Bigg Bossನಲ್ಲಿ ಅವಕಾಶ ಸಿಗಬೇಕೆಂದ್ರೆ ಏನೇನು ಪ್ರೊಸೆಸ್​ ಇರತ್ತೆ? ತುಕಾಲಿ ಮಾನಸಾ ಏನಂದ್ರು ಕೇಳಿ...

Published : Sep 01, 2025, 08:53 PM IST

ಬಿಗ್​ಬಾಸ್​ನ 12ನೇ ಸೀಸನ್​ ಇನ್ನೇನು ಶುರುವಾಗಲಿದೆ. ಹಲವರಿಗೆ ಈ ಷೋನಲ್ಲಿ ಭಾಗವಹಿಸಬೇಕು ಎನ್ನುವ ಹಂಬಲ ಇರುತ್ತದೆ. ಆದರೆ ಬಹುತೇಕರಿಗೆ ಇದು ಕನಸಿನ ಮಾತೇ. ಇದೀಗ ತುಕಾಲಿ ಮಾನಸಾ ಅವರು ಏನಂದಿದ್ದಾರೆ ಕೇಳಿ... 

PREV
18
ಫೇಮಸ್​ ಆದ ತುಕಾಲಿ ದಂಪತಿ

 Colors Kannadaದ 'ಬಿಗ್ ಬಾಸ್' (Bigg Boss) ಕನ್ನಡ ಸೀಸನ್ 10ರಲ್ಲಿ ಸ್ಪರ್ಧಿಯಾಗಿ ತುಕಾಲಿ ಸಂತೋಷ್​ ಸಾಕಷ್ಟು ಫೇಮಸ್​ ಆಗಿದ್ರು, ಜೊತೆಗೆ ಒಂದಿಷ್ಟು ಒಳ್ಳೆಯ ಹೆಸರುಗಳನ್ನೂ ಗಳಿಸಿದ್ದಾರೆ. ಫೈನಲ್​ ತನಕ ಹೋಗಿದ್ದರು.

28
ಐದನೇ ವಾರದಲ್ಲಿ ಎಲಿಮಿನೇಟ್​

ಆದರೆ ಅವರ ಪತ್ನಿ ಮಾನಸಾ (Tukali Manasa) ಐದೇ ವಾರದಲ್ಲಿ ವಾಪಸ್​ ಆಗಿದ್ದರು. ಮಾನಸಾ ಅವರು ಪತಿ ಸಂತೋಷ್​ ರೀತಿಯಲ್ಲಿಯೇ ಅಂತಿಮ ಕ್ಷಣದವರೆಗೂ ಇರುತ್ತಾರೆ ಎಂದೇ ಅವರ ಅಭಿಮಾನಿಗಳು ಆರಂಭದಲ್ಲಿ ಅಂದುಕೊಂಡದ್ದು ಇದೆ. ಆದರೆ ಅವರು ಎಲಿಮಿನೇಟ್​ ಆಗಿ ಬಂದರು.

38
ಮಾತುಗಳೇ ಮುಳುವಾಯ್ತು

ಅವರ ಮಾತುಗಳೇ ಅವರಿಗೆ ಮುಳುವಾಗಿದ್ದವು. ಇದೇ ಕಾರಣಕ್ಕೆ ಸೋಷಿಯಲ್​ ಮೀಡಿಯಾಗಳಲ್ಲಿಯೂ ಮಾನಸ ಅವರು ಆದಷ್ಟು ಟ್ರೋಲ್​ ಇನ್ಯಾರೂ ಆಗಿಲ್ಲ ಎನ್ನಬಹುದೇನೋ. ಅದೇನೇ ಇದ್ದರೂ ಬಿಗ್​ಬಾಸ್​ ಮನೆಯೊಳಕ್ಕೆ ಕಾಲಿಟ್ಟು ಹೊರಕ್ಕೆ ಬಂದರು ಎಂದರೆ ಅವರಿಗೆ ಸಿಗುವಷ್ಟು ರಾಜಮರ್ಯಾದೆಯೇ ಬೇರೆ. ಬಿಗ್​ಬಾಸ್​ಗೆ ಹೋಗುವ ಮೊದಲೇ ಟಿವಿ ಷೋಗಳಿಂದಾಗಿ ತುಕಾಲಿ ಸಂತೋಷ್​ ಫೇಮಸ್​ ಆಗಿದ್ದರು, ಈಗ ಅವರ ಪತ್ನಿ ಮಾನಸ ಅವರೂ ಈಗ ಜೊತೆಯಾಗಿದ್ದಾರೆ.

48
ಪ್ರೊಸೀಜರ್​ ಬಗ್ಗೆ ಏನಂದ್ರು?

