ಶ್ರೀ ಶಂಕರ `ಭಗವತ್ಪಾದರ ಸರ್ವೋ ಉತ್ಕೃಷ್ಠವಾದ ಮಹಿಮೆಯನ್ನು ತಿಳಿಸಬೇಕೆಂಬ ಉದ್ದೇಶದಿಂದ ಶ್ರೀ `ಭಾರತೀ ತೀರ್ಥ ಮಹಾಸ್ವಾಮಿಗಳು 2013 ರಲ್ಲಿ ಶೃಂಗೇರಿ ಪಟ್ಟಣದ ಹೊರವಲಯದ ಮಾರುತೀ ಬೆಟ್ಟದಲ್ಲಿ ಶ್ರೀ ಶಂಕರಾಚಾರ್ಯರ 32 ಅಡಿ ಎತ್ತರದ ಕುಳಿತಿರುವ `ಭಂಗಿಯ ಭವ್ಯವಾದ ಶಿಲಾಮಯ ಮೂರ್ತಿಯನ್ನು ಸ್ಥಾಪನೆ ಮಾಡಬೇಕೆಂದು ಸಂಕಲ್ಪ ಮಾಡಿದ್ದರು. ಇದೀಗ ಶಂಕರರ ಪ್ರತಿಮೆ ಜತೆಗೆ ಅವರ ಶಿಷ್ಯರಾದ ಜಗದ್ಗುರು ಶ್ರೀ ಸುರೇಶ್ವರಾಚಾರ್ಯ, ಪದ್ಮಪಾದಾಚಾರ್ಯ, ಹಸ್ತಾಮಲಕಾಚಾರ್ಯ, ತೋಟಕಾಚಾರ್ಯರ ಮೂರ್ತಿಗಳ ನಿರ್ಮಾಣ ಕಾರ್ಯ ಸಮಾಪ್ತವಾಗಿದೆ. ಇದರ ಜೊತೆಗೆ ವಿಜಯನಗರ ಸಾಮ್ರಾಜ್ಯ ಸ್ಥಾಪಕರಾದ ಪೀಠದ 12ನೇ ಅಪತಿಗಳಾದ ಶ್ರೀ ವಿದ್ಯಾರಣ್ಯರ ಮೂರ್ತಿಯ ನಿರ್ಮಾಣ, ವಸ್ತು ಪ್ರದರ್ಶನ ಮಾಡಲಾಗಿದೆ.