ಕಲಘಟಗಿ: ಸರ್ಕಾರದ ನೀತಿ ಖಂಡಿಸಿ ಬೀದಿಗಿಳಿದು ಹೋರಾಟಕ್ಕಿಳಿದ ವಿದ್ಯಾರ್ಥಿಗಳು
First Published Jan 25, 2021, 12:57 PM ISTಹುಬ್ಬಳ್ಳಿ(ಜ.25): ಶಾಲೆಗೆ ನೀಡಿದ್ದ ವೇತನಾನುದಾನ ಹಿಂಪಡೆ ಹಾಗೂ ಶಿಕ್ಷಕರನ್ನು ಬೇರೆ ಶಾಲೆಗಳಿಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ನೂರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜೋಡಳ್ಳಿ ಗ್ರಾಮದಲ್ಲಿ ಇಂದು(ಸೋಮವಾರ) ನಡೆದಿದೆ.