ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ 'ಕಾಂತಾರ' ಚಿತ್ರದ ದೈವವನ್ನು 'ದೆವ್ವ' ಎಂದು ಕರೆದು ನಟ ರಣ್ವೀರ್ ಸಿಂಗ್ ವಿವಾದ ಸೃಷ್ಟಿಸಿದ್ದರು. ರಣ್ವೀರ್ ಸೋಶಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿ, ಭಾವನೆಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸಿದ್ದಾರೆ.
ಗೋವಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಕಾಂತಾರ-1 ಸಿನಿಮಾದಲ್ಲಿನ ರಿಷಬ್ ಶೆಟ್ಟಿ ಪಾತ್ರದ ಅನುಕರಣೆ ವೇಳೆ ದೈವಕ್ಕೆ ದೆವ್ವ ಎಂದು ನಟ ರಣ್ವೀರ್ ಸಿಂಗ್ ಹೇಳಿದ್ದರು. ತಮ್ಮ ವರ್ತನೆ ಮತ್ತು ಹೇಳಿಕೆಗೆ ಇದೀಗ ರಣ್ವೀರ್ ಸಿಂಗ್ ಸೋಶಿಯಲ್ ಮೀಡಿಯಾ ಮೂಲಕ ಸ್ಪಷ್ಟನೆ ನೀಡಿದ್ದಾರೆ.
24
ರಣ್ವೀರ್ ಸಿಂಗ್ ಹೇಳಿದ್ದೇನು?
ಕಾಂತಾರ-1 ಸಿನಿಮಾದಲ್ಲಿನ ರಿಷಭ್ ಶೆಟ್ಟಿಯವರ ಅದ್ಭುತವಾದ ಅಭಿನಯ ತೋರಿಸೋದು ನನ್ನ ಉದ್ದೇಶವಾಗಿತ್ತು. ಈ ರೀತಿಯಾಗಿ ನಟಿಸಲು ಎಷ್ಟು ಪರಿಶ್ರಮ ಬೇಕಾಗುತ್ತೆ ಎಂಬುವುದು ಓರ್ವ ನಟನಾಗಿ ನನಗೆ ಗೊತ್ತಿದೆ. ರಿಷಭ್ ನಟನೆಗೆ ಮೆಚ್ಚುಗೆ ಸೂಚಿಸಿದ್ದೇನೆ. ನಮ್ಮ ದೇಶದ ಪ್ರತಿಯೊಂದು ಸಂಸ್ಕೃತಿ, ಸಂಪ್ರದಾಯ ಮತ್ತು ನಂಬಿಕೆಯನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಯಾರ ಭಾವನೆಗಳಿಗೆ ನೋವುಂಟು ಮಾಡಿದ್ದರೆ, ನಾನು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ.
34
ದೂರು ದಾಖಲು
ನಟ ರಣ್ವೀರ್ ಸಿಂಗ್ ವಿರುದ್ಧ ಗೋವಾದಲ್ಲಿ ದೂರು ದಾಖಲಾಗಿದೆ. ಹಿಂದೂ ಜನಜಾಗೃತಿ ಸಮಿತಿ (ಎಚ್ಜೆಎಸ್) ಸಮಿತಿಯ ಪ್ರಮೋದ್ ತುಯೇಕರ್ ಮತ್ತು ದಿಲೀಪ್ ಶೆಟ್ಯೆ ಅವರು, ರಣ್ವೀರ್ ಪೂಜಿಸುವ ದೈವವನ್ನು ಸ್ತ್ರೀ ಪ್ರೇತ ಎಂದು ಅವಮಾನಿಸಿದ್ದಾರೆ ಎಂದು ಪಣಜಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.
ಗೋವಾದಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಸಿನಿಮೋತ್ಸವದ ಸಮಾರೋಪ ಸಮಾರಂಭದಲ್ಲಿ ರಣವೀರ್ ಸಿಂಗ್, ಕಾಂತಾರದಲ್ಲಿ ರಿಷಬ್ ಶೆಟ್ಟಿಯವರ ನಟನೆ ಹೊಗಳುತ್ತಾ, ವೇದಿಕೆ ಮೇಲೆಯೇ ಸಿನಿಮಾದ ದೈವದ ನಟನೆ ಅನುಕರಿಸಿದ್ದರು. ಅನುಕರಣೆ ಮಾಡುವ ಭರದಲ್ಲಿ ರಣವೀರ್ ಅವರು ದೈವದ ಅಭಿನಯವನ್ನು ‘ದೆವ್ವ’ ಎಂದು ಹೇಳಿ ವಿವಾದ ಸೃಷ್ಟಿಸಿಕೊಂಡಿದ್ದರು.