ಶಿಕ್ಷಣ ನೀತಿಯಿಂದ ಭಾರತ ಜ್ಞಾನದ ಸೂಪರ್‌ ಪವರ್‌ ಆಗಲಿದೆ: ಅಶ್ವತ್ಥ ನಾರಾಯಣ

Kannadaprabha News   | Asianet News
Published : Sep 16, 2020, 07:58 AM IST

ಬೆಂಗಳೂರು(ಸೆ.16): ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ಬಳಿಕ ಭಾರತ ಜಗತ್ತಿನಲ್ಲಿಯೇ ಜ್ಞಾನದ ‘ಸೂಪರ್‌ ಪವರ್‌’ ಆಗಿ ಹೊರಹೊಮ್ಮಲಿದೆ ಎಂದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

PREV
15
ಶಿಕ್ಷಣ ನೀತಿಯಿಂದ ಭಾರತ ಜ್ಞಾನದ ಸೂಪರ್‌ ಪವರ್‌ ಆಗಲಿದೆ: ಅಶ್ವತ್ಥ ನಾರಾಯಣ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಹಯೋಗದಲ್ಲಿ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಅಶ್ವತ್ಥ ನಾರಾಯಣ 

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಹಯೋಗದಲ್ಲಿ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಅಶ್ವತ್ಥ ನಾರಾಯಣ 

25

ಭಾರತದ ಶಿಕ್ಷಣ ವ್ಯವಸ್ಥೆ ಹೇಗಿರಬೇಕು, ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಿರುವ ಶಿಕ್ಷಣ ನೀತಿ, ಇನ್ನು ಕೆಲವೇ ವರ್ಷಗಳಲ್ಲಿ ಭಾರತವನ್ನು ಆಮೂಲಾಗ್ರವಾಗಿ ಬದಲಾಯಿಸಲಿದೆ ಎಂಬ ಅಚಲ ನಂಬಿಕೆ ಇದೆ ಎಂದರು.

ಭಾರತದ ಶಿಕ್ಷಣ ವ್ಯವಸ್ಥೆ ಹೇಗಿರಬೇಕು, ಯಾವ ದಿಕ್ಕಿನಲ್ಲಿ ಸಾಗಬೇಕು ಎಂಬ ಬಗ್ಗೆ ಸ್ಪಷ್ಟ ಮಾರ್ಗಸೂಚಿ ನೀಡಿರುವ ಶಿಕ್ಷಣ ನೀತಿ, ಇನ್ನು ಕೆಲವೇ ವರ್ಷಗಳಲ್ಲಿ ಭಾರತವನ್ನು ಆಮೂಲಾಗ್ರವಾಗಿ ಬದಲಾಯಿಸಲಿದೆ ಎಂಬ ಅಚಲ ನಂಬಿಕೆ ಇದೆ ಎಂದರು.

35

ನೂತನ ಶಿಕ್ಷಣ ನೀತಿಯಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ರೂಪಿಸುವುದು, ಗುಣಮಟ್ಟದ ಬೋಧನೆ ಹಾಗೂ ಕಲಿಕೆ ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಮಹತ್ವದ ಅಂಶಗಳು. ಇದರ ಜೊತೆಗೆ ಬಹು ವಿಷಯಗಳ ಕಲಿಕೆ ಹಾಗೂ ವಿದ್ಯಾರ್ಥಿಗಳಿಗೆ ಕಲಿಕೆಯ ಅನೇಕ ಆಯ್ಕೆಗಳೂ ಇರುತ್ತವೆ. ಈ ಹಿನ್ನೆಲೆಯಲ್ಲಿ ಬಹುಮುಖ ಪ್ರತಿಭೆಗಳು ಹೊರಬರಲು ಹೊಸ ನೀತಿ ಎಲ್ಲ ರೀತಿಯ ಉತ್ತೇಜನ ನೀಡುತ್ತದೆ ಎಂದು ಹೇಳಿದರು.

