ಸರ್ಕಾರ ಮತ್ತು ವಿಪಕ್ಷಗಳ ನಡುವೆ ಭಾರೀ ಜಟಾಪಟಿಗೆ ಕಾರಣವಾಗಿರುವ ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ(SIR) ವಿಷಯದ ಇದೀಗ ಎನ್ಸಿಇಆರ್ಟಿ(NCERT)ಯ 9ನೇ ತರಗತಿಯ ಸಾಮಾಜ ವಿಜ್ಞಾನ ಪಠ್ಯವಾಗಿ ಸೇರ್ಪಡೆಗೊಂಡಿದೆ.
ದೇಶದ ಯಾವುದೇ ಅರ್ಹ ನಾಗರಿಕ ವೋಟರ್ ಲಿಸ್ಟ್ನಿಂದ ಹೊರಗುಳಿಯಬಾರದು ಮತ್ತು ಅನರ್ಹನ ಹೆಸರು ಪಟ್ಟಿಯಲ್ಲಿ ಸೇರ್ಪಡೆಯಾಗದಂತೆ ನೋಡಿಕೊಳ್ಳಲು ಈ ವಿಶೇಷ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ಪಠ್ಯದಲ್ಲಿ ಹೇಳಲಾಗಿದೆ. ಸುಳ್ಳು ಸುದ್ದಿಗಳು, ತಪ್ಪು ಮಾಹಿತಿ ಮತ್ತು ಬೆದರಿಕೆಗಳ ನಡುವೆಯೂ ಚುನಾವಣಾ ಆಯೋಗವು ನಿಷ್ಪಕ್ಷಪಾತವಾಗಿ ಚುನಾವಣೆಗಳನ್ನು ನಡೆಸಿದೆ ಎಂದು ಪಠ್ಯ ಪುಸ್ತಕದಲ್ಲಿ ಹೇಳಲಾಗಿದೆ.