ಇದೀಗ ಅವರಿಗೆ ನ್ಯೂಸ್​ಬೀಟ್​ ಕನ್ನಡ ಚಾನೆಲ್​ನವರು ಬಿಗ್​ಬಾಸ್​ಗೆ ಹೋಗುವ ಪ್ರೊಸೆಸ್​ ಬಗ್ಗೆ ಕೇಳಿದ್ದಾರೆ. ಆದರೆ ಆ ಬಗ್ಗೆ ತಮಗೆ ಸರಿಯಾಗಿ ಏನೂ ಗೊತ್ತಿಲ್ಲ. ಅದೂ ಇದೂ ಇರುತ್ತೆ. ಆಮೇಲೆ 3-4 ಮೀಟಿಂಗ್​ ಇರುತ್ತದೆ. ನನಗೆ ಒಂದೇ ಮೀಟಿಂಗ್​ ಇತ್ತು. ಅದಕ್ಕೆ ಈ ಬಗ್ಗೆ ಸರಿಯಾಗಿ ಗೊತ್ತಿಲ್ಲ. ಸಂತುಗೆ ಕೇಳಿದ್ರೆ ಸರಿಯಾಗಿ ಗೊತ್ತಾಗತ್ತೆ ಎಂದಿದ್ದಾರೆ.

58
ಪೇಮೆಂಟ್​ ಕಾರಣ

ಕೆಲವು ಮೀಟಿಂಗ್​ ಆದ ಬಳಿಕವೂ ಕ್ಯಾನ್ಸಲ್​ ಆಗತ್ತಲ್ಲ, ಯಾಕೆ ಎಂದು ಪ್ರಶ್ನಿಸಿದಾಗ, ಅದಕ್ಕೆ ಏನೇನೋ ಕಾರಣಗಳು ಇರುತ್ತವೆ, ಪೇಮೆಂಟ್​ ಕೂಡ ಕಾರಣ ಆಗಬಹುದು ಎಂದಿದ್ದಾರೆ.

68
ಹೇಳಿಮಾಡಿಸಿದ ಜೋಡಿ

ಅಷ್ಟಕ್ಕೂ ಇವರ ಜೋಡಿ ಹೇಳಿಮಾಡಿಸಿದ್ದು ಎಂದೇ ಫೇಮಸ್ಸು. ಈ ಹಿಂದೆ ಸಂದರ್ಶನವೊಂದರಲ್ಲಿ ತುಕಾಲಿ ಸಂತೋಷ್​ ಅವರು ಪತ್ನಿ ಬಗ್ಗೆ ಮಾತನಾಡುತ್ತಾ, ಇಎಂಐ ತೀರಿಸಲು ಬಿಗ್​ಬಾಸ್​ಗೆ ಹೋಗಿದ್ಲು, ಆದರೆ ಐದೇ ವಾರಕ್ಕೆ ವಾಪಸ್​ ಬಂದಳು. ಮುಂದೆ ಸಮಸ್ಯೆ ಇದದ್ದೇ ಅಲ್ವಾ ಎಂದರು ಸಂತೋಷ್​​.

78
ಸಜೆಷನ್​ ತೆಗೆದುಕೊಂಡಿರಲಿಲ್ಲ

ಇದೇ ವೇಳೆ ತಾವು ಬಿಗ್​ಬಾಸ್​ ಒಳಗೆ ಹೋಗುವಾಗ ಸಂತೋಷ್​ (Tukali Santosh) ಅವರ ಸಜೆಷನ್​ ತೆಗೆದುಕೊಂಡಿರಲಿಲ್ಲ. ಅದೇ ಮಾಡಿದ ತಪ್ಪು ಎನ್ನಿಸತ್ತೆ. ಅವರ ಹಾಗೆ ನಾನು ಆಗುವುದು ಬೇಡ, ನನ್ನ ಸ್ಟೈಲ್​ನಲ್ಲಿಯೇ ನಾನು ಇರೋಣ ಅಂದುಕೊಂಡೆ. ಸಂತು ಕೂಡ ಹಾಗೇ ಹೇಳಿದ್ರು. ಆದ್ರೆ ಸಜೆಷನ್​ ತಗೋಬಿಕಿತ್ತೇನೋ ಎಂದರು.

88
ಬೇರೆಯವರಿಗೆ ಗೌರವ ಕೊಡಬೇಕು

ಇದೇ ವೇಳೆ, ಬಿಗ್​ಬಾಸ್​ನಿಂದ ಬೇರೆಯವರಿಗೆ ಗೌರವ ಕೊಡಬೇಕು, ಮಾತಿನ ಮೇಲೆ ನಿಗಾ ಇಡಬೇಕು ಎನ್ನುವುದನ್ನು ಕಲಿತೆ. ಯೋಚನೆ ಮಾಡಿ ಮಾತನಾಡಬೇಕು ಎನ್ನುವುದನ್ನು ಬಿಗ್​ಬಾಸ್​ ಕಲಿಸಿತು ಎಂದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

Read more Photos on
click me!

Recommended Stories