ಫೋಟೋ: ರವಿ, ಕನ್ನಡಪ್ರಭ
ಅಪಾರ ಸಂಖ್ಯೆಯಲ್ಲಿ ಪುನೀತ್ ರಾಜ್ಕುಮಾರ್ ಅಭಿಮಾನಿಗಳು ಕೂಡ ಸಮಾಧಿಗೆ ಭೇಟಿ ನೀಡಿ, ನಮನ ಸಲ್ಲಿಸುತ್ತಿದ್ದಾರೆ. ಕುಟುಂಬದವರು ಕೂಡಾ ಸಮಾಧಿಗೆ ಪೂಜೆ ಮಾಡಿದ್ದಾರೆ.
ಫೋಟೋ: ರವಿ, ಕನ್ನಡಪ್ರಭ
ಅಶ್ವಿನಿ ಪುನೀತ್ ರಾಜ್ಕುಮಾರ್, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರು ಇದರಲ್ಲಿ ಭಾಗಿಯಾಗಿದ್ದಾರೆ. ಅಲ್ಲದೇ, ಅಪ್ಪು ಆಪ್ತರು ಮತ್ತು ಸ್ನೇಹಿತರು ಕೂಡ ಜೊತೆಗೆ ಇದ್ದರು.
ಫೋಟೋ: ರವಿ, ಕನ್ನಡಪ್ರಭ
ಅಪ್ಪುಗೆ ಇಷ್ಟವಾದ ತಿಂಡಿ, ತಿನಿಸುಗಳನ್ನು ಇಟ್ಟು ಕುಟುಂಬಸ್ಥರು ಸಮಾಧಿ ಮುಂದೆ ಪೂಜೆ ಮಾಡಿದ್ದಾರೆ. ಕಂಠೀರವ ಸ್ಟುಡಿಯೊ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಫೋಟೋ: ರವಿ, ಕನ್ನಡಪ್ರಭ
ಸಮಾಧಿ ಬಳಿ ಒಂದು ಲಕ್ಷಕ್ಕೂ ಹೆಚ್ಚು ಜನರು ಆಗಮಿಸಿದ್ದು ಪುಣ್ಯತಿಥಿ ಹಿನ್ನೆಲೆಯಲ್ಲಿ ಆಗಮಿಸುವವರಿಗೆ ಉಪಹಾರ, ಊಟ, ನೀರಿನ ವ್ಯವಸ್ಥೆ ಏರ್ಪಡಿಸಲಾಗಿತ್ತು.
ಫೋಟೋ: ರವಿ, ಕನ್ನಡಪ್ರಭ
ಪುನೀತ್ ರಾಜ್ಕುಮಾರ್ ಸಮಾಧಿ ಇರುವ ಬೆಂಗಳೂರಿನ ಕಂಠೀರವ ಸ್ಟುಡಿಯೋ ಹೊರಗೆ ಅಪ್ಪು ಅವರ ವಿಶೇಷವಾದ ಕಟೌಟ್ಗಳನ್ನು ಹಾಕಲಾಗಿತ್ತು.
ಫೋಟೋ: ರವಿ, ಕನ್ನಡಪ್ರಭ
ಪುನೀತ್ ಅಭಿನಯದ ಸಿನಿಮಾಗಳ ಕಟೌಟ್ ಜೊತೆಯಲ್ಲಿ ಡಾ. ರಾಜ್ಕುಮಾರ್ ಹಾಗೂ ಪಾರ್ವತಮ್ಮ ಅವರ ಕಟೌಟ್ಗಳನ್ನೂ ಹಾಕುವ ಮೂಲಕ ಅಭಿಮಾನ ಮೆರೆಯಲಾಗಿತ್ತು.
ಫೋಟೋ: ರವಿ, ಕನ್ನಡಪ್ರಭ
ಅಪ್ಪು ಸಮಾಧಿಗೆ ಪೂಜೆ ಮಾಡಿದ ನಂತರ ಕುಟುಂಬ ಮನೆಗೆ ಮರಳಿ ವರ್ಷದ ಕಳಸ ಪೂಜೆಯನ್ನು ಮಾಡಿದ್ದಾರೆ. ಬಳಿಕ ಬಂಧು ಬಳಗಕ್ಕೆ ಭೋಜನ ವ್ಯವಸ್ಥೆ ಮಾಡಲಾಗಿತ್ತು.
ಫೋಟೋ: ರವಿ, ಕನ್ನಡಪ್ರಭ
ಪುನೀತ್ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳಿಗೆ ಅನ್ನದಾನವನ್ನು ಏರ್ಪಡಿಸಲಾಗಿತ್ತು. ಎಷ್ಟೇ ಸಂಖ್ಯೆಯಲ್ಲಿ ಅಭಿಮಾನಿಗಳು ಬಂದರೂ ಊಟದ ವ್ಯವಸ್ಥೆ ಮಾಡಲು ಸಿದ್ಧತೆಯನ್ನು ಮಾಡಲಾಗಿತ್ತು.
ಫೋಟೋ: ರವಿ, ಕನ್ನಡಪ್ರಭ
ಅಪ್ಪು ಮೊದಲ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೊ ಬಳಿ ಇಂದು ದಿನವಿಡೀ ಗೀತ ನಮನ ಕಾರ್ಯಕ್ರಮವಿದ್ದು, ಕನ್ನಡ ಚಿತ್ರರಂಗದ ಕಲಾವಿದರು, ಅಪ್ಪು ಅಭಿಮಾನಿಗಳು ಇದರಲ್ಲಿ ಭಾಗಿಯಾಗುತ್ತಿದ್ದಾರೆ.