ಕಾರು ಅಪಘಾತ: ಸಚಿವರಿಗೆ ಗಂಭೀರ ಗಾಯ, ಪತ್ನಿ ಸೇರಿ ಇಬ್ಬರು ಸಾವು

First Published Jan 11, 2021, 11:19 PM IST

ಕೇಂದ್ರ ಆಯುಷ್ ಸಚಿವರ ಕಾರು ಅಂಕೋಲಾ ಬಳಿ ಪಲ್ಟಿಯಾಗಿದ್ದು, ಅವರ ಪತ್ನಿ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಸಚಿವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗ ದಾಖಲು ಮಾಡಲಾಗಿದೆ.

ಕೇಂದ್ರ ಆಯುಷ್ ಸಚಿವ ಶ್ರೀಪಾದ್ ನಾಯಕ್ ಕಾರು ಪಲ್ಟಿಯಾಗಿ ಸಚಿವರ ಪತ್ನಿ ಹಾಗೂ ಆಪ್ತಕಾರ್ಯದರ್ಶಿ ಸಾವು
undefined
ಇಂದು (ಸೋಮವಾರ) ರಾತ್ರಿ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕು ಹೊಸಕಂಬಿ ಗ್ರಾಮದ ಬಳಿ ಘಟನೆ
undefined
ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ವೇಳೆ ಹೊಸಕಂಬಿ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
undefined
ಕಾರಿನಲ್ಲಿದ್ದ ಸಚಿವರ ಪತ್ನಿ ವಿಜಯಾ ನಾಯಕ್, ಆಪ್ತಕಾರ್ಯದರ್ಶಿ ದೀಪಕ್ ಗುಮೆ ಸಾವು
undefined
ಇನ್ನು ಸಚಿವ ಶ್ರೀಪಾದ್ ನಾಯಕ್ ಸೇರಿ ನಾಲ್ವರಿಗೆ ಗಾಯ
undefined
ಅಂಕೋಲಾದ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಗೋವಾದ ಬಾಂಬೋಲಿ ಆಸ್ಪತ್ರೆಗೆ ರವಾನೆ
undefined
ಯಲ್ಲಾಪುರದ ಚಂದಗುಳಿ ಗಂಟೆ ಗಣಪತಿ ದೇವಸ್ಥಾನಕ್ಕೆ ಸೋಮವಾರ ಕುಟುಂಬ ಸಮೇತ ಆಗಮಿಸಿದ್ದ ಶ್ರೀಪಾದ ನಾಯಕ ಅವರು ಗಣಹವನ ನೆರವೇರಿಸಿದ್ದರು. ನಂತರ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು. ಸಾಯಂಕಾಲ ಯಲ್ಲಾಪುರದಿಂದ ಹೊಸಕಂಬಿ ಮಾರ್ಗವಾಗಿ ಗೋಕರ್ಣಕ್ಕೆ ಪ್ರಯಾಣ ಬೆಳೆಸಿದ್ದರು. ಆ ಸಂದರ್ಭದಲ್ಲಿ ಅಪಘಾತವಾಗಿದೆ.
undefined
ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
undefined
click me!