ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲ ಕಲ್ಪಿಸಲು 6 ತಿಂಗಳೊಳಗೆ ನಿಮ್ಹಾನ್ಸ್ಗೆ ಎರಡು ಹಂತಗಳಲ್ಲಿ 100 ವೆಂಟಿಲೇಟರ್ ಪೂರೈಸಲಾಗುವುದು. ಗ್ರಾಮೀಣ ಪ್ರದೇಶದ ಬಡವರು, ಹೆಣ್ಣು ಮಕ್ಕಳು ಹಾಗೂ ರೈತರಿಗೆ ನಿಮ್ಹಾನ್ಸ್ ಸೇವೆ ತಲುಪಬೇಕು. ಇದಕ್ಕಾಗಿ ಮುಂದಿನ ಆಯವ್ಯಯದಲ್ಲಿ ಮಾನಸಿಕ ಕೇಂದ್ರಗಳ ಸ್ಥಾಪನೆಗೆ ಅನುದಾನ ಮೀಸಲಿರಿಸಲಾಗುವುದು. ಮಾನಸಿಕ ಆರೋಗ್ಯ ಕೇಂದ್ರ ವಿಕೇಂದ್ರೀಕರಣಗೊಂಡು ಸಾಮಾನ್ಯರನ್ನು ತಲುಪಲು ಆಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಒತ್ತಡದಲ್ಲಿರುವ ಗ್ರಾಮೀಣ ಮಹಿಳೆಯರಿಗೆ ಪ್ರತ್ಯೇಕ ಕೋರ್ಸ್ ಪ್ರಾರಂಭಿಸುವಂತೆ ಸಲಹೆ ನೀಡಿದರು.