ಸರ್ಕಾರಿ ಶಾಲೆಯ ದುರಾವಸ್ಥೆಯಿಂದ ಆಕ್ರೋಶಗೊಂಡು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಮುಂದಾಗಿದ್ದಾರೆ. ಉಳ್ಳವರು ಖಾಸಗಿ ಶಾಲೆಗೆ ಸೇರಿಸುತ್ತಾರೆ, ಬಡವರು ಕೂಲಿ ಕಾರ್ಮಿಕರು ಏನು ಮಾಡಬೇಕು?. ಇಲ್ಲಿನ ಶಿಕ್ಷಕರನ್ನು ವರ್ಗಾವಣೆ ಮಾಡಿ ಹದಗಟ್ಟಿರುವ ಸರ್ಕಾರಿ ಶಾಲೆಯ ಚಿತ್ರಣ ಬದಲಿಸಬೇಕು ಎಂದು ಗ್ರಾಮಸ್ಥರ ಆಗ್ರಹಿಸಿದ್ದಾರೆ. ಇದಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಕ್ರಮ ವಹಿಸಬೇಕಿದೆ.
ಒಟ್ಟಿನಲ್ಲಿ ಗಡಿ ಜಿಲ್ಲೆಯ ಸರ್ಕಾರಿ ಶಾಲೆಗಳನ್ನು ಉಳಿಸುವಂತೆ ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡ ತರುತ್ತಿದ್ದಾರೆ.ಆದ್ರೆ ಇಲ್ಲಿ ಇರುವ ಇಬ್ಬರು ಶಿಕ್ಷಕರ ಜಗಳಕ್ಕೆ ಬೇಸತ್ತ ಪೋಷಕರು ಮಕ್ಕಳನ್ನು ಶಾಲೆ ಬಿಡಿಸಿ ಖಾಸಗಿ ಶಾಲೆಗೆ ಸೇರಿಸುತ್ತಿದ್ದಾರೆ.ಇಷ್ಟಾದರೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆಂಬ ಆರೋಪ ಕೇಳಿಬಂದಿದೆ.
ವರದಿ - ಪುಟ್ಟರಾಜು. ಆರ್. ಸಿ, ಏಷ್ಯಾನೆಟ್ ಸುವರ್ಣ ನ್ಯೂಸ್