ನೂತನ ಶಿಕ್ಷಣ ನೀತಿಯಲ್ಲಿ ಗುಣಮಟ್ಟಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಗುಣಮಟ್ಟದ ಶಿಕ್ಷಣ ಸಂಸ್ಥೆಗಳನ್ನು ರೂಪಿಸುವುದು, ಗುಣಮಟ್ಟದ ಬೋಧನೆ ಹಾಗೂ ಕಲಿಕೆ ಶಿಕ್ಷಣ ನೀತಿಯಲ್ಲಿ ಅಡಕವಾಗಿರುವ ಮಹತ್ವದ ಅಂಶಗಳು. ಇದರ ಜೊತೆಗೆ ಬಹು ವಿಷಯಗಳ ಕಲಿಕೆ ಹಾಗೂ ವಿದ್ಯಾರ್ಥಿಗಳಿಗೆ ಕಲಿಕೆಯ ಅನೇಕ ಆಯ್ಕೆಗಳೂ ಇರುತ್ತವೆ. ಈ ಹಿನ್ನೆಲೆಯಲ್ಲಿ ಬಹುಮುಖ ಪ್ರತಿಭೆಗಳು ಹೊರಬರಲು ಹೊಸ ನೀತಿ ಎಲ್ಲ ರೀತಿಯ ಉತ್ತೇಜನ ನೀಡುತ್ತದೆ ಎಂದು ಹೇಳಿದರು.

45

ಇದೇ ವೇಳೆ ಶಿಕ್ಷಣ ನೀತಿಯ ಜಾರಿ ತರುವ ಸಂಬಂಧ ಮುಖ್ಯವಾಗಿ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹೊಸ ಶಿಕ್ಷಣ ನೀತಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿ ಆಗುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಮುಖ್ಯವಾಗಿದೆ. ಜೊತೆಗೆ, ಸಮಾಜದ ಪ್ರತಿಯೊಬ್ಬರೂ ಇದಕ್ಕಾಗಿ ಕೆಲಸ ಮಾಡಬೇಕಾಗುತ್ತದೆ ಎಂದರು.

ಇದೇ ವೇಳೆ ಶಿಕ್ಷಣ ನೀತಿಯ ಜಾರಿ ತರುವ ಸಂಬಂಧ ಮುಖ್ಯವಾಗಿ ಆಡಳಿತಾತ್ಮಕ ಮತ್ತು ಕಾನೂನಾತ್ಮಕ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಹೊಸ ಶಿಕ್ಷಣ ನೀತಿ ಅತ್ಯಂತ ಪರಿಣಾಮಕಾರಿಯಾಗಿ ಜಾರಿ ಆಗುವಲ್ಲಿ ವಿಶ್ವವಿದ್ಯಾಲಯಗಳ ಪಾತ್ರ ಮುಖ್ಯವಾಗಿದೆ. ಜೊತೆಗೆ, ಸಮಾಜದ ಪ್ರತಿಯೊಬ್ಬರೂ ಇದಕ್ಕಾಗಿ ಕೆಲಸ ಮಾಡಬೇಕಾಗುತ್ತದೆ ಎಂದರು.

55

ಸಮ್ಮೇಳನದಲ್ಲಿ ಯುಜಿಸಿ ಸದಸ್ಯ ಪೊ›. ಎಂ.ಕೆ. ಶ್ರೀಧರ್‌, ಬೆಂಗಳೂರು ಉತ್ತರ ವಿವಿ ಕುಲಪತಿ ಪೊ›. ಟಿ.ಡಿ. ಕೆಂಪರಾಜು ಪಾಲ್ಗೊಂಡಿದ್ದರು.

ಸಮ್ಮೇಳನದಲ್ಲಿ ಯುಜಿಸಿ ಸದಸ್ಯ ಪೊ›. ಎಂ.ಕೆ. ಶ್ರೀಧರ್‌, ಬೆಂಗಳೂರು ಉತ್ತರ ವಿವಿ ಕುಲಪತಿ ಪೊ›. ಟಿ.ಡಿ. ಕೆಂಪರಾಜು ಪಾಲ್ಗೊಂಡಿದ್ದರು.

click me!

Recommended Stories