ತೇಣಿ ಜಿಲ್ಲೆ ಆಂಡಿಪಟ್ಟಿ ಹತ್ತಿರದ ಕದಿರ್ನರಸಿಂಗಪುರದವರು ಪರಮೇಶ್ವರನ್ (56). ಸರ್ಕಾರಿ ಬಸ್ಸಿನಲ್ಲಿ ಚಾಲಕರಾಗಿದ್ದಾರೆ.ಇವರ ಮಗಳು ಸೌಮ್ಯಾ (24). ಪೆರಿಯಕುಳಂ ಕಾಲೇಜಿನಲ್ಲಿ ಪದವಿ ಮುಗಿಸಿದ್ದಾಳೆ. ಕಂಬಂ ಪುದುಪಟ್ಟಿಯ ರವಿಚಂದ್ರನ್ ಮಗ ಪಾಲಾಜಿ (27) ಜೊತೆ ಸೌಮ್ಯಾಳ ಮದುವೆ ನಿಶ್ಚಯ ಆಗಿತ್ತಂತೆ.
24
ಮದುವೆ
ಮದುವೆ ತಯಾರಿ ಜೋರಾಗಿ ನಡೀತಿತ್ತು. ಆದ್ರೆ ಸೌಮ್ಯಾಗೆ ಈ ಮದುವೆಯಲ್ಲಿ ಇಷ್ಟ ಇರಲಿಲ್ಲವಂತೆ ಅದ್ಯಾಗೂ ಪೋಷಕರು ಜನವರಿ 31 ರಂದು ಕಂಬಂನಲ್ಲಿರುವ ಖಾಸಗಿ ಮದುವೆ ಮಂಟಪದಲ್ಲಿ ಮಗಳಿಗೆ ಮದುವೆ ಮಾಡಿದ್ದಾರೆ.
34
ಆತ್ಮಹತ್ಯೆ
ಮದುವೆ ಮನೆಯವರು ವಧುವನ್ನು ಕದಿರ್ನರಸಿಂಗಪುರಕ್ಕೆ ಕರೆದುಕೊಂಡು ಹೋದರು. ಮನೆಗೆ ಬಂದ ಸೌಮ್ಯಾ ಬಾತ್ರೂಮ್ಗೆ ಹೋಗಬೇಕು ಅಂದ್ರಂತೆ. ಬೆಡ್ರೂಮ್ಗೆ ಹೋದ ಸೌಮ್ಯಾ ಬಾಗಿಲು ಹಾಕಿಕೊಂಡ್ಳು. ಬಾಗಿಲು ತೆಗೆಯದಿದ್ದಾಗ ಮನೆಯವರು ಬಾಗಿಲು ಒಡೆದು ನೋಡಿದಾಗ ಸೌಮ್ಯಾ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾಳೆ.
44
ಪೊಲೀಸ್ ತನಿಖೆ
ಪೊಲೀಸರಿಗೆ ವಿಷಯ ತಿಳಿಸಲಾಯ್ತು. ಸೌಮ್ಯಾಳ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯ್ತು. ಪೊಲೀಸರು ತನಿಖೆ ಮಾಡ್ತಿದ್ದಾರೆ. ತನಿಖೆ ವೇಳೆ ತಿಳಿದುಬಂದಿದ್ದು ಏನೆಂದರೆ ಸೌಮ್ಯಾಗೆ ಮದುವೆ ಇಷ್ಟ ಇರಲಿಲ್ಲ, ಆಕೆ ಕನ್ಯಾಸ್ತ್ರೀ ಆಗಿ ಉಳಿಬೇಕು ಅಂದುಕೊಂಡಿದ್ದಳಂತೆ. ಅಂದರೆ ಮದುವೆಯಾಗದೇ ಜೀವನ ಕಳೆಯಬೇಕು ಎಂಬ ಆಸೆ ಇತ್ತಂತೆ ಆದರೆ ಪೋಷಕರು ಮದುವೆ ಮಾಡಿದ ಕಾರಣ ಬೇಸರಗೊಂಡು ಜೀವಕ್ಕೆ ಅಂತ್ಯ ತಂದುಕೊಂಡಿದ್ದಾಳೆಂದು ಹೇಳಲಾಗಿದೆ. ಆದ್ಯಾಗೂ ಪೊಲೀಸರು ಆತ್ಮಹತ್ಯೆಯ ನಿಖರ ಕಾರಣವೇನು ಎಂದು ತಿಳಿಯಲು ತನಿಖೆ ಮುಂದುವರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