IIIT Dharwad ಉದ್ಘಾಟನೆ: ರಾಷ್ಟ್ರಪತಿ ದ್ರೌಪದಿಗೆ ಕೌದಿ, ಸಿಲ್ಕ್ ಸೀರೆ ನೀಡಿದ ಸುಧಾಮೂರ್ತಿ

Published : Sep 26, 2022, 05:57 PM ISTUpdated : Sep 26, 2022, 06:04 PM IST

ಹುಬ್ಬಳ್ಳಿ ಧಾರವಾಡ: ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಮೈಸೂರಿನಲ್ಲಿ ನಾಡಹಬ್ಬ ದಸರಾ ಉದ್ಘಾಟಿಸಿ ಧಾರವಾಡಕ್ಕೆ ತೆರಳಿದರು. ಅಲ್ಲಿ ಧಾರವಾಡದ ಐಐಐಟಿಯ ಹೊಸ ಕ್ಯಾಂಪಸ್‌ನ್ನು ಉದ್ಘಾಟಿಸಿದರು. ಇಲ್ಲಿ ಇನ್ಪೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರು ರಾಷ್ಟ್ರಪತಿ ದ್ರೌಪದಿ ಅವರಿಗೆ ಕೌದಿ ಹಾಗೂ ಸೀರೆಯನ್ನು ಉಡುಗೊರೆಯಾಗಿ ನೀಡಿದರು.

PREV
15
IIIT Dharwad ಉದ್ಘಾಟನೆ: ರಾಷ್ಟ್ರಪತಿ ದ್ರೌಪದಿಗೆ ಕೌದಿ, ಸಿಲ್ಕ್ ಸೀರೆ ನೀಡಿದ ಸುಧಾಮೂರ್ತಿ

 ದಸರಾ ಉದ್ಘಾಟನೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮರ್ಮು ಅವರು ಮೈಸೂರಿನಲ್ಲಿ ನಾಡಹಬ್ಬ ದಸರಾ ಉದ್ಘಾಟಿಸಿದ ಬಳಿಕ ಚಾಮುಂಡಿ ತಾಯಿ ದರ್ಶನ ಮಾಡಿ ಹುಬ್ಬಳಿ ಧಾರವಾಡದತ್ತ ತೆರಳಿದರು.

25

ಅಲ್ಲಿ ಅವರು ಹುಬ್ಬಳ್ಳಿ ಪಾಲಿಕೆಯಲ್ಲಿ ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಆಯೋಜಿಸಿದ್ದ ಪೌರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು. 

35

ಇದಾದ ಬಳಿಕ ಐಐಐಟಿ ಉದ್ಘಾಟನೆಗೆ ಧಾರವಾಡಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮರ್ಮು ಅವರಿಗೆ ಕೌದಿ ಹಾಗೂ ರೇಷ್ಮೆ ಸೀರೆ ಉಡುಗೊರೆಯಾಗಿ ನೀಡಿದ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ . ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಉಪಸ್ಥಿತರಿದ್ದರು. 

45

ಮೈಸೂರಿನಲ್ಲೂ ಮೈಸೂರು ದಸರಾ ಸಮಿತಿ ದ್ರೌಪದಿ ಅವರಿಗೆ ಮೈಸೂರಿನಲ್ಲೇ ತಯಾರಿಸಿದ ಮೈಸೂರು ರೇಷ್ಮೆ ಸೀರೆಯನ್ನು ನೀಡಿದ್ದರು. ಇದನ್ನು ದಸರಾಗೆ ಆಹ್ವಾನಿಸುವ ವೇಳೆಯೇ ರಾಷ್ಟ್ರಪತಿಗಳಿಗೆ ನೀಡಲಾಗಿತ್ತು.

55

ಇಂದು ದಸರಾಗೆ ಆಗಮಿಸಿದ ರಾಷ್ಟ್ರಪತಿ ಅದೇ ಸೀರೆಯನ್ನು ಉಟ್ಟು ದಸರಾಗೆ ಆಗಮಿಸಿ, ಮೈಸೂರು ಸಿಲ್ಕ್ ಸೀರೆಯ ಘನತೆಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ಇನ್ನು ಧಾರವಾಡದಲ್ಲಿ ಐಐಐಟಿಯ ಹೊಸ ಕ್ಯಾಂಪಸ್ ಉದ್ಘಾಟಿಸಿ ರಾಷ್ಟ್ರಪತಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

Read more Photos on
click me!

Recommended Stories