀಸರು ಮೋನಿಕಾಳನ್ನು ಬಂಧಿಸಿದ್ದಾರೆ.

click me!