ಕೋವಿಡ್ ನಡುವೆಯೂ ವಿದ್ಯಾಭ್ಯಾಸದ ಬಗ್ಗೆ ಉತ್ಕಟ ಶ್ರದ್ಧೆ ಹೊಂದಿರುವ ವಿದ್ಯಾರ್ಥಿಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದ ಡಿಸಿಎಂ ಅಶ್ವತ್ಥನಾರಾಯಣ ಅವರು, ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರಲ್ಲದೆ, ವಿದ್ಯಾರ್ಥಿಗಳ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜತೆಗೆ, ವೈರಸ್ ಬಗ್ಗೆ ಅಲಕ್ಷ್ಯ ಬೇಡ. ಮನೆಯಿಂದ ಕಾಲೇಜಿಗೆ ಸುರಕ್ಷಿತವಾಗಿ ಬಂದುಹೋಗಿ. ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ, ದೈಹಿಕ ಅಂತರ, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸ್ ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕೋವಿಡ್ ನಡುವೆಯೂ ವಿದ್ಯಾಭ್ಯಾಸದ ಬಗ್ಗೆ ಉತ್ಕಟ ಶ್ರದ್ಧೆ ಹೊಂದಿರುವ ವಿದ್ಯಾರ್ಥಿಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದ ಡಿಸಿಎಂ ಅಶ್ವತ್ಥನಾರಾಯಣ ಅವರು, ತರಗತಿ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರಲ್ಲದೆ, ವಿದ್ಯಾರ್ಥಿಗಳ ಕುಂದುಕೊರತೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಜತೆಗೆ, ವೈರಸ್ ಬಗ್ಗೆ ಅಲಕ್ಷ್ಯ ಬೇಡ. ಮನೆಯಿಂದ ಕಾಲೇಜಿಗೆ ಸುರಕ್ಷಿತವಾಗಿ ಬಂದುಹೋಗಿ. ಆರೋಗ್ಯವನ್ನು ಚೆನ್ನಾಗಿ ನೋಡಿಕೊಳ್ಳಿ, ದೈಹಿಕ ಅಂತರ, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸ್ ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.